Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕರಿಗೆ, ಕೃಷಿಕರಿಗೆ ಕಾನೂನು ರೀತಿಯ...

ಕಾರ್ಮಿಕರಿಗೆ, ಕೃಷಿಕರಿಗೆ ಕಾನೂನು ರೀತಿಯ ಅವಕಾಶ: ಎಸ್.ಅಂಗಾರ

14 ದಿನ ಕೋವಿಡ್ ಕರ್ಫ್ಯೂ : ಸುಳ್ಯದಲ್ಲಿ ಸಚಿವರ ನೇತೃತ್ವದಲ್ಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ28 April 2021 11:19 PM IST
share
ಕಾರ್ಮಿಕರಿಗೆ, ಕೃಷಿಕರಿಗೆ ಕಾನೂನು ರೀತಿಯ ಅವಕಾಶ: ಎಸ್.ಅಂಗಾರ

ಸುಳ್ಯ: ರಾಜ್ಯದಲ್ಲಿ ಕೊರೋನ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಅದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ 14 ದಿನಗಳ ಕಾಲ ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಇದ್ದು, ಸುಳ್ಯದಲ್ಲಿ ಆರೋಗ್ಯ ವ್ಯವಸ್ಥೆ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಚಿವರ ನೇತೃತ್ವದಲ್ಲಿ ತಹಶೀಲ್ದಾರ್, ಪೊಲೀಸ್ ಮತ್ತು ಆರೋಗ್ಯ ಇಲಾಖೆಯವರಿದ್ದು ಸಭೆಯು ಬುಧವಾರ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ  ನಡೆಯಿತು.

ಆರೋಗ್ಯಕ್ಕೆ ಕುರಿತಂತೆ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್ ಹಾಗೂ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕರುಣಾಕರ ಕೆ.ವಿ.ಯವರನ್ನು ವಿಚಾರಿಸಿದರು. ತಾಲೂಕು ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆ ಇದೆ. ಆಕ್ಸಿಜನ್ 12 ದಿನಕ್ಕೆ ಬೇಕಾದಷ್ಟು ಸ್ಟಾಕ್ ಇದೆ ಎಂದು ಅಧಿಕಾರಿಗಳು ತಿಳಿಸಿದಾಗ, ಸಮಸ್ಯೆಯಾದರೆ ನನಗೆ ತಿಳಿಸಿ ವ್ಯವಸ್ಥೆ ಕಲ್ಪಿಸಲಾಗುವುದು. ಆದರೆ ಯಾರಿಗೂ ಚಿಕಿತ್ಸೆ ಸಿಗಲಿಲ್ಲ ಎಂಬ ಮಾತು ಬರಬಾರದು. ಮತ್ತು ಕೊರೋನ ಪ್ರಕರಣ ಇದ್ದರೆ ಸುಳ್ಯದಲ್ಲೇ ಚಿಕಿತ್ಸೆ ಕೊಡಿ. ಒಂದು ವೇಳೆ ಅಗತ್ಯ ಬಿದ್ದರೆ ಮಾತ್ರ ರೆಫರ್ ಮಾಡಿ ಎಂದು ಸಚಿವರು ಸೂಚನೆ ನೀಡಿದರು. ಕೊರೋನ ಪ್ರಕರಣದ ಕುರಿತು ಪ್ರತೀ ದಿನ ವರದಿ ಮಾಡುವಂತೆಯೂ ಸಚಿವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು.

ಕಾರ್ಮಿಕರಿಗೆ, ಕೃಷಿಕರಿಗೆ ಅವಕಾಶ:
ಸರಕಾರದ ಸುತ್ತೋಲೆಯಂತೆ ಕಾರ್ಮಿಕರಿಗೆ ಒಂದು ಕಡೆಯಿಂದ ಮತ್ತೊಂದು ಕಡೆಯಿಂದ ಕೆಲಸಕ್ಕೆ ಹೋಗುವುದಿದ್ದರೆ ಅವರಿಗೆ ತೊಂದರೆ ಕೊಡಬೇಡಿ. ಕೊಕ್ಕೊ ಇನ್ನಿತರ ಕೃಷಿ ಬೆಳೆ ಮಾರಾಟಕ್ಕೆ ಕೃಷಿಕರು ಬಂದಾಗ ಅವರಿಗೂ ಅವಕಾಶ ನೀಡಿ ಎಂದು ಸಭೆಯಲ್ಲಿದ್ದ ಸರ್ಕಲ್ ಇನ್‍ಸ್ಪೆಕ್ಟರ್ ನವೀಚಂದ್ರ ಜೋಗಿ ಹಾಗೂ ಎಸ್.ಐ. ಹರೀಶ್ ಎಂ.ಆರ್. ರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಅನಿತಾಲಕ್ಷ್ಮೀ, ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ನಗರ ಪಂಚಾಯಿತಿ ಅಧ್ಯಕ್ಷ ವಿನಯ ಕಂದಡ್ಕ, ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ. ಸದಸ್ಯ ರಾಧಾಕೃಷ್ಣ ಬೊಳ್ಳೂರು, ಸುಳ್ಯ ಎ.ಪಿ.ಎಂ.ಸಿ. ಅಧ್ಯಕ್ಷ ವಿನಯ ಮುಳುಗಾಡು , ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಸುನಿಲ್ ಕೇರ್ಪಳ, ನ.ಪಂ. ಸದಸ್ಯ ಸುಧಾಕರ ಕುರುಂಜಿಭಾಗ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಜಿನ್ನಪ್ಪ ಪೂಜಾರಿ, ಮಹೇಶ ರೈ ಮೇನಾಲ, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X