Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಧುಮೇಹಿಗಳು ಕೋವಿಡ್-19ಕ್ಕೆ ತುತ್ತಾಗುವ...

ಮಧುಮೇಹಿಗಳು ಕೋವಿಡ್-19ಕ್ಕೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆಯೇ?

ವಾರ್ತಾಭಾರತಿವಾರ್ತಾಭಾರತಿ30 April 2021 12:10 AM IST
share
ಮಧುಮೇಹಿಗಳು ಕೋವಿಡ್-19ಕ್ಕೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆಯೇ?

ಕಳೆದ ವರ್ಷ ಕೊರೋನವೈರಸ್ ಸಾಂಕ್ರಾಮಿಕವು ಸ್ಫೋಟಗೊಂಡಾಗಿನಿಂದಲೂ ಹೆಚ್ಚುವರಿ ಕಾಳಜಿಯನ್ನು ವಹಿಸುವಂತೆ ಇತರ ಕಾಯಿಲೆಗಳನ್ನು ಹೊಂದಿರುವವರಿಗೆ ತಜ್ಞರು ವಿಶೇಷ ಸೂಚನೆಯನ್ನು ನೀಡುತ್ತಲೇ ಇದ್ದಾರೆ. ಮಧುಮೇಹ,ಹೃದ್ರೋಗಗಳು,ಅಧಿಕ ರಕ್ತದೊತ್ತಡ ಮತ್ತು ಇಂತಹುದೇ ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ಇವರಲ್ಲಿ ಸೇರುತ್ತಾರೆ. ಕೊರೋನವೈರಸ್‌ನ ಎರಡನೇ ಅಲೆಯು ದೇಶವನ್ನು ಅಪ್ಪಳಿಸಿರುವ ಈ ಸಂಕಷ್ಟದ ಸಮಯದಲ್ಲಿ ಕೋಮಾರ್ಬಿಡಿಟಿ ಅಥವಾ ಇತರ ಆರೋಗ್ಯ ಸಮಸ್ಯೆಗಳು ಮತ್ತು ಕೋವಿಡ್-19 ಸೋಂಕು ಕುರಿತು ಕೇಳಲಾಗುವ ಸಾಮಾನ್ಯ ಪ್ರಶ್ನೆಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಉತ್ತರಗಳನ್ನು ನೀಡಿದೆ.

* ಹೃದಯರೋಗ,ಮಧುಮೇಹ ಅಥವಾ ಅಧಿಕ ರಕ್ತದೊತ್ತಡವನ್ನು ಹೊಂದಿರುವವರು ಕೊರೋನವೈರಸ್ ಸೋಂಕಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆಯೇ?

-ಇಲ್ಲ,ಈ ಸಮಸ್ಯೆಗಳನ್ನು ಹೊಂದಿರುವವರು ಸೋಂಕಿಗೆ ಗುರಿಯಾಗುವ ಹೆಚ್ಚಿನ ಅಪಾಯವಿಲ್ಲ.

* ಈ ರೋಗಗಳಿರುವ ವ್ಯಕ್ತಿಗಳಿಗೆ ಸೋಂಕು ತಗುಲಿದರೆ ತೀವ್ರ ಅನಾರೋಗ್ಯ ಅಥವಾ ತೊಂದರೆಗಳುಂಟಾಗುವ ಹೆಚ್ಚಿನ ಅಪಾಯವಿದೆಯೇ?

-ಕೋವಿಡ್-19 ಸೋಂಕುಪೀಡಿತರ ಪೈಕಿ ಶೇ.80ರಷ್ಟು ಜನರು ಉಸಿರಾಟ ಸೋಂಕಿನ (ಜ್ವರ,ಗಂಟಲು ಕೆರೆತ,ಕೆಮ್ಮು) ಸೌಮ್ಯ ಲಕ್ಷಣಗಳನ್ನು ಹೊಂದಿರುತ್ತಾರೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ. ಮಧುಮೇಹ,ಅಧಿಕ ರಕ್ತದೊತ್ತಡ ಮತ್ತು ದುರ್ಬಲ ಹೃದಯ ಸೇರಿದಂತೆ ಹೃದಯ ರೋಗಗಳನ್ನು ಹೊಂದಿರುವ ಕೆಲವರಲ್ಲಿ ತೀವ್ರ ಲಕ್ಷಣಗಳು ಮತ್ತು ತೊಂದರೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ಇಂತಹ ರೋಗಿಗಳು ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ.

* ಮಧುಮೇಹವನ್ನು ಹೊಂದಿರುವವರು ಕೋವಿಡ್-19ಕ್ಕೆ ಸುಲಭವಾಗಿ ತುತ್ತಾಗುತ್ತಾರೆಯೇ?

-ಸಾಮಾನ್ಯವಾಗಿ ಅನಿಯಂತ್ರಿತ ಮಧುಮೇಹವನ್ನು ಹೊಂದಿರುವವರು ಎಲ್ಲ ಸೋಂಕುಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ರಕ್ತದಲ್ಲಿ ಸಕ್ಕರೆಯ ಮಟ್ಟ ನಿಯಂತ್ರಣದಲ್ಲಿರುವ ಮಧುಮೇಹಿಗಳು ಸೋಂಕಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿಲ್ಲ,ಆದರೆ ಕೆಲವರು ಸೋಂಕಿಗೆ ತುತ್ತಾದರೆ ಹೆಚ್ಚು ತೀವ್ರ ಕಾಯಿಲೆಗೆ ಗುರಿಯಾಗಬಹುದು. ಹೀಗಾಗಿ ಮಧುಮೇಹಿಗಳು ತಮ್ಮ ರೋಗವನ್ನು ನಿಯಂತ್ರಣದಲ್ಲಿರಿಸಲು ತಮ್ಮ ಆಹಾರ ಕ್ರಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಸಾಧ್ಯವಾದಷ್ಟು ವ್ಯಾಯಾಮದ ಜೊತೆಗೆ ನಿಯಮಿತವಾಗಿ ಔಷಧಿಗಳನ್ನು ಸೇವಿಸುವ ಮೂಲಕ ಆಗಾಗ್ಗೆ ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ಮಧುಮೇಹಿಗಳು ಅನಾರೋಗ್ಯಕ್ಕೊಳಗಾದಾಗ ರಕ್ತದಲ್ಲಿಯ ಸಕ್ಕರೆ ಮಟ್ಟದ ಮೇಲೆ ನಿಯಮಿತ ನಿಗಾ,ಇನ್ಸುಲಿನ್ ಸೇರಿದಂತೆ ಔಷಧಿಗಳ ಹೊಂದಾಣಿಕೆ,ಆಗಾಗ್ಗೆ ಸಣ್ಣ ಪ್ರಮಾಣದಲ್ಲಿ ಆಹಾರ ಸೇವನೆ ಮತ್ತು ಅಧಿಕ ದ್ರವಗಳ ಸೇವನೆ ಅಗತ್ಯವಾಗಬಹುದು. ಮಧುಮೇಹ,ಅಧಿಕ ರಕ್ತದೊತ್ತಡ ಮತ್ತು ಹೃದಯ ರೋಗಗಳನ್ನು ಹೊಂದಿರುವವರು ಸೌಮ್ಯ ಸ್ವರೂಪದ ಸೋಂಕಿನ ಲಕ್ಷಣಗಳಿದ್ದರೂ ಮೊದಲಿನಂತೆ ಎಲ್ಲ ಔಷಧಿಗಳನ್ನು ನಿಯಮಿತವಾಗಿ ಸೇವಿಸಬೇಕು ಎನ್ನುತ್ತಾರೆ ತಜ್ಞರು. ನಿಮ್ಮ ವೈದ್ಯರು ಸೂಚಿಸಿದ ಹೊರತು ಯಾವುದೇ ಔಷಧಿಯ ಸೇವನೆಯನ್ನು ನಿಲ್ಲಿಸಬೇಡಿ,ನಿಮ್ಮ ವೈದ್ಯರನ್ನು ಭೇಟಿಯಾಗಲು ತಕ್ಷಣಕ್ಕೆ ಸಾಧ್ಯವಿಲ್ಲದಿದ್ದರೆ ನಿಮ್ಮ ಅಧಿಕ ರಕ್ತದೊತ್ತಡ,ಮಧುಮೇಹ ಮತ್ತು ಹೃದ್ರೋಗಗಳ ಔಷಧಿಗಳ ಸೇವನೆಯನ್ನು ಮುಂದುವರಿಸಿ. ಕೊಲೆಸ್ಟ್ರಾಲ್‌ನ್ನು ನಿಯಂತ್ರಿಸುವ ಔಷಧಿಗಳ (ಸ್ಟಾಟಿನ್‌ಗಳು) ಸೇವನೆಯನ್ನು ಅಗತ್ಯವಾಗಿ ಮುಂದುವರಿಸಬೇಕು.

* ಅಧಿಕ ರಕ್ತದೊತ್ತಡದ ಔಷಧಿಗಳು ಕೋವಿಡ್-19ರ ತೀವ್ರತೆಯನ್ನು ಹೆಚ್ಚಿಸುತ್ತವೆ ಎಂಬ ವರದಿಗಳಿವೆಯಲ್ಲ?

 - ರ್ಯಾಮಿಪ್ರಿಲ್,ಎನಲ್‌ಪ್ರಿಲ್‌ನಂತಹ ಎಸಿಇ ಇನಹಿಬಿಟರ್‌ಗಳು ಮತ್ತು ಲೊಸಾರ್ಟಿನ್,ಟೆಲ್ಮಿಸಾರ್ಟಾನ್‌ನಂತಹ ಆ್ಯಂಜಿಯೊಟೆನ್ಸಿನ್ ರಿಸೆಪ್ಟರ್ ಬ್ಲಾಕರ್‌ಗಳು ಈ ಎರಡು ಗುಂಪುಗಳಿಗೆ ಸೇರಿದ ಔಷಧಿಗಳು ಕೋವಿಡ್-19ಕ್ಕೆ ತುತ್ತಾಗುವ ಅಪಾಯವನ್ನು ಅಥವಾ ಅಥವಾ ತೀವ್ರತೆಯನ್ನು ಹೆಚ್ಚಿಸುತ್ತವೆ ಎನ್ನುವುದಕ್ಕೆ ಸದ್ಯಕ್ಕೆ ಯಾವುದೇ ಸಾಕ್ಷಾಧಾರವಿಲ್ಲ. ಈ ಔಷಧಿಗಳು ಹೃದಯದ ಕಾರ್ಯವನ್ನು ಬೆಂಬಲಿಸುವ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ ಹೃದಯ ವೈಫಲ್ಯದ ವಿರುದ್ಧ ಅತ್ಯಂತ ಪರಿಣಾಮಕಾರಿಯಾಗಿವೆ. ವೈದ್ಯರ ಸಲಹೆ ಪಡೆಯದೆ ನೀವಾಗಿಯೇ ಈ ಔಷಧಿಗಳ ಸೇವನೆಯನ್ನು ನಿಲ್ಲಿಸುವುದು ಹಾನಿಕಾರಕವಾಗಬಹುದು ಮತ್ತು ಹೃದಯದ ಸ್ಥಿತಿ ಇನ್ನಷ್ಟು ಬಿಗಡಾಯಿಸಬಹುದು.

    * ನೋವು ಅಥವಾ ಜ್ವರಕ್ಕೆ ಯಾವ ಔಷಧಿಯನ್ನು ತೆಗೆದುಕೊಳ್ಳಬೇಕು? -ಇಬುಪ್ರೊಫೆನ್‌ನಂತಹ ಸ್ಟಿರಾಯ್ಡೇತರ ಉರಿಯೂತ ನಿರೋಧಕ ಔಷಧಿಗಳು (ಎನ್‌ಎಸ್‌ಎಐಡಿ) ಕೋವಿಡ್-19 ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ ಎನ್ನುವುದು ಕಂಡುಬಂದಿದೆ. ಇಂತಹ ಔಷಧಿಗಳು ದುರ್ಬಲ ಹೃದಯವನ್ನು ಹೊಂದಿರುವವರಿಗೆ ಹಾನಿಯನ್ನುಂಟು ಮಾಡುತ್ತವೆ ಮತ್ತು ಮೂತ್ರಪಿಂಡಗಳಿಗೆ ಹಾನಿಯಾಗುವ ಅಪಾಯವನ್ನು ಹೆಚ್ಚಿಸಬಹುದು. ಹೀಗಾಗಿ ಎನ್‌ಎಸ್‌ಎಐಡಿಗಳ ಸೇವನೆಯನ್ನು ನಿವಾರಿಸಿ ಅಥವಾ ವೈದ್ಯರು ಸೂಚಿಸಿದರೆ ಮಾತ್ರ ತೆಗೆದುಕೊಳ್ಳಿ. ಪ್ಯಾರಾಸಿಟಮಲ್ ಅಗತ್ಯವಿದ್ದರೆ ಬಳಸಬಹುದಾದ ಅತ್ಯಂತ ಸುರಕ್ಷಿತ ನೋವು ನಿವಾರಕವಾಗಿದೆ. ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಿ ಹಾಗೂ ನಿಯಮಿತ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ. ಅಲ್ಲದೆ ಅಪಾಯವನ್ನುಂಟು ಮಾಡುವ ಕೆಲವು ಅಂಶಗಳತ್ತಲೂ ಗಮನ ನೀಡಬೇಕು. ಧೂಮ್ರಪಾನ ಮತ್ತು ಮದ್ಯಪಾನವನ್ನು ನಿವಾರಿಸಿ. ನಿಮ್ಮ ರಕ್ತದೊತ್ತಡ ಮತ್ತು ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X