Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಸಿಕೆ ಪೂರೈಕೆಯಾಗಿಲ್ಲ, ಆಸ್ಪತ್ರೆ-...

ಲಸಿಕೆ ಪೂರೈಕೆಯಾಗಿಲ್ಲ, ಆಸ್ಪತ್ರೆ- ಲಸಿಕಾ ಕೇಂದ್ರಗಳಿಗೆ ಈಗಲೇ ಬರಬೇಡಿ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ30 April 2021 11:04 AM IST
share
ಲಸಿಕೆ ಪೂರೈಕೆಯಾಗಿಲ್ಲ, ಆಸ್ಪತ್ರೆ- ಲಸಿಕಾ ಕೇಂದ್ರಗಳಿಗೆ ಈಗಲೇ ಬರಬೇಡಿ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಎ. 30: `ರಾಜ್ಯದಲ್ಲಿ ನಾಳೆಯಿಂದ (ಮೇ 1 ರಿಂದ) 18 ವರ್ಷದಿಂದ 44 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಲು ಹೆಸರು ನೋಂದಣಿ ಮಾಡಿಕೊಳ್ಳಲು ಸರಕಾರ ಕೋರಿತ್ತು. ಆದರೆ, ಲಸಿಕೆ ಪೂರೈಕೆ ಕುರಿತು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಹೀಗಾಗಿ ನೋಂದಣಿ ಮಾಡಿಕೊಂಡಿರುವವರು ಆಸ್ಪತ್ರೆಗೆ ಅಥವಾ ಲಸಿಕಾ ಕೇಂದ್ರಗಳಿಗೆ ಈಗಲೇ ಬರುವುದು ಬೇಡ' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಇಲ್ಲಿನ ಸದಾಶಿವನಗರದಲ್ಲಿನ ತನ್ನ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೆರಂ ಇನ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶಿಲ್ಡ್ ಲಸಿಕೆಯನ್ನು ಇನ್ನೂ ಪೂರೈಕೆ ಮಾಡದೆ ಇರುವುದರಿಂದ ನಾಳೆಯಿಂದ ನಡೆಯಬೇಕಿದ್ದ ಲಸಿಕೆ ಅಭಿಯಾನವನ್ನು ಮುಂದೂಡಲಾಗಿದೆ. ಸೆರಂ ಇನ್ಟಿಟ್ಯೂಟ್ ತಿಂಗಳಲ್ಲಿ ಸುಮಾರು 5 ರಿಂದ 6 ಕೋಟಿ ಡೋಸ್ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದೆ. ಅದೇ ರೀತಿ ಭಾರತ್ ಬಯೋಟೆಕ್ 1 ರಿಂದ 1.25 ಲಕ್ಷ ಕೋಟಿ ಡೋಸ್ ತಯಾರು ಮಾಡುವ ಸಾಮರ್ಥ್ಯ ಹೊಂದಿದೆ. ಆದರೆ, ಲಸಿಕೆ ಲಭ್ಯತೆ ಇನ್ನೂ ಕೆಲ ದಿನಗಳಾಗುವ ಸಾಧ್ಯತೆಗಳಿವೆ ಎಂದು ಅವರು ವಿವರಣೆ ನೀಡಿದರು.

ಕೋವಿಡ್ ಲಸಿಕೆ ನೀಡಲು ಯಾವ ದಿನದಿಂದ ಆರಂಭವಾಗಬಹುದು ಎಂಬುವುದನ್ನು ನಾನು ಹೇಳಲ್ಲ. ಸರಕಾರಕ್ಕೆ ಇದನ್ನು ಅಂದಾಜು ಮಾಡಿ ಹೇಳಲು ಸಾಧ್ಯವಿಲ್ಲ. ಕಂಪೆನಿ ಅಧಿಕೃತವಾಗಿ ಮಾಹಿತಿ ಹಂಚಿಕೆ ಮಾಡಿದ ಬಳಿಕ ರಾಜ್ಯದ ಜನರಿಗೆ ತಿಳಿಸಲಾಗುವುದು. ಆದರೆ, ಸತತ ಪ್ರಯತ್ನ ಮುಂದುವರಿದಿದೆ. ಒತ್ತಡ ಹೇರಿ ಆದಷ್ಟು ಶೀಘ್ರದಲ್ಲಿ ರಾಜ್ಯ ಲಸಿಕೆ ತರಿಸಿಕೊಳ್ಳುವುದು ನಮ್ಮ ಧ್ಯೇಯವಾಗಿದೆ ಎಂದು ಸುಧಾಕರ್ ತಿಳಿಸಿದರು.

18 ವರ್ಷ ಮೇಲ್ಪಟ್ಟು 44 ವರ್ಷದೊಳಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡುತ್ತೇವೆಂದು ಹೇಳಿದ್ದೇವೆ. ಅದರಲ್ಲಿ ಯಾವುದೇ ಗೊಂದಲ ಬೇಡ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬಹುದು. 99 ಲಕ್ಷ ನೋಂದಣಿ ಆದ ಪೈಕಿ 95 ಲಕ್ಷ ಲಸಿಕೆ ಈಗಾಗಲೇ ನೀಡಿದ್ದೇವೆ. ಕೇಂದ್ರ ಸರಕಾರದ ಜೊತೆ ಸಂಪರ್ಕದಲ್ಲಿದ್ದು, ಮನವಿ ಮಾಡಿದ್ದೇವೆ. ಆರು ಲಕ್ಷ ಡೋಸ್ ಇದೆ. ಎಲ್ಲೂ ಸ್ಥಗಿತ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ಹೈಕೋರ್ಟ್ ಪ್ರಶಂಸೆ: ದೇಶದಲ್ಲೆ ಕೋವಿಡ್ ನಿರ್ವಹಣೆ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರವನ್ನು ಪ್ರಶಂಸಿಸಿದೆ. ಕೋವಿಡ್ ಸೋಂಕಿನ ಸರಪಳಿ ಕಡಿತಕ್ಕೆ ರಾಜ್ಯ ಸರಕಾರ ಕೊರೋನ ಕರ್ಫ್ಯೂ ಹೇರಿದೆ. ಜನರು ಅದಕ್ಕೆ ಸಹಕಾರ ನೀಡಬೇಕು. ಸೋಂಕಿನಿಂದ ನಾನು ಮತ್ತು ನನ್ನವರ ರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬರಿಗೂ ಇರಬೇಕು ಎಂದು ಸಚಿವ ಸುಧಾಕರ್ ಇದೇ ವೇಳೆ ಸಲಹೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X