Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಹಾಯ ಮಾಡಲು ಆಗುತ್ತಿಲ್ಲ, ದಿಲ್ಲಿಯಲ್ಲಿ...

ಸಹಾಯ ಮಾಡಲು ಆಗುತ್ತಿಲ್ಲ, ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು: ಆಪ್ ಶಾಸಕನ ವೀಡಿಯೋ ಸಂದೇಶ

ವಾರ್ತಾಭಾರತಿವಾರ್ತಾಭಾರತಿ30 April 2021 12:30 PM IST
share
ಸಹಾಯ ಮಾಡಲು ಆಗುತ್ತಿಲ್ಲ, ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು: ಆಪ್ ಶಾಸಕನ ವೀಡಿಯೋ ಸಂದೇಶ

ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಕೋವಿಡ್ ಪರಿಸ್ಥಿತಿ ಬಿಗಡಾಯಿಸಿರುವ ನಡುವೆ ಆಡಳಿತ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಆಗ್ರಹಿಸಿದ್ದಾರೆ.

ಕಳೆದ ವರ್ಷ  ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿರುವಾಗ ಕಾಂಗ್ರೆಸ್ ಪಕ್ಷದಿಂದ ಇಕ್ಬಾಲ್ ಆಪ್‍ಗೆ  ವಲಸೆ ಬಂದಿದ್ದರು. ಈಗ  ವೀಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿ ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಅಗತ್ಯವೆಂದು ಅವರು ಹೇಳಿದ್ದಾರೆ. 

"ದಿಲ್ಲಿಯ ಪರಿಸ್ಥಿತಿಯಿಂದ ನನಗೆ ನೋವಾಗಿದೆ. ನನಗೆ ಬಹಳ ಚಿಂತೆಯಾಗಿದೆ, ನಿದ್ದೆ ಮಾಡಲು ಆಗುತ್ತಿಲ್ಲ. ಜನರಿಗೆ ಆಕ್ಸಿಜನ್ ಮತ್ತು ಔಷಧಿಗಳು ದೊರಕುತ್ತಿಲ್ಲ, ನನ್ನ ಸ್ನೇಹಿತ   ಕಷ್ಟದಲ್ಲಿದ್ದಾನೆ, ಆತ ಆಸ್ಪತ್ರೆಯಲ್ಲಿದ್ದಾನೆ ಆದರೆ ಆಕ್ಸಿಜನ್ ಅಥವಾ ವೆಂಟಿಲೇಟರ್ ದೊಕುತ್ತಿಲ್ಲ. ವೈದ್ಯರು ನೀಡಿದ ರೆಮ್ಡಿಸಿವಿರ್ ಪ್ರಿಸ್ಕ್ರಿಪ್ಶನ್ ನನ್ನ ಬಳಿ ಇದೆ ಆದರೆ ಅದನ್ನು ಎಲ್ಲಿಂದ ತರಲಿ? ಅವರ ಮಕ್ಕಳು ಅದಕ್ಕಾಗಿ ಅಲೆದಾಡುತ್ತಿದ್ದಾರೆ. ಇಂದು ಒಬ್ಬ ಶಾಸಕನೆಂದು ಕರೆಸಿಕೊಳ್ಳುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ, ಏಕೆಂದರೆ ನನಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. 

ಸರಕಾರ ಕೂಡ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ನಾನು ಆರು ಬಾರಿ ಶಾಸಕನಾಗಿ ಆಯ್ಕೆಯಾದವನು. ಅತ್ಯಂತ ಹಿರಿಯ ಶಾಸಕ. ಆದರೂ ಯಾರೂ ಸ್ಪಂದಿಸುತ್ತಿಲ್ಲ, ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ದಿಲ್ಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ನಾನು ದಿಲ್ಲಿ ಹೈಕೋರ್ಟಿಗೆ ಮನವಿ ಮಾಡಲು ಬಯಸುತ್ತೇನೆ. ಇಲ್ಲದೇ ಇದ್ದಲ್ಲಿ ರಸ್ತೆಯಲ್ಲಿ ಹೆಣಗಳೇ ಇರಲಿವೆ" ಎಂದು  ಅವರು ಹೇಳಿದ್ದಾರೆ.

ಹಿಂದೆ ಕಾಂಗ್ರೆಸ್ ಹೊರತಾಗಿ ಲೋಕ್ ಜನ ಶಕ್ತಿ, ಜನತಾ ದಳ, ಜೆಡಿ(ಎಸ್) ಹಾಗೂ ಜೆಡಿ(ಯು)ವಿನಲ್ಲೂ ಅವರು ಸಕ್ರಿಯರಾಗಿದ್ದರು. ಇಕ್ಬಾಲ್ ಅವರ ವೀಡಿಯೋ ಸಂದೇಶಕ್ಕೆ ಆಪ್ ಪ್ರತಿಕ್ರಿಯಿಸಿಲ್ಲ.

If a 6 Time Delhi MLA cannot Save his Close One , What will Common Man Do ; HC should Remove Kejriwal govt & Order President Rule for Saving People
~ AAP MLA (Shoib Iqbal)#KejriwalFailsDelhi #KejriwalOxygenChor pic.twitter.com/Hlo7cUMhM7

— Rohan Malhotra (@rohanneets) April 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X