Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಳಿವಿನಂಚಿನಲ್ಲಿರುವ ದೊಡ್ಡಳಿಲು ಬೇಟೆ:...

ಅಳಿವಿನಂಚಿನಲ್ಲಿರುವ ದೊಡ್ಡಳಿಲು ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿ

ವಾರ್ತಾಭಾರತಿವಾರ್ತಾಭಾರತಿ30 April 2021 2:57 PM IST
share
ಅಳಿವಿನಂಚಿನಲ್ಲಿರುವ ದೊಡ್ಡಳಿಲು ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿ

ಮಡಿಕೇರಿ, ಎ.30: ಅಳಿವಿನಂಚಿನಲ್ಲಿರುವ ದೊಡ್ಡಳಿಲು (ಹಾರುವ ಬೆಕ್ಕು) ನ್ನು ಬೇಟೆಯಾಡಿದ ಆರೋಪದಡಿ ವಿರಾಜಪೇಟೆ ಉಪವಿಭಾಗ ಅರಣ್ಯ ಸಂರಕ್ಷಣಾ ಇಲಾಖಾಧಿಕಾರಿಗಳು ಬೇಟೆಗಾರನೊಬ್ಬನನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಅಯ್ಯಂಗೇರಿ ಗ್ರಾಮದ ನಿವಾಸಿ ಕೆ.ಎನ್.ಸುನೀಲ್ ಬಂಧಿತ ಆರೋಪಿಯಾಗಿದ್ದು, ತೋಮರ ಗ್ರಾಮದ ಮುದ್ದು ಸೋಮಯ್ಯ ಹಾಗೂ ಪಾಲಂಗಾಲ ಗ್ರಾಮದ ಕರಿನೆರವಂಡ ಮೇದಪ್ಪ (ಹರೀಶ್) ನಾಪತ್ತೆಯಾಗಿದ್ದಾರೆ.

ಮಾಕುಟ್ಟ ರಕ್ಷಿತಾರಣ್ಯ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ದೊಡ್ಡಳಿಲು (ಹಾರುವ ಬೆಕ್ಕು) ಬೇಟೆಯಾಡಿ ಮಾಂಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ವನ್ಯಜೀವಿಯನ್ನು ಬೇಟೆಯಾಡಿ ಮನೆಗೆ ತಂದು ಸಾರು ಮಾಡಿರುವ ಬಗ್ಗೆ ಮಾಹಿತಿ ದೊರೆತ ಅರಣ್ಯ ಇಲಾಖೆ ಸಿಬ್ಬಂದಿಗಳು ಲೈನ್ ಮನೆಗೆ ದಾಳಿ ಮಾಡಿದರು. ಕೆ.ಎನ್.ಸುನೀಲ್‍ನನ್ನು ಬಂಧಿಸಿದ ಅಧಿಕಾರಿಗಳು ಮಾಂಸ, ಸಾರು ಮಾಡಿದ ಪಾತ್ರೆ, ಜೀವಿಯ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ ಕೋವಿ, ಕತ್ತಿ ಮತ್ತು ಚಾಕು ವಶಕ್ಕೆ ಪಡೆದರು.

2ನೇ ಆರೋಪಿ ಮುದ್ದು ಸೋಮಯ್ಯ ಹಾಗೂ 3ನೇ ಆರೋಪಿ ಕರಿನೆರವಂಡ ಮೇದಪ್ಪ ಹರೀಶ್ ದಾಳಿಯ ಸುಳಿವು ಅರಿತು ಸ್ಥಳದಿಂದ ಪರಾರಿಯಾಗಿದ್ದಾರೆ. ಇವರ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ವಲಯ ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿಗಳಾದ ವೈ.ಚಕ್ರಪಾಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರೋಷಿನಿ ಎ.ಜೆ. ಅವರುಗಳ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ.ದೇವಯ್ಯ ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳಾದ ಆನಂದ ಕೆ.ಆರ್, ಕುಮಾರಿ ಮೋನಿಷಾ ಎಂ.ಎಸ್, ಶ್ರೀಶೈಲ, ಸಚಿನ್, ಸಂಜೀವ್, ಅರಣ್ಯ ರಕ್ಷಕರಾದ ಮಾಲತೇಶ್ ಬಾಡಿಗಾರ್, ಸೋಮಯ್ಯ, ನಾಗರಾಜ್, ಹುಸೇನ್, ಚಂದ್ರಶೇಖರ, ಸಿಬ್ಬಂದಿಗಳಾದ ಪೊನ್ನಪ್ಪ, ಸಚಿನ್, ಪ್ರಕಾಶ್, ಮೊಣ್ಣಪ್ಪ, ಚಾಲಕ ಅಶೋಕ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X