Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆ.6ರಿಂದ 10ಗಂಟೆವರೆಗೆ ಅಂಗಡಿ ತೆರೆಯಲು...

ಬೆ.6ರಿಂದ 10ಗಂಟೆವರೆಗೆ ಅಂಗಡಿ ತೆರೆಯಲು ಕೋರಿ ವ್ಯಾಪಾರಿಗಳಿಂದ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ30 April 2021 6:20 PM IST
share
ಬೆ.6ರಿಂದ 10ಗಂಟೆವರೆಗೆ ಅಂಗಡಿ ತೆರೆಯಲು ಕೋರಿ ವ್ಯಾಪಾರಿಗಳಿಂದ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ

ಭಟ್ಕಳ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಅಗತ್ಯ ಜೀವನಾವಶ್ಯಕ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಆದೇಶವಿದ್ದರೂ ಕೂಡ ಕೆಲ ಅಂಗಡಿಕಾರರು ಕದ್ದುಮುಚ್ಚಿ ವ್ಯಾಪಾರ ನಡೆಸುತ್ತಿದ್ದು ಅದನ್ನು ಗಮನಿಸದೆ ನಿರ್ಲಕ್ಷ ವಹಿಸಿದ್ದ ಭಟ್ಕಳ ಪುರಸಭೆ ಆಡಳಿತ ಸಾರ್ವಜನಿಕರಿಂದ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಶುಕ್ರವಾರ ಬೀದಿಗಿಳಿದು ಅಂಗಡಿಗಳನ್ನು ಮುಚ್ಚಿಸಿದರು. 

ಈ ಸಂದರ್ಭದಲ್ಲಿ ಮುಖ್ಯ ಪೇಟೆಯಲ್ಲಿರುವ ಚಪ್ಪಲಿ, ಬಟ್ಟೆ ಮತ್ತಿತರರ ಅತಿಅವಶ್ಯಕವಲ್ಲದ ಅಂಗಡಿಕಾರರು ತಮಗೂ ಕೂಡ ಬೆ.6ರಿಂದ 10 ಗಂಟೆ ವರೆಗೆ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಒಪ್ಪದ ಅಧಿಕಾರಿಗಳು ಇದು ಸರ್ಕಾರದ ಆದೇಶವಾಗಿದ್ದು ಭಟ್ಕಳದಲ್ಲಿ ಇದರ ನಿಯಾಮವಳಿ ರೂಪಿಸುವುದಿಲ್ಲ ಎಂದು ತಿಳಿಸಿದ್ದು ಯಾವುದೇ ಕಾರಣಕ್ಕೂ ಇತರ ಅಂಗಡಿಗಳನ್ನು ತೆರೆಯಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಪ್ರಕಣರ ದಾಖಲಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದರು. ಅಲ್ಲದೆ ಅಂಗಡಿಕಾರರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡುವುದಕ್ಕಾಗಿ ಲೌಡ್ ಸ್ಪೀಕರ್ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲಾಗುತ್ತಿದೆ.

ಹಬ್ಬಕ್ಕೆಂದು ಮುಂಬೈ, ಬೆಂಗಳೂರು ಮೂಲಕ ಲಕ್ಷಾಂತರ ರೂಪಾಯಿ ಬಟ್ಟೆ, ಚಪ್ಪಲಿ ಮತ್ತಿತರ ವಸ್ತುಗಳು ಮುಂಗಡ ಹಣಕೊಟ್ಟು ಕರೀದಿಸಿದ್ದು ಈಗ ಕೋವಿಡ್ ಕರ್ಫ್ಯೂನಿಂದಾಗಿ ದೊಡ್ಡ ದೊಡ್ಡ ವ್ಯಾಪಾರಸ್ಥರು ಕೂಡ ಬೀದಿಗೆ ಬರುವಂತಾಗಿದೆ. ದಾಸ್ತಾನು ಮಾಡಿದ ಲಕ್ಷಾಂತರ ರೂ. ಬಂಡವಾಳ ಹೂಡಿದ ವಸ್ತುಗಳು ಸಕಾಲದಲ್ಲಿ ಗ್ರಾಹಕರಿಗೆ ತಲುಪಿಲ್ಲ ಎಂದಾದರೆ ವ್ಯಾಪಾರಸ್ಥ ತುಂಬಲಾರದ ನಷ್ಟವನ್ನು ಅನುಭವಿಸ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೆಲ ಸಮಯವಾದರೂ ವ್ಯಾಪಾರಕ್ಕೆ ಬಿಡುವು ನೀಡಬೇಕೆಂಬುವುದು ವ್ಯಾಪಾರಿಗಳ ವಾದ.
ಆದರೆ ಇತ್ತಿಚೆಗೆ ಬೆಂಗಳೂರು ಮತ್ತಿತರ ನಗರಗಳಿಂದ ಭಟ್ಕಳ ಬರುತ್ತಿರುವವರಿಂದ ಕೋವಿಡ್ ಸೋಂಕು ಬಲವಾಗಿ ಹರಡಿಕೊಳ್ಳುವ ಸಾಧ್ಯತೆ ಇದ್ದು ಇದಕ್ಕಾಗಿ ತಾಲೂಕಾಡಳಿತ ಎಲ್ಲ ರೀತಿಯ ಕಠಿಣ ಕ್ರಮಗಳನ್ನು ಜರಗಿಸಲು ಸಿದ್ದವಿದೆ. ಒಂದೆಡೆ ಈ ಸಾಂಕ್ರಮಿಕ ಮಹಾಮಾರಿ ಮನುಷ್ಯರನ್ನು ಅತ್ಯಂತ ಭಯಭೀತರನ್ನಾಗಿ ಮಾಡುತ್ತಿದ್ದರೆ ಮತ್ತೊಂದೆಡೆ ಲಾಕ್ಡೌನ್, ಕರ್ಫ್ಯೂ ನಂತಹ ಕಾನೂನುಗಳು ಮನುಷ್ಯನನ್ನು ಬದುಕಿರುವಾಗಲೇ ಸಾಯುವಂತೆ ಮಾಡುತ್ತಿವೆ ಎಂದು ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೆಲ ಪ್ರಜ್ಞಾವಂತ ನಾಗರೀಕರು ಮಾತ್ರ ಬೇರೆ ರೀತಿಯಲ್ಲಿ ಯೋಚಿಸುತ್ತಿದ್ದು ಜೀವಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ. ಆದ್ದರಿಂದ ಕೋವಿಡ್ ತಡೆಗೆ ಕಠಿಣ ಕ್ರಮ ಜರಗಿಸುವುದರ ಜೊತೆಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜರಗಿಸುವುದು ಬಹು ಮುಖ್ಯವಾಗಿದೆ. ಹೊರ ಜಿಲ್ಲೆಗಳಿಂದ ಬರುತ್ತಿರುವವರಿಂದ ಕೋವಿಡ್ ವ್ಯಾಪಕವಾಗಿ ಹರಡುವ ಎಲ್ಲ ಸಾಧ್ಯತೆಗಳಿವೆ. ಈಗಾಗಲೆ ಹಲವಾರು ಮನೆಗಳಲ್ಲಿ ಜನರು ಜ್ವರ ಶೀತ ಕೆಮ್ಮು, ನೆಗಡಿ ಎಂದು ಹೇಳಿಕೊಂಡು ಔಷಧ ಅಂಗಡಿಗಳಿಗೆ ಬರುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆ ಒಂದು ವೇಳೆ ಭಟ್ಕಳದಲ್ಲಿ ಕೋವಿಡ್ ಸ್ಪೋಟಗೊಂಡರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು ಹಾಗಾಗಿ ಯಾರಿಗೂ ವಿನಾಯಿತಿ ನೀಡದೆ ಸರ್ಕಾರದ ಕಟ್ಟುನಿಟ್ಟಿನ ಆದೇಶವನ್ನು ಪಾಲಿಸಬೇಕೆಂದು ತಾಲೂಕಾಡಳಿತವನ್ನು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X