Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ...

ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಪ್ರೋತ್ಸಾಹಿಸಿ: ಕೋಟ ಕರೆ

ವಾರ್ತಾಭಾರತಿವಾರ್ತಾಭಾರತಿ30 April 2021 8:14 PM IST
share
ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಪ್ರೋತ್ಸಾಹಿಸಿ: ಕೋಟ ಕರೆ

ಮಂಗಳೂರು, ಎ.30: ಜಿಲ್ಲೆಯ ಕೃಷಿ ಯೋಗ್ಯ ಭೂಮಿಗಳಲ್ಲಿ ಅದರಲ್ಲೂ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ಅಧಿಕಾರಿಗಳು ಪ್ರೋತ್ಸಾಹ ನೀಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

ಜಿಲ್ಲೆಯಲ್ಲಿ ಹಡೀಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವ ಕುರಿತು ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಡಿಲು ಭೂಮಿಯನ್ನು ಗ್ರಾಮವಾರು ಗುರುತಿಸುವುದರೊಂದಿಗೆ ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭೂ ಮಾಲಕರಿಗೆ ಕಷಿೃ ಚಟುವಟಿಕೆ ಕೈಗೊಳ್ಳಲು ಪ್ರೇರಿಪಿಸಬೇಕು. ಜಿಲ್ಲಾದ್ಯಂತ ಕೃಷಿ ಚಟುವಟಿಕೆಗಳಿಗೆ ಯೋಗ್ಯವಾದ ಭೂಮಿಯನ್ನು ಹಡಿಲು ಬಿಟ್ಟಿರುವ ಬಗ್ಗೆ ವಾರದೊಳಗೆ ಸರ್ವೇ ಕಾರ್ಯ ನಡೆಸಿ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಡಿಲು ಬಿಟ್ಟಿರುವ ಭೂಮಿಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವುದರಿಂದ ನೀರು ಇಂಗಿ ಅಂತರ್ಜಲ ವೃದ್ಧಿಯಾಗಲು ಸಹಾಯವಾಗಲಿದೆ. ಕೃಷಿ ಚಟುವಟಿಕೆಗಳಲ್ಲಿ ಯಾಂತ್ರೀಕರಣ ಅಳವಡಿಸಿಕೊಳ್ಳುವುದರ ಮೂಲಕ ಕಡಿಮೆ ವೆಚ್ಚದಲ್ಲಿ ಬೆಳೆಗಳನ್ನು ಬೆಳೆದು ಕೃಷಿಯನ್ನು ಲಾಭದಾಯಕವಾಗಿ ಮಾಡಲು ಸಾಧ್ಯ. ಅಲ್ಲದೆ ಕೃಷಿ ಕಾರ್ಮಿಕರ ಕೊರತೆಯನ್ನು ನೀಗಿಸಲಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಪಂ ಸಿಇಒ ಡಾ.ಕುಮಾರ್, ಶಾಸಕ ರಾಜೇಶ್ ನಾಯ್ಕ ಮತ್ತಿತ್ತರು ಉಪಸ್ಥಿತರಿದ್ದರು.

ಜಿಲ್ಲೆಯ 2.09 ಲಕ್ಷ ಕುಟುಂಬಗಳ ಪೈಕಿ 2.08 ಲಕ್ಷ ಭೂ ಹಿಡುವಳಿದಾರರು 1.78 ಲಕ್ಷ ಹೆಕ್ಟೇರ್ ಭೂಮಿಯನ್ನು ಹಿಡುವಳಿ ಹೊಂದಿದ್ದಾರೆ. ಕಳೆದ ಸಾಲಿನಲ್ಲಿ 37,817.50 ಎಕರೆ ಪ್ರದೇಶದಲ್ಲಿ 7.56,350 ಕ್ವಿಂಟಾಲ್ ಭತ್ತ ಬೆಳೆಯಲಾಗಿದೆ. ಮಂಗಳೂರು 2,125 ಹೆಕ್ಟೇರ್, ಬಂಟ್ವಾಳ 150 ಹೆಕ್ಟೇರ್, ಬೆಳ್ತಂಗಡಿ 85 ಹೆಕ್ಟೇರ್, ಪುತ್ತೂರು 20 ಹೆಕ್ಟೇರ್, ಸುಳ್ಯ 112.75 ಹೆಕ್ಟೇರ್ ಭತ್ತದ ಹಡಿಲು ಸಹಿತ ಜಿಲ್ಲೆಯಲ್ಲಿ ಭತ್ತದ ಹಡಿಲು ಭೂಮಿ 2,392.75 ಹೆಕ್ಟೇರ್ ಪ್ರದೇಶವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಎರಡು ವರ್ಷಕ್ಕೂ ಹೆಚ್ಚು ಕಾಲ ಕೃಷಿ ಭೂಮಿಯನ್ನು ಹಡಿಲು ಬಿಟ್ಟರೆ ಅಂತಹ ಕೃಷಿ ಭೂಮಿಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಇದಕ್ಕೆ ಯಾರೊಬ್ಬರೂ ಆಸ್ಪದ ನೀಡದೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X