Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮ್ಲಜನಕ ಬೇಕಿದ್ದರೆ, ಅರಳಿ ಮರದ...

ಆಮ್ಲಜನಕ ಬೇಕಿದ್ದರೆ, ಅರಳಿ ಮರದ ಅಡಿಯಲ್ಲಿ ಕುಳಿತುಕೊಳ್ಳಿ: ಉತ್ತರಪ್ರದೇಶದಲ್ಲಿ ಕೊರೋನ ರೋಗಿಗೆ ಪೊಲೀಸರ ಸಲಹೆ

ವಾರ್ತಾಭಾರತಿವಾರ್ತಾಭಾರತಿ30 April 2021 10:05 PM IST
share
ಆಮ್ಲಜನಕ ಬೇಕಿದ್ದರೆ, ಅರಳಿ ಮರದ ಅಡಿಯಲ್ಲಿ ಕುಳಿತುಕೊಳ್ಳಿ: ಉತ್ತರಪ್ರದೇಶದಲ್ಲಿ ಕೊರೋನ ರೋಗಿಗೆ ಪೊಲೀಸರ ಸಲಹೆ

ಪ್ರಯಾಗ್ರಾಜ್, ಎ. 29: ‘‘ನಿಮ್ಮ ಆಮ್ಲಜನಕದ ಮಟ್ಟವನ್ನು ಏರಿಸಲು ಅರಳಿ ಮರದ ಕೆಳಗೆ ಕುಳಿತುಕೊಳ್ಳಿ’’ ಎಂದು ಪೊಲೀಸರು ಆಮ್ಲಜನಕದ ಸಿಲಿಂಡರ್ಗಾಗಿ ಅಳುತ್ತಿರುವ ಕೊರೋನ ಸೋಂಕಿತೆ ಹಾಗೂ ಅವರ ಸಂಬಂಧಿಕರಿಗೆ ಹೇಳಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಶುಕ್ರವಾರ ನಡೆದಿದೆ. 

ಆಮ್ಲಜನಕದ ಕೊರತೆ ಬಗ್ಗೆ ಪ್ರತಿಕ್ರಿಯಿಸಿರುವ ಓರ್ವ ಕೊರೋನ ಸೋಂಕಿತನ ಸಂಬಂಧಿ, ಜನರಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗೆ ಬರುವುದಕ್ಕಿಂತ ಮನೆಯಲ್ಲಿ ಇರಲು ಕೋರಲಾಗುತ್ತಿದೆ. ಆದರೆ, ನಮಗೆ ಮನೆಯಲ್ಲಿ ಕೂಡ ಆಮ್ಲಜನಕ ಬೇಕು. ಅಲ್ಲಿ ಯಾರೊಬ್ಬರೂ ಆಮ್ಲಜನಕ ಪೂರೈಸುವುದಿಲ್ಲ ಎಂದು ಅಳುತ್ತಾ ಹೇಳಿದ್ದಾರೆ. ಆಮ್ಲಜನಕದ ಸಿಲಿಂಡರ್ಗಾಗಿ ಕೊರೋನ ಸೋಂಕಿತರ ಸಂಬಂಧಿಕರು ಈಗ ಉತ್ತರಪ್ರದೇಶ ಸರಕಾರದ ಸುಪರ್ದಿಯಲ್ಲಿರುವ ಪ್ರಯಾಗ್ರಾಜ್ನ ಬಿಜೆಪಿ ಶಾಸಕ ಹರ್ಷವರ್ಧನ್ ವಾಜಪೇಯಿ ಅವರ ಆಮ್ಲಜನಕ ಸ್ಥಾವರದ ಮುಂದೆ ಜಮಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸರನ್ನು ನಿಯೋಜಿಸಲಾಗಿದೆ. ನಾವು ಎಲ್ಲಾ ಕಡೆ ಹೋದೆವು. ಅವರು ನಮ್ಮನ್ನು ದೂರ ಓಡಿಸುತ್ತಿದ್ದಾರೆ. ಆಸ್ಪತ್ರೆ ಹಾಗೂ ಆಮ್ಲಜನಕದ ಸ್ಥಾವರಗಳಲ್ಲಿ ‘ಆಮ್ಲಜನಕ ಇಲ್ಲ’ ಎಂಬ ಬೋರ್ಡ್ ಹಾಕಲಾಗಿದೆ. ಯಾರಲ್ಲಾದರೂ ಮಾತನಾಡಲು ಅವಕಾಶ ನೀಡಿ ಎಂದು ನಾನು ಬೇಡಿಕೊಂಡೆ.  ಆದರೆ, ಪೊಲೀಸರು ನನ್ನನ್ನು ಓಡಿಸಿದರು ಎಂದು ಕೊರೋನ ಸೋಂಕಿಗೊಳಗಾಗಿ ಉಸಿರಾಡಲು ತೊಂದರೆ ಎದುರಿಸುತ್ತಿರುವ ತನ್ನ ತಂದೆಗಾಗಿ ಆಮ್ಲಜನಕ ಸಿಲಿಂಡರ್ಗೆ ಎದುರು ನೋಡುತ್ತಿರುವ ವ್ಯಕ್ತಿಯೋರ್ವ ಹೇಳಿದ್ದಾನೆ. 

ಮೆಡಾಂಟ ಹಾಗೂ ಅಪೊಲ್ಲೊ ಆಸ್ಪತ್ರೆಗಳು ಸೇರಿದಂತೆ ಪ್ರಯಾಗ್ರಾಜ್ನಿಂದ ಲಕ್ನೋದ ವರೆಗಿನ ಎಲ್ಲಾ ಆಸ್ಪತ್ರೆಗಳಲ್ಲಿ ಅವರನ್ನು ದಾಖಲಿಸಲು ಪ್ರಯತ್ನಿಸಿದೆ. ಆದರೆ, ಯಾವೊಂದು ಆಸ್ಪತ್ರೆಯೂ ದಾಖಲಿಸಿಕೊಳ್ಳಲಿಲ್ಲ. ನಾವು ಎಲ್ಲಿಗೆ ಹೋಗಬೇಕು ಎಂದು ಇನ್ನೋರ್ವ ಕೊರೋನ ಸೋಂಕಿತನ ಅಸಹಾಯಕ ಸಂಬಂಧಿ ಹೇಳಿದ್ದಾರೆ. ‘‘ನಿನ್ನ ತಾಯಿಯನ್ನು ಕರೆದುಕೊಂಡು ಹೋಗಿ ಅರಳಿ ಮರದ ಅಡಿಯಲ್ಲಿ ಕುಳ್ಳಿರಿಸು ಎಂದು ಪೊಲೀಸ್ ಓರ್ವ ನನ್ನಲ್ಲಿ ಹೇಳಿದ್ದಾನೆ’’ ಎಂದು ಮತ್ತೋರ್ವ ಕೊರೋನ ಸೋಂಕಿತನ ಸಂಬಂಧಿ ಹೇಳಿದ್ದಾರೆ. ಕೊರೋನ ರೋಗಿಗಳು ಎದುರಿಸುತ್ತಿರುವ ಆಮ್ಲಜನಕದ ಕೊರತೆ ನಿವಾರಿಸಲು ಲಕ್ನೋ ಸೇರಿದಂತೆ ಉತ್ತರಪ್ರದೇಶದ 75 ಜಿಲ್ಲೆಗಳಲ್ಲಿ 47ಕ್ಕೂ ಅಧಿಕ ಜಿಲ್ಲೆಗಳಲ್ಲಿ ಪಿಎಂ ಕೇರ್ಸ್ ಅಡಿಯಲ್ಲಿ ವೈದ್ಯಕೀಯ ಆಮ್ಲಜನಕದ ಸ್ಥಾವರಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಉತ್ತರಪ್ರದೇಶ ಸರಕಾರ ಹೇಳಿಕೆ ನೀಡಿದ ದಿನಗಳ ಬಳಿಕ ಈ ಘಟನೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X