Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ...

ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಉಚಿತವಾಗಿ ವಿತರಿಸಿ: ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 April 2021 10:28 PM IST
share
ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಉಚಿತವಾಗಿ ವಿತರಿಸಿ: ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು, ಎ.30: ಉತ್ತರ ಕರ್ನಾಟಕ ಸೇರಿದಂತೆ ಅನೇಕ ಜಿಲ್ಲೆಗಳ ಜನ ಬೇಸಿಗೆಯಲ್ಲಿ ನಗರಗಳಿಗೆ ವಲಸೆ ಹೋಗಿ ಕೂಲಿ ನಾಲಿ ಮಾಡಿ ಒಂದಿಷ್ಟು ಹಣ ಸಂಪಾದಿಸಿ ಅದನ್ನು ಮುಂಗಾರಿನ ಕೃಷಿ ಕೆಲಸಗಳಿಗೆ ವಿನಿಯೋಗಿಸುತ್ತಾರೆ. ಈಗ ಲಾಕ್ ಡೌನ್ ಹೇರಿಕೆ ಮಾಡಿರುವುದರಿಂದ ಅವರ ದುಡಿಮೆ ಸಂಪೂರ್ಣ ಹಾಳಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ದುಡಿಯಲೆಂದು ಬಂದವರು ಮರಳಿ ವಾಪಸ್ಸು ಹೋಗಿದ್ದಾರೆ. ಆದುದರಿಂದ, ಸರಕಾರ ಈ ಎಲ್ಲ ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಮುಂತಾದವುಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 1.30 ಕೋಟಿ ಬಿಪಿಎಲ್ ವರ್ಗಕ್ಕೆ ಸೇರಿದ ಕುಟುಂಬಗಳಿವೆ. ಈ ಕುಟುಂಬಗಳಿಗೆ ಸೇರಿದ ಬಹುಪಾಲು ಜನರು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿದ್ದಾರೆ. ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ಸಂಖ್ಯೆ ಸುಮಾರು 1.5 ಕೋಟಿಗಳಷ್ಟಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲ್ಲ ದುಡಿಯುವ ವರ್ಗಗಳು, ಸಮುದಾಯಗಳು ಹಾಗೂ ಬಿಪಿಎಲ್ ವರ್ಗದಡಿ ಬರುವ ಕುಟುಂಬಗಳು ದುಡಿಮೆ ಇಲ್ಲದೆ ಆರ್ಥಿಕ ಚೈತನ್ಯ ಕಳೆದುಕೊಂಡು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ ಅವರೆಲ್ಲರಿಗೂ ಪ್ರತಿ ತಿಂಗಳು ಕನಿಷ್ಠ 10 ಸಾವಿರ ರೂಪಾಯಿಗಳ ಆರ್ಥಿಕ ಪ್ಯಾಕೇಜನ್ನು ಸರಕಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 87 ಲಕ್ಷ ರೈತಾಪಿ ಕುಟುಂಬಗಳಿವೆ. ರೈತರಲ್ಲಿ ಸಣ್ಣ ,ಅತಿ ಸಣ್ಣ  ಮತ್ತು ಮಧ್ಯಮ ಪ್ರಮಾಣದ ಹಿಡುವಳಿಗಳನ್ನು ಹೊಂದಿರುವ ಕಟುಂಬಗಳು ಶೇ. 90 ರಷ್ಟಿವೆ. ಬಹುಪಾಲು ಈ ಕುಟುಂಬಗಳೂ ಬಿಪಿಎಲ್ ವರ್ಗದಡಿಯೇ ಇವೆ. ಹಾಗಾಗಿ ಈ ರೈತಾಪಿ ಕುಟುಂಬಗಳಿಗೂ ತಿಂಗಳಿಗೆ 10 ಸಾವಿರ ರೂ.ಗಳ ಪ್ಯಾಕೇಜನ್ನು ಘೋಷಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೃಷಿಕರಿಗೆ ಸಹಕಾರಿ ಬ್ಯಾಂಕುಗಳು, ವಾಣಿಜ್ಯ ಬ್ಯಾಂಕುಗಳ ಮೂಲಕ ಬಡ್ಡಿರಹಿತ ಕೃಷಿ ಸಾಲಗಳನ್ನು ಕನಿಷ್ಠ 5 ಲಕ್ಷ ರೂ.ಗಳವರೆಗೆ ನೀಡಬೇಕು. ದೇಶದ ದೊಡ್ಡ ದೊಡ್ಡ ಕಾರ್ಪೋರೇಟ್ ಕುಳಗಳಿಗೆ ಸಂಬಂಧಿಸಿದ ಸುಮಾರು 10.5 ಲಕ್ಷ ಕೋಟಿಗೂ ಹೆಚ್ಚು ಸಾಲವನ್ನು ವಸೂಲು ಮಾಡದೆ ಕೈ ಬಿಡಲಾಗಿದೆ. ಅಂಥದ್ದರಲ್ಲಿ ರೈತಾಪಿ ವರ್ಗಗಳಿಗೆ ನೀಡುವ ಕೆಲವು ಸಾವಿರ ಕೋಟಿಗಳಷ್ಟು ಬಡ್ಡಿ ರಹಿತ ಸಾಲದಿಂದ ದೇಶದ ಆರ್ಥಿಕತೆ ಮುಳುಗಿ ಹೋಗುವುದಿಲ್ಲ. ಬದಲಿಗೆ ಆರ್ಥಿಕತೆ ಸುಧಾರಣೆಯಾಗುತ್ತದೆ. ಆದುದರಿಂದ, ಬಡ್ಡಿ ರಹಿತ ಸಾಲವನ್ನು ನೀಡಿ ರೈತರ ನೆರವಿಗೆ ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ವ್ಯಾಪಕ ವಲಸೆ ಹೋಗುತ್ತಿರುವುದರಿಂದ ಕಳೆದ ವರ್ಷದಂತೆ ಈ ವರ್ಷವೂ ಕೃಷಿ ಕ್ಷೇತ್ರದ ಮೇಲೆ ಒತ್ತಡ ಹೆಚ್ಚುತ್ತದೆ. ಆದುದರಿಂದ, ಕೃಷಿ ಅವಶ್ಯಕ ವಸ್ತುಗಳಾದ ಬೀಜ, ಔಷಧ, ರಸಗೊಬ್ಬರಗಳ ಪೂರೈಕೆಯನ್ನು, ದಾಸ್ತಾನನ್ನು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿಸಬೇಕು. ರಸಗೊಬ್ಬರಗಳ ಬೆಲೆಗಳನ್ನು ಅದರಲ್ಲೂ ಮುಖ್ಯವಾಗಿ ಡಿ.ಎ.ಪಿ. ಕಾಂಪ್ಲೆಕ್ಸ್ ಗಳ ಬೆಲೆಗಳನ್ನು ಕ್ವಿಂಟಾಲಿಗೆ 1,250 ರೂ.ಗಳಿಂದ 1,400 ರೂ.ಗಳವರೆಗೆ ಹೆಚ್ಚಿಸಿ ಸರಕಾರ ಆದೇಶ ಮಾಡಿದೆ. ಈ ಆದೇಶವನ್ನು ಹಿಂಪಡೆದು ಹಳೆಯ ದರಗಳಲ್ಲೇ ಮಾರಾಟ ಮಾಡಬೇಕು. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ರಿಯಾಯಿತಿ ದರಗಳಲ್ಲಿ ಸಾಧ್ಯವಾದರೆ ಉಚಿತವಾಗಿ ರಸಗೊಬ್ಬರಗಳನ್ನು ವಿತರಿಸಬೇಕು ಎಂದು ಅವರು ಕೋರಿದ್ದಾರೆ.

ನಗರಗಳಿಂದ ಗ್ರಾಮಗಳಿಗೆ ವಲಸೆ ಹೊರಟ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಕನಿಷ್ಠ 150 ಮಾನವ ದಿನಗಳಷ್ಟು ಮತ್ತು ಅದಕ್ಕೂ ಹೆಚ್ಚು ಬೇಡಿಕೆ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು. ಹಿಂದೆ ನಿಮ್ಮದೇ ಸರಕಾರವಿದ್ದಾಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರಾಜ್ಯ ಸರಕಾರ ಪ್ರತಿಯೊಬ್ಬರಿಗೆ 150 ಮಾನವ ದಿನಗಳಿಗೆ ಹೆಚ್ಚಿಸಿ ಎಂದಾಗ ಅವರು ಅದಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ಈಗಲೂ ರಾಜ್ಯ ಸರಕಾರ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ರಾಜ್ಯದ ಬಿಜೆಪಿ ಸಂಸದರು ಈ ಕುರಿತು ಪ್ರಧಾನಿಯನ್ನು ಒತ್ತಾಯ ಮಾಡಿ ರಾಜ್ಯದ ಜನರ ನೆರವಿಗೆ ನಿಲ್ಲಬೇಕು. ಈ ಯೋಜನೆಯನ್ನು ಕೃಷಿಯ ವಿಸ್ತರಿತ ಪ್ರದೇಶಗಳಾದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಜನರಿಗೂ ವಿಸ್ತಿರಿಸಬೇಕು. ಅವರೂ ಸಹ ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ನರೇಗಾ ಯೋಜನೆಯ ಕೂಲಿ ದರಗಳನ್ನು ಹಣದುಬ್ಬರವನ್ನು ಆಧರಿಸಿ ಹೆಚ್ಚು ಮಾಡಬೇಕು ಎಂದು ಅವರು ಹೇಳಿದ್ದಾರೆ.

ಕೇರಳ ರಾಜ್ಯದಂತೆ ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯಗಳ, ಜೀವನಾವಶ್ಯಕ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್‍ಗಳನ್ನು ಒದಗಿಸಬೇಕು. ಅದರಲ್ಲಿ ಪ್ರತಿಯೊಬ್ಬರಿಗೆ ಕನಿಷ್ಠ 10 ಕೆ.ಜಿ ಅಕ್ಕಿ, ಗೋಧಿ, ಅಡುಗೆ ಎಣ್ಣೆ, ಬೇಳೆಕಾಳುಗಳು ಮುಂತಾದ ದಿನಸಿ ಪದಾರ್ಥಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಣ್ಣ, ಅತಿ ಸಣ್ಣ, ಗೃಹ ಮತ್ತು ಮಧ್ಯ ಪ್ರಮಾಣದ ಕೈಗಾರಿಕೆಗಳು ಕೇಂದ್ರದ ನಿರಂತರ ಗದಾ ಪ್ರಹಾರಗಳಿಂದ ಬಸವಳಿದು ಹೋಗಿವೆ. ಮೊದಲು ಕಷ್ಟದಲ್ಲಿರುವವರಿಗೆ ಉಸಿರಾಡಲು ವ್ಯವಸ್ಥೆ ಕಲ್ಪಿಸಬೇಕು. ಉತ್ತಮ ಸ್ಥಿತಿಯಲ್ಲಿರುವವರಿಗೂ ನೆರವಾಗಬೇಕು. ಆದುದರಿಂದ, ಈ ವಲಯಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸುಗಮವಾಗಿ ಸಿಗುವಂತೆ ನೋಡಿಕೊಳ್ಳಬೇಕು. ಇವರ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕುದುರುವವರೆಗೆ ಸಾಲದ ಮೇಲಿನ ಬಡ್ಡಿಗಳನ್ನು ಮನ್ನಾ ಮಾಡಬೇಕು ಎಂದು ಅವರು ಕೋರಿದ್ದಾರೆ.

ರಾಜ್ಯದಲ್ಲಿ ಯಥೇಚ್ಛವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಹಾಗಾಗಿ ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ, ಮಧ್ಯಮ ಪ್ರಮಾಣದ ಈ ಕಂಪೆನಿಗಳಿಗೆ ಉಚಿತವಾಗಿ ವಿದ್ಯುತ್ ಅನ್ನು ಪೂರೈಸಬೇಕು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಇಲ್ಲದಿದ್ದರೂ ಅದಾನಿ ಮುಂತಾದವರಿಗೆ ವರ್ಷಕ್ಕೆ ಅನಾಮತ್ತಾಗಿ ಸಾವಿರಾರು ಕೋಟಿಗಳನ್ನು ನೀಡಲಾಗುತ್ತಿದೆ. ಅದನ್ನು ನಿಲ್ಲಿಸಿ ಸರಕಾರ ಉದ್ಯೋಗ ಸೃಷ್ಟಿಸುವ ಈ ಕೈಗಾರಿಕೆಗಳ ನೆರವಿಗೆ ನಿಲ್ಲಬೇಕು. ಈ ಕಂಪೆನಿಗಳು ಉತ್ಪಾದಿಸಿ ರಫ್ತು ಮಾಡುವ ಉತ್ಪನ್ನಗಳಿಗೆ ರಫ್ತು ಶುಲ್ಕಕ್ಕೆ ವಿನಾಯಿತಿ ನೀಡಬೇಕು. ಆಮದು ಶುಲ್ಕವನ್ನೂ ಕಡಿಮೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಆಟೋ, ಕ್ಯಾಬ್, ಟ್ಯಾಕ್ಸಿ ಮುಂತಾದ ವಾಹನಗಳಿಗೆ ಕಳೆದ ಒಂದು ವರ್ಷದಿಂದ ಬಾಡಿಗೆ ಇಲ್ಲ. ಪ್ರಮುಖ ಪ್ರಯಾಣಿಕರಾಗಿದ್ದ ಐ.ಟಿ ಮುಂತಾದ ಕಂಪೆನಿಗಳ ಉದ್ಯೋಗಿಗಳು ಮನೆಗಳಿಂದಲೇ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ವಾಹನಗಳ ದುಡಿಮೆ ನೆಚ್ಚಿಕೊಂಡಿದ್ದ ಚಾಲಕರು, ಮಾಲಕರು ವಿಪರೀತ ನಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ವಲಯದ ಕೆಲವರು ನಷ್ಟದಿಂದ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿಗಳು ಬರುತ್ತಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರಕಾರ ಕಣ್ಣು ಮುಚ್ಚಿಕೊಂಡು ಮೌನವಾಗಿರುವುದು ಭೀಕರ ಅಮಾನವೀಯತೆಗೆ ಸಾಕ್ಷಿ. ನಿಮ್ಮ ಮತ್ತು ಕೇಂದ್ರದ ಆತ್ಮ ನಿರ್ಭರ ಪ್ಯಾಕೇಜು ಸಮರ್ಪಕವಾಗಿ ಈ ವರ್ಗಗಳಿಗೆ ತಲುಪಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ರಾಜ್ಯ ಸರಕಾರ ಘೋಷಿಸಿದ್ದ ಪ್ಯಾಕೇಜಿನಲ್ಲಿ ಕಾಲು ಭಾಗದಷ್ಟು ಚಾಲಕರಿಗೂ ಅನುಕೂಲವಾಗಿಲ್ಲ. ಸರಳ ನಿಯಮಗಳನ್ನು ಮಾಡಿ ಕಳೆದ ವರ್ಷ ಬಾಕಿಯಿರುವ ಎಲ್ಲರಿಗೂ ಪರಿಹಾರ ನೀಡಬೇಕು. ಈ ವರ್ಷ ಮತ್ತೆ ಲಾಕ್ ಡೌನ್ ಹೇರಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಪ್ರತಿ ತಿಂಗಳು ಕನಿಷ್ಠ 10 ಸಾವಿರ  ರೂ.ನೀಡುವ ಪ್ಯಾಕೇಜನ್ನು ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ವಾಹನಗಳ ಮಾಲಕರಿಗೆ ವಿಮೆಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ವಿವಿಧ ತೆರಿಗೆಗಳನ್ನು ಮನ್ನಾ ಮಾಡಬೇಕು. ಸಾಲದ ಅಸಲು ಮೊತ್ತದ ವಸೂಲಿಯನ್ನು ಮುಂದೂಡಬೇಕು. ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕಕ್ಕೆ ಸಂಬಂಧಿಸಿದಂತೆ ಸರಕಾರ ದೊಡ್ಡ ಮಟ್ಟದ ರಿಯಾಯಿತಿ ಕೊಡಿಸುವುದಾಗಿ ಘೋಷಿಸಿತು. ಆದರೆ ಅದು ಜಾರಿಗೆ ಬರಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ವರ್ಷ ಮತ್ತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಿಸಿವೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. ಸರಕಾರ ಮಧ್ಯ ಪ್ರವೇಶಿಸಿ ಶುಲ್ಕ ಮನ್ನಾ ಮಾಡಲು ಅಥವಾ ಶೇ.50ರಷ್ಟಾದರೂ ಕಡಿತಗೊಳಿಸಲು ಕಠಿಣ ನಿಯಮಾವಳಿಗಳನ್ನು ರೂಪಿಸಬೇಕು. ಈ ಎಲ್ಲ ಒತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಆರ್ಥಿಕ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ದುಡಿಯುವ ವರ್ಗಕ್ಕೆ, ರೈತರಿಗೆ ಪ್ಯಾಕೇಜ್ ನೀಡಿ

ರಾಜ್ಯದಲ್ಲಿ ಈಗ ಲಾಕ್‍ಡೌನ್ ಹೇರಿಕೆ ಮಾಡಿರುವುದರಿಂದ ಈಗಾಗಲೇ ಬಸವಳಿದು ಹೋಗಿರುವ ದುಡಿಯುವ ವರ್ಗದ ಜನರಿಗೆ ನ್ಯಾಯಯುತವಾದ ಆರ್ಥಿಕ ಪ್ಯಾಕೇಜನ್ನು ಸರಕಾರ ಘೋಷಿಸುವ ಮೂಲಕ ಬಿಕ್ಕಟ್ಟಿನಲ್ಲಿರುವ ರಾಜ್ಯದ ದುಡಿಯುವ ಸಮುದಾಯಗಳ ಸಂಕಷ್ಟವನ್ನು ಹೋಗಲಾಡಿಸಬೇಕು.

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X