ಕೋವಿಡ್ 3ನೇ ಅಲೆ ನಿಭಾಯಿಸಲು ತಜ್ಞರ ಸಮಿತಿ ರಚನೆ: ಸಿಎಂ ಬಿಎಸ್ವೈ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಮೇ 1: ಕೊರೋನ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಮಾಲೋಚನೆ ಸಭೆ ನಡೆಯಿತು.
ಸಭೆಯಲ್ಲಿ ಚರ್ಚಿಸಿದ ವಿಷಯಗಳು:
► ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಬಳಸಿಕೊಂಡು ಹೋಟೆಲ್ ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.
► ಸೆಂಟ್ರಲೈಜ್ಡ್ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್ ಗಳನ್ನು ಐಸಿಯು ಬೆಡ್ ಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.
► ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಕ್ತ ಇನ್ಸೆಂಟಿವ್ ನೀಡಲು ಕ್ರಮ ಕೈಗೊಳ್ಳುವುದು.
► ನರ್ಸಿಂಗ್ ಕೋರ್ಸ್ ಗಳ, ಫಾರ್ಮಸಿ ಕೋರ್ಸ್ ಗಳ, ಫಿಜಿಯೋಥೆರಪಿ ಕೋರ್ಸ್ ಗಳ , ಆಯುಷ್ ವೈದ್ಯ ಕೋರ್ಸ್ ಗಳ , ದಂತ ವೈದ್ಯಕೀಯ ಕೋರ್ಸ್ ಗಳ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು.
► ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಪರಿಶೀಲಿಸುದು.
► ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣ ರಹಿತ ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರಿಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವುದು.
► ವೈದ್ಯಕೀಯ ಕಾಲೇಜುಗಳ ಹಾಸ್ಟೇಲ್ ಗಳ ಸಾಮಾನ್ಯ ಬೆಡ್ ಗಳನ್ನು ಆಕ್ಸಿಜನೇಟೆಡ್ ಬೆಡ್ ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.
► ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವುದು.
► ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ ಕೈಗೊಳ್ಳುವುದು.
► ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು.
► 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
► ಕೋವಿಡ್ ಲಸಿಕೆಯನ್ನು ಹಾಕುವುದನ್ನು ವೇಗವರ್ಧನಗೊಳಿಸುವುದು.
► ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಇನ್ಸೆಂಟಿವನ್ನು ಹೆಚ್ಚಿಸಲು ನಿರ್ಧರಿಸಲಾಯಿತು.
► ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿಗಳು ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದು.
► ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.







.jpg)


