Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆಕ್ಕಿಲಾಡಿ: ಹೆದ್ದಾರಿ ಬದಿಯ ಮರ...

ನೆಕ್ಕಿಲಾಡಿ: ಹೆದ್ದಾರಿ ಬದಿಯ ಮರ ನಾಪತ್ತೆ !

ವಾರ್ತಾಭಾರತಿವಾರ್ತಾಭಾರತಿ1 May 2021 10:18 PM IST
share
ನೆಕ್ಕಿಲಾಡಿ: ಹೆದ್ದಾರಿ ಬದಿಯ ಮರ ನಾಪತ್ತೆ !

ಉಪ್ಪಿನಂಗಡಿ: 34 ನೆಕ್ಕಿಲಾಡಿ ವ್ಯಾಪ್ತಿಯ ಕರ್ವೇಲ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಮರವನ್ನು ಹಾಡಹಗಲೇ ಕಡಿಯಲಾಗಿದ್ದು, ಬಳಿಕ ಆ ಮರ ಅರಣ್ಯ ಇಲಾಖೆಯನ್ನು ತಲುಪದೇ ಅಲ್ಲಿಂದ ನಾಪತ್ತೆಯಾಗಿದ್ದು, ಹಲವು ಸಂಶಯಕ್ಕೆ ಕಾರಣವಾಗಿದೆ.

ಇಲ್ಲಿನ ಕರ್ವೇಲ್ ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಬೃಹತ್ ಮಾವಿನ ಮರವೊಂದಿತ್ತು. ಅದರ ಬುಡದಲ್ಲಿ ಹಾಕಿದ್ದ ತ್ಯಾಜ್ಯಕ್ಕೆ ಯಾರೋ ಬೆಂಕಿ ಕೊಟ್ಟಿದ್ದರಿಂದ ಮರದ ಬುಡಕ್ಕೂ ಬೆಂಕಿ ತಾಗಿ ಅದರ ಬುಡ ಸುಟ್ಟು ಹೋಗಿ ಮರ ಭಾಗಶಃ ಒಣಗಿ ಹೋಗಿತ್ತು. ಇದು ಹೆದ್ದಾರಿಗೆ ಬೀಳುವ ಅಪಾಯದಲ್ಲಿತ್ತು. ಇದನ್ನು ಗ್ರಾ.ಪಂ.ನವರು ಹೇಳಿದ್ದರೆಂದು ಸ್ಥಳೀಯ ಕೆಲವರು ಕಡಿದಿದ್ದಾರೆ ಎನ್ನಲಾಗಿದ್ದು, ಕಡಿದ ಮರ ಮಾತ್ರ ಅರಣ್ಯ ಇಲಾಖೆಯ ಸುಪರ್ದಿಗೆ ಮುಟ್ಟದೆ ಸ್ಥಳದಿಂದ ನಾಪತ್ತೆಯಾಗಿದೆ.

ಮರವು ಅರಣ್ಯ ಇಲಾಖೆಯನ್ನು ತಲುಪದೇ ನಾಪತ್ತೆಯಾಗಿರುವ ಬಗ್ಗೆ ಸ್ಥಳೀಯರಿಂದ ಇದೀಗ ಹಲವು ಆರೋಪಗಳು ಕೇಳಿ ಬರುತ್ತಿವೆ. ಆ ಮರ ಅರ್ಧ ಒಣಗಿದ್ದು, ಅರ್ಧದಷ್ಟು ಹಸಿಯಿತ್ತು. ಮೇಲ್ನೋಟಕ್ಕೆ ಮಾತ್ರ ಒಣಗಿದಂತೆ ಕಾಣುತ್ತಿತ್ತು. ಅದರ ಕಡಿದ ಬುಡ ನೋಡುವಾಗಲೇ ಇದು ಗೊತ್ತಾಗುತ್ತಿದೆ. ಆ ಮರವನ್ನು ಹಾಡಹಗಲೇ ಕಡಿದು ಉರುಳಿಸಲಾಗಿದೆ. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷರು, ಕೆಲ ಸದಸ್ಯರು ಸ್ಥಳದಲ್ಲಿದ್ದರು. ಅದನ್ನು ಮೂರು ತುಂಡು ಮಾಡಿ ಮಾರಾಟ ಮಾಡಲಾಗಿದೆ. ಇದರಲ್ಲಿ ಕೆಲವರ ಶಾಮೀಲಾತಿ ಇದೆ ಎಂದು ಆರೋಪಿಸುತ್ತಿದ್ದಾರಲ್ಲದೆ, ಕಟ್ಟಿಗೆಗಾಗಿ ಸಾರ್ವಜನಿಕ ಸ್ಥಳದಲ್ಲಿರುವ ಮರದ ಒಣಗಿದ ಗೆಲ್ಲು ಕಡಿದರೂ ಅರಣ್ಯ ಇಲಾಖೆಯವರು ಪ್ರಕರಣ ದಾಖಲಿಸಿದ ಉದಾಹರಣೆಗಳಿರುವಾಗ ಇಲ್ಲಿ ಇಷ್ಟು ದೊಡ್ಡ ಮರ ನಾಪತ್ತೆಯಾಗಿರುವ ಬಗ್ಗೆ ಅರಣ್ಯ ಇಲಾಖೆಯವರು ಮೌನ ವಹಿಸಿರುವುದೇಕೆ? ಈ ಮರ ಎಲ್ಲಿ ಹೋಯಿತೆಂದು ಅವರು ಯಾಕೆ ಪತ್ತೆ ಹಚ್ಚುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ 34 ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಎನ್., ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಮರವೊಂದು ಒಣಗಿ ಹೋಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಇದರಿಂದ ವಾಹನ ಸವಾರರಿಗೆ ಅಪಾಯವುಂಟಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕ ದೂರೊಂದು ನಮಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಅದನ್ನು ಕಡಿಯಲು ಹೇಳಿದ್ದೆವು. ನಾನು ನೋಡಿದ ಮಟ್ಟಿಗೆ ಅದರಲ್ಲಿ ಒಂದು ಆಪೆ ರಿಕ್ಷಾ ಆಗುವಷ್ಟು ಕೂಡಾ ಕಟ್ಟಿಗೆ ಇರಲಿಲ್ಲ. ಆ ಮೇಲೆ ಕಡಿದ ಮರವನ್ನು ಯಾರು ಕೊಂಡೋಗಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X