ಟಿಎಂಸಿ ಗೂಂಡಾಗಳು ನನ್ನ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಿದ್ದಾರೆ: ಕೇಂದ್ರ ಸಚಿವರ ಆರೋಪ

ಪಶ್ಚಿಮ ಮಿಡ್ನಾಪುರ: ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿನ ಗೂಂಡಾಗಳು ನನ್ನ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ವಿ.ಮುರಳೀಧರನ್ ಇಂದು ಆರೋಪಿಸಿದ್ದಾರೆ.
ಸಚಿವರು ಟ್ವಿಟರ್ನಲ್ಲಿ ಈ ಕುರಿತಂತ ವಿಡಿಯೋ ವೊಂದನ್ನು ಪೋಸ್ಟ್ ಮಾಡಿದ್ದಾರೆ.
ಟಿಎಂಸಿ ಗೂಂಡಾಗಳು ಪಶ್ಚಿಮ ಮಿಡ್ನಾಪುರದಲ್ಲಿ ನನ್ನ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದರು, ವಾಹನದ ಕಿಟಕಿಗಳನ್ನು ಒಡೆದರು, ವೈಯಕ್ತಿಕ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದರು ಎಂದು ಮುರಳೀಧರನ್ ಆರೋಪಿಸಿದ್ದಾರೆ.
TMC goons attacked my convoy in West Midnapore, broken windows, attacked personal staff. Cutting short my trip. #BengalBurning @BJP4Bengal @BJP4India @narendramodi @JPNadda @AmitShah @DilipGhoshBJP @RahulSinhaBJP pic.twitter.com/b0HKhhx0L1
— V Muraleedharan (@VMBJP) May 6, 2021
Next Story







