Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಡ್ ಬಗ್ಗೆ ಸುಳ್ಳು ಮಾಹಿತಿ ಟ್ವೀಟ್...

ಬೆಡ್ ಬಗ್ಗೆ ಸುಳ್ಳು ಮಾಹಿತಿ ಟ್ವೀಟ್ ಮಾಡಿ ಪ್ರಚಾರಕ್ಕೆ ಬಳಸಿಕೊಂಡರೇ ತೇಜಸ್ವಿ ಸೂರ್ಯ ?

ವಾರ್ತಾಭಾರತಿವಾರ್ತಾಭಾರತಿ6 May 2021 10:41 PM IST
share
ಬೆಡ್ ಬಗ್ಗೆ ಸುಳ್ಳು ಮಾಹಿತಿ ಟ್ವೀಟ್ ಮಾಡಿ ಪ್ರಚಾರಕ್ಕೆ ಬಳಸಿಕೊಂಡರೇ ತೇಜಸ್ವಿ ಸೂರ್ಯ ?

ಬೆಂಗಳೂರು, ಮೇ 6: ಸಂಸದ ತೇಜಸ್ವಿ ಸೂರ್ಯ ಮೇ 4ರಂದು ಕೋವಿಡ್ ವಾರ್ ರೂಂವೊಂದಕ್ಕೆ ದಾಳಿ ನಡೆಸಿ ಕೋವಿಡ್ ಹಾಸಿಗೆಗಳ ಬ್ಲಾಕಿಂಗ್ ದಂಧೆಯ ಕುರಿತು ಆರೋಪಿಸಿದ್ದರು. ಆ ಬಳಿಕ ತನ್ನ ಕಾರ್ಯದಿಂದಾಗಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಹಾಸಿಗೆ ಎಷ್ಟೆಷ್ಟು ಖಾಲಿ ಇವೆ ಎಂಬುದನ್ನು ಟ್ವೀಟ್ ಮೂಲಕ ಪ್ರಚಾರ ಮಾಡಿದ್ದರು. ಆದರೆ, ವಾಸ್ತವದಲ್ಲಿ ಅವರ ದಾಳಿಯ ಬಳಿಕ ಕೋವಿಡ್ ಹಾಸಿಗೆಗಳ ಲಭ್ಯತೆಯು ಇನ್ನಷ್ಟು ಕಡಿಮೆ ಆಗಿರುವುದು ಬೆಳಕಿಗೆ ಬಂದಿದೆ.

'ಸರ್ಕಾರಿ ಕೋಟಾ ಮೂಲಕ ಹಂಚಿಕೆ ಮಾಡುವ ಹಾಸಿಗೆಗಳ ಲಭ್ಯತೆ ಸಂಖ್ಯೆ ಶೂನ್ಯ ಎಂದು ಬಿಬಿಎಂಪಿ ವೆಬ್‌ಸೈಟ್‌ ಇಂದು ಮಧ್ಯಾಹ್ನ ತೋರಿಸಿತ್ತು. ಈಗ ಅದು 1504 ಹಾಸಿಗೆಗಳು ಲಭ್ಯ ಎಂದು ತೋರಿಸುತ್ತಿದೆ. ವ್ಯವಸ್ಥೆ ಸುಧಾರಣೆ ಆಗುತ್ತಿದೆ...’ ಎಂದು ಸಂಸದ ತೇಜಸ್ವಿ ಸೂರ್ಯ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಟ್ವೀಟ್‌ ಮಾಡಿದ್ದರು.

ಕೋವಿಡ್‌ ರೋಗಿಗಳಿಗೆ ಸರ್ಕಾರಿ ಕೋಟಾದಲ್ಲಿ ಹಂಚಿಕೆ ಮಾಡಲು ಸರ್ಕಾರಿ ವೈದ್ಯಕೀಯ ಕಾಲೇಜು, ಸರ್ಕಾರಿ ಆಸ್ಪತ್ರೆ, ಖಾಸಗಿ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು, ಸರ್ಕಾರದ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಹಂಚಿಕೆಗೆ ಲಭ್ಯ ಇರುವ ಹಾಸಿಗೆಗಳ ವಿವರವನ್ನೂ ಟ್ವೀಟ್‌ನಲ್ಲಿ ಹಂಚಿಕೊಂಡು, ಕೋವಿಡ್‌ ರೋಗಿಗಳಿಗೆ ಬಿಬಿಎಂಪಿ ಮೂಲಕ ಹಂಚಿಕೆ ಮಾಡುವ ದಂಧೆ ಬಯಲಿಗೆ ಎಳೆದ ಬಳಿಕ ವ್ಯವಸ್ಥೆ ಸುಧಾರಣೆ ಆಗಿದೆ ಎಂದು ತಿಳಿಸಿದ್ದರು. 

ಮಂಗಳವಾರ ಮಧ್ಯಾಹ್ನ 2,015 ಹಾಸಿಗೆಗಳು ಲಭ್ಯವಿದ್ದರೆ, ರಾತ್ರಿ ವೇಳೆಗೆ 1,504 ಹಾಸಿಗೆಗಳು ಮಾತ್ರ ಲಭ್ಯವಿತ್ತು. ಆದರೆ, ಸಂಸದರು, ತನ್ನ ದಾಳಿಯ ಬಳಿಕ ಎಲ್ಲ ಆಸ್ಪತ್ರೆಗಳಲ್ಲೂ ಹಾಸಿಗೆಗಳು ಲಭ್ಯವಿದೆ ಎಂದು ಪ್ರಚಾರ ಗಿಟ್ಟಿಸಿಕೊಂಡಿದ್ದರು. ಆದರೆ, ಅವರ ದಾಳಿಯಿಂದಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳು, ಅಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದರು ಎಂಬ ದೂರುಗಳು ಕೇಳಿಬಂದಿದೆ.

ವಾರ್ ರೂಂಗಳಲ್ಲಿ ಆತಂಕ: ಸಂಸದ ತೇಜಸ್ವಿ ಸೂರ್ಯ ಕೋವಿಡ್ ಹಾಸಿಗೆ ಬ್ಲಾಕಿಂಗ್ ದಂಧೆಯ ಆರೋಪವನ್ನು ಯಾವುದೇ ಜನಪ್ರತಿನಿಧಿಗಳ, ಅಧಿಕಾರಿಗಳ ಮೇಲೆ ಹೊರಿಸದೆ ಕೋವಿಡ್ ವಾರ್ ರೂಂಗಳಲ್ಲಿ ಆಪರೇಟರ್ ಗಳು ಸೇರಿದಂತೆ ಮತ್ತಿತರೆ ಸೇವಾ ಕಾರ್ಯದಲ್ಲಿ ತೊಡಗಿದ್ದವರ ಮೇಲೆ ಹೊರಿಸಿದ್ದಾರೆಂದು ಬಿಬಿಎಂಪಿಯ ಎಲ್ಲ ವಾರ್ ರೂಂ ಸಿಬ್ಬಂದಿಗಳು, ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಬಹುತೇಕ ಮಂದಿ ಕೋವಿಡ್ ವಾರ್ ರೂಂನಲ್ಲಿ ಕೆಲಸ ಮಾಡಲು ಇಚ್ಛಿಸುವುದಿಲ್ಲ. ಇಂತಹ ಸಂದರ್ಭದಲ್ಲೂ ನಾವು ಕಾರ್ಯನಿರ್ವಹಿಸುತ್ತಿದ್ದೇವೆಂದರೆ ಜನತೆಗೆ ನಮ್ಮಿಂದಾದ ಸೇವೆ ಮಾಡಬೇಕೆಂಬ ಏಕೈಕ ಉದ್ದೇಶವಷ್ಟೆ. ಇಲ್ಲಿ ನಮಗೆ ಯಾವ ವಿಶೇಷ ಅಧಿಕಾರವು ಇರುವುದಿಲ್ಲ. ನಮ್ಮ ಮೇಲ್ವಿಚಾರಕರು ಹೇಳಿದ್ದನ್ನು ಮಾಡಬೇಕಷ್ಟೆ. ಆದರೂ ಸಂಸದರು ಕೋವಿಡ್ ವಾರ್ ಸಿಬ್ಬಂದಿಗಳ ವಿರುದ್ಧ ಆರೋಪ ಮಾಡಿರುವುದು ತುಂಬಾ ಬೇಸರ ತರಿಸಿದೆ, ಇದೆಲ್ಲ ಪ್ರಚಾರಕ್ಕಾಗಿ ಮಾಡಿದ್ದಾಗಿದೆ ಎಂದು ಸಿಬ್ಬಂದಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

This afternoon BBMP website showed zero beds available in Bengaluru under Govt Quota.

Right now, it is showing 1504 beds as available.

System is reforming. pic.twitter.com/j59Q8Cuk8X

— Tejasvi Surya (@Tejasvi_Surya) May 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X