Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ವೈದ್ಯಕೀಯ ಕಾಲೇಜುಗಳ ಶೇ.75ರಷ್ಟು...

ಖಾಸಗಿ ವೈದ್ಯಕೀಯ ಕಾಲೇಜುಗಳ ಶೇ.75ರಷ್ಟು ಬೆಡ್‍ಗಳನ್ನ ಸರಕಾರಕ್ಕೆ ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 May 2021 10:45 PM IST
share
ಖಾಸಗಿ ವೈದ್ಯಕೀಯ ಕಾಲೇಜುಗಳ ಶೇ.75ರಷ್ಟು ಬೆಡ್‍ಗಳನ್ನ ಸರಕಾರಕ್ಕೆ ನೀಡಲು ಸೂಚನೆ

ಬೆಂಗಳೂರು, ಮೇ 6: ನಗರದಲ್ಲಿನ ಬೆಡ್ ಕೊರತೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜೊತೆ ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು.

ಸಭೆಯ ನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಸೋಂಕಿತರಿಗೆ ಬೆಡ್ ಸಮಸ್ಯೆಯಾಗದ ನಿಟ್ಟಿನಲ್ಲಿ ಎಲ್ಲ ವ್ಯವಸ್ಥೆಗಳನ್ನ ಸರಕಾರ ಮಾಡುತ್ತಿದೆ. ಶೀಘ್ರದಲ್ಲೇ ಈ ಸಮಸ್ಯೆ ಪರಿಹಾರ ಮಾಡಲು ಕಾರ್ಯಯೋಜನೆ ರೂಪಿಸಿದ್ದೇವೆ. ಆ ನಿಟ್ಟಿನಲ್ಲಿಯೇ ಇಂದು ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದೇವೆ. ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶೇ.75ರಷ್ಟು ಬೆಡ್ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೀಸಲಿಡುವಂತೆ ಸೂಚಿಸಲಾಗಿದೆ. ಅದಕ್ಕೆ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಖಾಸಗಿ ಮೆಡಿಕಲ್ ಕಾಲೇಜುಗಳು 1350 ಬೆಡ್ ಸರಕಾರಕ್ಕೆ ನೀಡಬೇಕಿದೆ. ಇಂದಿನ ಸಭೆಯಲ್ಲಿ ಈ ಕುರಿತಂತೆ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಕೆಲವು ಖಾಸಗಿ ಕಾಲೇಜುಗಳ ಮುಖ್ಯಸ್ಥರು ಇಂದಿನ ಸಭೆಗೆ ಬಂದಿರುವುದಿಲ್ಲ. ಈ ಕುರಿತಂತೆ ಕಾರಣ ಕೇಳಿ ಮಾಹಿತಿ ಪಡೆಯುವಂತೆ ತಿಳಿಸಲಾಗಿದೆ. ಒಂದು ವೇಳೆ ಸ್ಪಷ್ಟನೆ ಸಿಗದಿದ್ದರೆ ಅಂತವರ ವಿರುದ್ಧ ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಎಲ್ಲಾ ಆಸ್ಪತ್ರೆಗಳ ಬೆಡ್ ವ್ಯವಸ್ಥೆಯನ್ನು ಗಮನಿಸುವುದಕ್ಕೆ ಈಗಾಗಲೇ ಐಎಎಸ್ ಅಧಿಕಾರಿಗಳನ್ನ ನೇಮಿಸಲಾಗಿದೆ. ಆದಾಗ್ಯೂ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳ ಮಾಹಿತಿ ಸ್ಪಷ್ಟವಾಗಿ ದೊರೆಯುತ್ತಿಲ್ಲ. ಇದನ್ನೆಲ್ಲಾ ಸರಿಪಡಿಸುವ ನಿಟ್ಟಿನಲ್ಲಿ ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ ಅವರನ್ನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಈ ಕುರಿತಂತೆ ಮುಖ್ಯ ಕಾರ್ಯದರ್ಶಿಗಳು ಅಧಿಕೃತವಾಗಿ ಆದೇಶ ಹೊರಡಿಸಲಿದ್ದಾರೆ. ಆ ನಂತರ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳ ಮಾಹಿತಿ ಬೆರಳ ತುದಿಯಲ್ಲಿಯೇ ಸಿಗುವಂತಾಗಲಿದೆ ಎಂದು ತಿಳಿಸಿದರು.

ಕೆಲವು ಖಾಸಗಿ ಆಸ್ಪತ್ರೆಗಳು ಇನ್ನೂ ಬೆಡ್‍ಗಳನ್ನು ಸರಕಾರಕ್ಕೆ ನೀಡಿಲ್ಲ. ರೋಗಿಗಳು ಸಾವನ್ನಪ್ಪಿದರು ಅವರ ಹೆಸರಿನಲ್ಲಿಯೇ ಬೆಡ್ ಮೀಸಲಿಟ್ಟು ವಂಚಿಸುವ ಕೆಲಸ ಮಾಡುತ್ತಿವೆ. ಈ ಕುರಿತಂತೆ ಚರ್ಚಿಸಲು ನಾಳೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆಯಲಾಗಿದೆ. ಆ ವೇಳೆ ಈ ಎಲ್ಲಾ ಸಂಗತಿಗಳನ್ನ ಚರ್ಚಿಸಿ ಬೆಡ್‍ಗಳನ್ನ ಸರಕಾರಕ್ಕೆ ನೀಡಲು ತಿಳಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X