Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಮನೆ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಮನೆ ನಿರ್ಮಾಣ ನಿಲ್ಲಿಸಿ: ಇಸ್ರೇಲ್ ಗೆ ಯುರೋಪ್ ದೇಶಗಳ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 May 2021 10:12 PM IST
share
ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಮನೆ ನಿರ್ಮಾಣ ನಿಲ್ಲಿಸಿ: ಇಸ್ರೇಲ್ ಗೆ ಯುರೋಪ್ ದೇಶಗಳ ಒತ್ತಾಯ

ಬ್ರಸೆಲ್ಸ್ (ಬೆಲ್ಜಿಯಮ್), ಮೇ 7: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಮನೆಗಳನ್ನು ನಿರ್ಮಿಸುವುದನ್ನು ನಿಲ್ಲಿಸುವಂತೆ ಫ್ರಾನ್ಸ್, ಜರ್ಮನಿ, ಇಟಲಿ, ಸ್ಪೇನ್ ಮತ್ತು ಬ್ರಿಟನ್ ದೇಶಗಳು ಇಸ್ರೇಲನ್ನು ಒತ್ತಾಯಿಸಿವೆ.

ಇಸ್ರೇಲಿಗರ ಕಾಲನಿ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನ್ಯಾಯಾಲಯವೊಂದರಲ್ಲಿ ನಡೆಯುವುದಕ್ಕೆ ಪೂರ್ವಭಾವಿಯಾಗಿ ಆಕ್ರಮಿತ ಪೂರ್ವಜೆರುಸಲೇಮ್ನಲ್ಲಿ ಉದ್ವಿಗ್ನತೆ ನೆಲೆಸಿರುವಂತೆಯೇ ಈ ದೇಶಗಳು ಗುರುವಾರಜಂಟಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿವೆ.

ಪೂರ್ವ ಜೆರುಸಲೇಮ್ ನ ಶೇಖ್ಜರಾಹ್ ಪಟ್ಟಣದಲ್ಲಿ ಇಸ್ರೇಲಿ ನ್ಯಾಯಾಲಯವೊಂದರ ಬೆಂಬಲದೊಂದಿಗೆ ಯಹೂದಿಗಳು ಕೆಲವು ಮನೆಗಳಲ್ಲಿ ವಾಸ ಆರಂಭಿಸಿದ್ದಾರೆ. ಇದೇ ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆ ನಡೆಯಲಿದ್ದು, ಆ ಪಟ್ಟಣದ ಫೆಲೆಸ್ತೀನಿ ಕುಟುಂಬಗಳು ಮನೆಗಳಿಂದ ಹೊರದಬ್ಬಲ್ಪಡುವ ಬೆದರಿಕೆಯನ್ನು ಎದುರಿಸುತ್ತಿವೆ.

‘‘ಆಕ್ರಮಿತ ಪಶ್ಚಿಮ ದಂಡೆಯಹರ್ ಹೋಮ ಪ್ರದೇಶದಲ್ಲಿ 540 ಮನೆಗಳನ್ನು ನಿರ್ಮಿಸಲು ನಡೆಸಲಾಗುತ್ತಿರುವ ಕಾಮಗಾರಿಯನ್ನು ಮುಂದುವರಿಸಲುತೆಗೆದುಕೊಂಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ನಾವು ಇಸ್ರೇಲ್ ಸರಕಾರವನ್ನು ಒತ್ತಾಯಿಸುತ್ತೇವೆ ಹಾಗೂ ಆಕ್ರಮಿತ ಫೆಲೆಸ್ತೀನ್ ಭೂಭಾಗಗಳಲ್ಲಿನ ಇಸ್ರೇಲಿ ವಸಾಹತುಗಳನ್ನು ವಿಸ್ತರಿಸುವ ನೀತಿಯನ್ನು ನಿಲ್ಲಿಸುವಂತೆಯೂ ನಾವು ಒತ್ತಾಯಿಸುತ್ತೇವೆ’’ ಎಂದು ಯುರೋಪ್ ದೇಶಗಳು ಹೇಳಿವೆ.

‘‘ಪೂರ್ವಜೆರುಸಲೇಮ್ ಮತ್ತು ಬೆತ್ಲೆಹೇಮ್ಗಳ ನಡುವೆ ಇರುವ ಹರ್ ಹೋಮ ಪ್ರದೇಶದಲ್ಲಿರುವ ಇಸ್ರೇಲಿ ಮನೆಗಳ ವಸಾಹತನ್ನು ವಿಸ್ತರಿಸುವ ನಿರ್ಧಾರಜಾರಿಗೊಂಡರೆ, ಪರಿಪೂರ್ಣ ಫೆಲೆಸ್ತೀನ್ ದೇಶವೊಂದರ ಸಾಧ್ಯತೆಗಳಿಗೆ ಇನ್ನಷ್ಟು ಹಾನಿಯಾಗುತ್ತದೆ’’ ಎಂದು ಈ ದೇಶಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X