Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕಕ್ಕೆ 2.62 ಲಕ್ಷ ವಯಲ್ಸ್...

ಕರ್ನಾಟಕಕ್ಕೆ 2.62 ಲಕ್ಷ ವಯಲ್ಸ್ ಹಂಚಿಕೆ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ7 May 2021 10:54 PM IST
share
ಕರ್ನಾಟಕಕ್ಕೆ 2.62 ಲಕ್ಷ ವಯಲ್ಸ್ ಹಂಚಿಕೆ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ಹೊಸದಿಲ್ಲಿ, ಮೇ 7: ಕೇಂದ್ರ ಸರಕಾರವು ಬೇರೆ ಬೇರೆ ರಾಜ್ಯಗಳಿಗೆ ಮುಂದಿನ ವಾರದ ಬಳಕೆಗಾಗಿ 19.2 ಲಕ್ಷ ರೆಮ್‍ಡೆಸಿವಿರ್ 'ವಯಲ್ಸ್'ಗಳನ್ನು ಹಂಚಿಕೆ ಮಾಡಿದ್ದು ಕರ್ನಾಟಕ ರಾಜ್ಯಕ್ಕೆ 2,62,346 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಎ.21 ರಿಂದ ಮೇ 9ರವರೆಗಿನ ಅವಧಿಯ ಬಳಕೆಗಾಗಿ ಬೇರೆ ಬೇರೆ ರಾಜ್ಯಗಳಿಗೆ ಒಟ್ಟು 33.8 ಲಕ್ಷ ವಯಲ್ಸ್ ರೆಮ್‍ಡೆಸಿವಿರ್ ಚುಚ್ಚುಮದ್ದು ಹಂಚಲಾಗಿತ್ತು, ಈಗ ಮೇ 10 ರಿಂದ 16ರವರೆಗಿನ ಬಳಕೆಗಾಗಿ 19.2 ಲಕ್ಷ ವಯಲ್ಸ್ ಹಂಚಲಾಗಿದೆ, ಹಾಗಾಗಿ ಇದುವರೆಗೆ ವಿವಿಧ ರಾಜ್ಯಗಳಿಗೆ ಒಟ್ಟು 53 ಲಕ್ಷ ವಯಲ್ಸ್ ರೆಮ್‍ಡೆಸಿವಿರ್ ಹಂಚಿಕೆ ಮಾಡಿದಂತಾಗಿದೆ, ರಾಜ್ಯಕ್ಕೆ ಇದುವರೆಗೆ 5.75 ಲಕ್ಷ ವಯಲ್ಸ್ ಹಂಚಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇವೆಲ್ಲ ಕೇಂದ್ರ ಸರಕಾರದ ಕೋಟಾದಡಿ(ಸರಕಾರಿ ಹಂಚಿಕೆ ಶೇ.70 ಮತ್ತು ಕಂಪನಿಗಳ ವಿವೇಚನೆಗೆ ಬಿಟ್ಟದ್ದು ಶೇ.30) ರಾಜ್ಯಗಳಿಗೆ ಹಂಚಿಕೆಯಾದ ರೆಮ್‍ಡೆಸಿವಿರ್. ಇನ್ನು ಕಂಪನಿಗಳು ಕೂಡಾ ತಮ್ಮ ಕೋಟಾದಡಿ ಲಭ್ಯವಾದ ಸುಮಾರು 10 ಲಕ್ಷ ವಯಲ್ಸ್ ಮುಕ್ತ ಮಾರುಕಟ್ಟೆಗೆ ಸರಬರಾಜು ಮಾಡಿವೆ. ಅಮೆರಿಕದ ನೆರವಿನಡಿ 1.25 ಲಕ್ಷ ರೆಮ್‍ಡೆಸಿವಿರ್ ವಯಲ್ಸ್ ಭಾರತಕ್ಕೆ ಬಂದಿದೆ. ಸದ್ಯ ಲಭ್ಯವಿರುವ ರೆಮ್‍ಡೆಸಿವಿರ್ ಚುಚ್ಚುಮದ್ದನ್ನು ಪಾರದರ್ಶಕವಾಗಿ ವಿವಿಧ ರಾಜ್ಯಗಳಿಗೆ ಹಂಚಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದು ಹೇಗೆಂದರೆ ಹಾಗೆ ಬಳಸುವ ಮದ್ದಲ್ಲ. ಯಾವ ಪ್ರಕರಣಗಳಲ್ಲಿ ಇದನ್ನು ಬಳಸಬೇಕು ಎಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. “ಯಾವುದಕ್ಕೂ ಇರಲಿ” ಎಂದು ಜನರು ಮನೆಯಲ್ಲಿ ಇದನ್ನು ಸಂಗ್ರಹಿಸಿಡಬಾರದು. ಇದರಿಂದ ನಿಜಕ್ಕೂ ಇದರ ಅಗತ್ಯ ಇರುವವರಿಗೆ ತೊಂದರೆಯಾಗುತ್ತದೆ. ಇದರ ನ್ಯಾಯಯುತ ಬಳಕೆಯಾಗಬೇಕು. ಇದರ ಕಾಳಸಂತೆಯಾಗದಂತೆ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಸರಕಾರಗಳಿಗೆ ಮೇಲಿಂದ ಮೇಲೆ ತಿಳಿಸಲಾಗಿದೆ ಎಂದು ಸದಾನಂದಗೌಡ ಹೇಳಿದ್ದಾರೆ.

ಸ್ವದೇಶಿಯವಾಗಿಯೂ ರೆಮ್‍ಡೆಸಿವಿರ್ ಉತ್ಪಾದನೆ ಹೆಚ್ಚಿಸಲಾಗುತ್ತಿದೆ. ಅಮೆರಿಕದ ಗಿಲೀಡ್ ಸೈಯನ್ಸಸ್ ಕಂಪನಿಯು ರೆಮ್‍ಡೆಸಿವಿರ್ ಚುಚ್ಚುಮದ್ದಿನ ಪೆಟೆಂಟ್ ಹೊಂದಿದ್ದು ಭಾರತದ 7 ಔಷಧ ಕಂಪನಿಗಳು (ಸಿಪ್ಲಾ, ಡಾ.ರೆಡ್ಡಿಸ್ ಲ್ಯಾಬ್, ಹೆಟೆರೊ, ಜುಬಿಲೆಂಟ್ ಫಾರ್ಮಾ, ಮೈಲಾನ್, ಸಿಂಜಿನ್ ಮತ್ತು ಜಿಡಸ್ ಕ್ಯಾಡಿಲಾ) ಈ ಔಷಧದ ಉತ್ಪಾದನಾ ಲೈಸನ್ಸ್ ಪಡೆದಿವೆ. ಬೇಡಿಕೆ ತೀವ್ರ ಹೆಚ್ಚಾದ ಹಿನ್ನಲೆಯಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು ಈ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸಿದ್ದೇವೆ. ಇದರ ಫಲವಾಗಿ ಮಾಸಿಕ ಉತ್ಪಾದನಾ ಸಾಮರ್ಥ್ಯ 38 ಲಕ್ಷ ‘ವಯಲ್ಸ್’ನಿಂದ 1.05 ಕೋಟಿಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿದಿನದ ಉತ್ಪಾದನೆ 3.5 ಲಕ್ಷ ವಯಲ್ಸ್ ತಲುಪಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ರೆಮ್‍ಡೆಸಿವಿರ್ ಬೇಡಿಕೆ ಮತ್ತು ಪೂರೈಕೆ ಮಧ್ಯೆ ಸಮತೋಲನ ಉಂಟಾಗಲಿದೆ. ಉಳಿದಂತೆ, ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುವ ಪ್ರೊಟೊಕಾಲ್ ಮತ್ತು ನಾನ್-ಪ್ರೊಟೊಕಾಲ್ ಔಷಧಗಳೆರಡೂ ದೇಶದಲ್ಲಿ ವಿಫುಲವಾಗಿ ಲಭ್ಯವಿವೆ. ಆದಾಗ್ಯೂ ಅವುಗಳ ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಕಂಪನಿಗಳಿಗೆ ಸೂಚಿಸಲಾಗಿದೆ ಎಂದು ಸದಾನಂದಗೌಡ ತಿಳಿಸಿದರು.

ಕರ್ನಾಟಕದ ರೆಮ್‍ಡೆಸಿವಿರ್ ಹಂಚಿಕೆಯನ್ನು ಮೇ 1ರಿಂದ 16ರವರೆಗೆ 2,62,346ಕ್ಕೆ ಹೆಚ್ಚಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಮನವಿಗೆ ಸ್ಪಂದಿಸಿ ಅಗತ್ಯ ಔಷಧ ಪೂರೈಸುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಧನ್ಯವಾದಗಳು.

-ಡಾ.ಕೆ.ಸುಧಾಕರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X