Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ...

ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಕೆಂಡಾಮಂಡಲ

ವಾರ್ತಾಭಾರತಿವಾರ್ತಾಭಾರತಿ7 May 2021 11:11 PM IST
share
ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಕೆಂಡಾಮಂಡಲ

ಮಂಡ್ಯ, ಮೇ7:  ಬೇರೆ ಟೈಮ್‍ನಲ್ಲಿ ರಾಜಕಾರಣ ಮಾಡಲಿ, ಇಂತಹ ಟೈಮ್‍ನಲ್ಲೂ ಮಾಡ್ತಾ ಕೂತರೆ ನನಗೆ ಒಂಥರ ರಕ್ತ ಕುದಿತಾ ಇದೆ ಇದನ್ನು ನೋಡಿ’ ಎಂದು ಸಂಸದೆ ಸುಮಲತಾ ಅಂಬರೀಷ್ ಜೆಡಿಎಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಜೆಡಿಎಸ್ ಶಾಸಕರ ಟೀಕೆಗಳಿಂದ ಬೇಸತ್ತ ಸುಮಲತಾ ಸಭೆಯಿಂದ ಹೊರಬಂದು ತಮ್ಮ ಆಕ್ರೋಶ ಹೊರ ಹಾಕಿದರು.

ಇವರು ಎಷ್ಟು ಬಾರಿ ಗೆದ್ದು ಬಂದಿದ್ದಾರೆ, ಸಚಿವರಾಗಿದ್ದಾರೆ. ನನಗಿಂತ ರಾಜಕಾರಣದಲ್ಲಿ ಸೀನಿಯರ್ಸ್ ಆಗಿದ್ದಾರೆ. ಜನರ ವಿಶ್ವಾಸಗಳಿಸಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ, ಜನರಿಗಾಗಿ ಏನೆ ಮಾಡ್ತಿದ್ದಾರೆ. ಇಲ್ಲೇನು ಡ್ರಾಮಾ ನಡೀತಿದೆಯಾ ಎಂದು ಅವರು ಕಿಡಿಕಾರಿದರು.

ಇದು ಪಕ್ಕಾ ರಾಜಕಾರಣವಲ್ಲದೆ ಬೇರೇನು ಅಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ರೀತಿಯ ವರ್ತನೆ ರಾಜಕಾರಣವಲ್ಲದೆ ಇನ್ನೇನು. ನಾನು ಇಂಡಿಪೆಂಡೆಂಟ್ ಎಂಪಿ ಆಗಿ ಸ್ವಂತ ಹಣದಲ್ಲಿ ಆಕ್ಸಿಜನ್ ಕೊಡುತ್ತಿದ್ದೇನೆ. ನೀವೇನು ಮಾಡ್ತಾ ಇದ್ದೀರಿ ಎಂದು ಜನ ಕೇಳುತ್ತಿದ್ದಾರೆ, ಅದಕ್ಕೆ ಈ ರೀತಿ ವರ್ತಿಸುತ್ತಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದರು.

ನನಗೆ ಆಕ್ಸಿಜನ್ ಎಲ್ಲಿ ಸಿಗುತ್ತೆ ಎಂದು ಕೇಳುತ್ತಾರಲ್ಲ, ಅವರ ಎಂಪಿ, ಮಾಜಿ ಪ್ರಧಾನಿ ಇಲ್ವ(ದೇವೇಗೌಡ), ಮೋದಿ ಜತೆ ಮಾತನಾಡುತ್ತಾರೆ, ಅಷ್ಟೊಂದು ಪ್ರಭಾವ ಅವರಿಗಿದೆ. ಅವರನ್ನು ಪ್ರಶ್ನೆ ಕೇಳಬಹುದಲ್ಲ. ಸುಮ್ಮಸುಮ್ಮನೆ ಪ್ರಚಾರಕ್ಕೋಸ್ಕರ, ಜನರ ನಂಬಿಸಿಕ್ಕೋಸ್ಕರ ಈ ರೀತಿ ನನ್ನ ಮೇಲೆ ಕೂಗಾಡುತ್ತಿದ್ದಾರೆ ಎಂದು ಅವರು ತಿರುಗೇಟು ನೀಡಿದರು.

ಈ ರೀತಿಯ ರಾಜಕಾರಣ ನನಗೆ ಇಷ್ಟವಿಲ್ಲ. ಇಂತಹ ರಾಜಕಾರಣ ಬೇಕಾಗಿಯೂ ಇಲ್ಲ. ಜನಕ್ಕೆ ಏನು ವಾಗ್ದಾನ ಕೊಟಿದ್ದೇನೆ ಅದನ್ನು ಈಡೇರಿಸಲು ಶಕ್ತಿಮೀರಿ ಪ್ರಯತ್ನಿಸುತ್ತಿದ್ದೇನೆ. ಬೇರೆಯವರ ಜತೆ ಫೋಟೋಗೆ ಪೋಜು ಕೊಡೋದು, ಚಪ್ಪಾಳೆ ಪಡೆದುಕೊಳ್ಳುವುದು ನನಗಿಷ್ಟವಿಲ್ಲ ಎಂದು ಅವರು ಹೇಳಿದರು.

ಇಂತಹ ಸಂದರ್ಭದಲ್ಲಿ ನಾನು ಎಂಪಿಯಾಗಿ ಮಾಡುವ ಕೆಲಸವಲ್ಲ, ಮಾನವೀಯತೆಯಿಂದ ಕೆಲಸ ಮಾಡಬೇಕು. ತೋರ್ಪಡಿಕೆ ರಾಜಕಾರಣ ನನಗಿಷ್ಟವಿಲ್ಲ. ಕೆಡಿಪಿ ಸಭೆಗೆ ಬರಲು ಬೇಜಾರುತ್ತಿದೆ. ಈ ಕೆಲಸವನ್ನು ದೂರವಾಣಿ ಕರೆ ಮೂಲಕವೇ ಮಾಡಬಹುದು. ಈ ಸಂದರ್ಭ ಲಾಕ್‍ಡೌನ್ ಅಗತ್ಯವಿದೆ. ಏಕೆಂದರೆ ಜೀವನಕ್ಕಿಂತ ಜನರ ಜೀವ ಮುಖ್ಯ ಎಂದು ಸುಮಲತಾ ಪ್ರತಿಕ್ರಿಯಿಸಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಜೆಡಿಎಸ್ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಕೆ.ಸುರೇಶ್‍ಗೌಡ ಅವರು ಸಂಸದೆ ಸುಮಲತಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕೋವಿಡ್ ನಿರ್ವಹಣೆ ಕುರಿತ ವಿಚಾರದಲ್ಲಿ ತೀವ್ರ ಟೀಕಾ ಪ್ರಹಾರ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X