Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್ ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾ...

ಕೋವಿಡ್ ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾ ನಿರ್ಧಾರಕ್ಕೆ ಜರ್ಮನಿ ಪ್ರಬಲ ವಿರೋಧ

ವಾರ್ತಾಭಾರತಿವಾರ್ತಾಭಾರತಿ8 May 2021 12:19 AM IST
share
ಕೋವಿಡ್ ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾ ನಿರ್ಧಾರಕ್ಕೆ ಜರ್ಮನಿ ಪ್ರಬಲ ವಿರೋಧ

ಬರ್ಲಿನ್ (ಜರ್ಮನಿ), ಮೇ 7: ಕೊರೋನ ವೈರಸ್ ಲಸಿಕೆಗಳ ಮೇಲಿನ ಪೇಟೆಂಟ್ಗಳನ್ನು ಮನ್ನಾ ಮಾಡುವ ಅಮೆರಿಕದ ದಿಟ್ಟ ನಿರ್ಧಾರವನ್ನು ಜರ್ಮನಿಯು ಗುರುವಾರ ಬಲವಾಗಿ ವಿರೋಧಿಸಿದೆ. ಇದರೊಂದಿಗೆ ಈ ಪ್ರಸ್ತಾವವು ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳನ್ನು ಅನಿಶ್ಚಿತತೆ ಆವರಿಸಿದೆ. ಯಾಕೆಂದರೆ, ಈ ಪ್ರಸ್ತಾವವು ಅಂಗೀಕಾರಗೊಳ್ಳಬೇಕಾದರೆ ವಿಶ್ವ ವ್ಯಾಪಾರ ಸಂಘಟನೆಯ ಸದಸ್ಯ ದೇಶಗಳ ನಡುವೆ ಒಮ್ಮತ ಏರ್ಪಡುವುದು ಅಗತ್ಯವಾಗಿದೆ.

ಅಭಿವೃದ್ಧಿಶೀಲ ದೇಶಗಳಲ್ಲಿ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಅಗಾಧವಾಗಿ ಏರುತ್ತಿರುವಾಗ, ಬಡ ದೇಶಗಳಿಗೆ ಇನ್ನೂ ಲಸಿಕೆ ಅಭಿಯಾನವನ್ನು ಆರಂಭಿಸಲು ಸಾಧ್ಯವಾಗಿಲ್ಲ. ಆದರೆ ಶ್ರೀಮಂತ ದೇಶಗಳು ಕೊರೋನ ವೈರಸ್ ಲಸಿಕೆಗಳನ್ನು ದಾಸ್ತಾನಿರಿಸಿಕೊಂಡಿವೆ ಎಂಬ ಆರೋಪಗಳನ್ನು ಎದುರಿಸುತ್ತಿವೆ.

ಲಸಿಕೆಗಳ ಮೇಲಿನ ಪೇಟೆಂಟ್ಗಳನ್ನು ರದ್ದುಪಡಿಸಬೇಕೆಂಬ ಅಗಾಧಒತ್ತಡಕ್ಕೆ ಸಿಲುಕಿದ ಅಮೆರಿಕ, ಈ ಪ್ರಸ್ತಾವವನ್ನು ಬೆಂಬಲಿಸುವುದಾಗಿ ಬುಧವಾರ ಹೇಳಿತ್ತು. ಈ ಸಂಬಂಧ ಅಮೆರಿಕದ ವ್ಯಾಪಾರ ಪ್ರತಿನಿಧಿ ಕ್ಯಾತರೀನ್ಟಾಯ್ ಹೇಳಿಕೆ ನೀಡಿದ್ದರು.

ಐರೋಪ್ಯಕಮಿಶನ್ ಅಧ್ಯಕ್ಷಉರ್ಸುಲಾ ವೊನ್ಡೆರ್ ಲೆಯೆನ್ಆರಂಭದಲ್ಲಿ ಹಿಂಜರಿಕೆ ವ್ಯಕ್ತಪಡಿಸಿದ್ದರೂ, ಬಳಿಕ ಈ ಪಸ್ತಾವದ ಬಗ್ಗೆ ಚರ್ಚಿಸಲು ಐರೋಪ್ಯಒಕ್ಕೂಟ ಸಿದ್ಧವಾಗಿದೆ ಎಂದಿದ್ದರು.

ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ಕೂಡ ಈ ಪ್ರಸ್ತಾವಕ್ಕೆ ಬೆಂಬಲ ನೀಡಿದ್ದರು. ಆದರೆ, ಈಗ ಜರ್ಮನಿ ಈ ಪ್ರಸ್ತಾವಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿರುವುದು ಪ್ರಸ್ತಾವದ ಯಶಸ್ಸಿನ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯೊಂದು ಎದುರಾಗಿದೆ.

‘‘ಬೌದ್ಧಿಕ ಆಸ್ತಿಯ ರಕ್ಷಣೆಯು ಹೊಸತನದ ಮೂಲವಾಗಿದೆ ಹಾಗೂ ಅದು ಭವಿಷ್ಯದಲ್ಲೂ ಹಾಗೆ ಮುಂದುವರಿಯಬೇಕು’’ ಎಂದುಜರ್ಮನಿಯಚಾನ್ಸಲರ್ಆ್ಯಂಜೆಲಾ ಮರ್ಕೆಲ್ರ ವಕ್ತಾರೆಯೊಬ್ಬರು ಹೇಳಿದರು.

ವಿರೋಧಿಸುತ್ತೇವೆ: ಫೈಝರ್ ಸಿಇಒ

ಕೋವಿಡ್-19 ಲಸಿಕೆಗಳ ಮೇಲಿನ ಪೇಟೆಂಟ್ಗಳನ್ನು ರದ್ದುಪಡಿಸಬೇಕೆಂಬ ಅಮೆರಿಕ ಬೆಂಬಲಿತ ಪ್ರಸ್ತಾವವನ್ನು ನಾನು ವಿರೋಧಿಸುತ್ತೇನೆಎಂದು ಅಮೆರಿಕದ ಔಷಧ ತಯಾರಿಕಾ ಕಂಪೆನಿ ಫೈಝರ್ನ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ)ಆಲ್ಬರ್ಟ್ ಬೋರ್ಲಾ ಗುರುವಾರ ಹೇಳಿದ್ದಾರೆ. ಇದಕ್ಕೆ ಬದಲಾಗಿ, ಈಗ ಲಸಿಕೆಗಳು ತಯಾರಾಗುತ್ತಿರುವ ಸ್ಥಳಗಳಲ್ಲೇ ಅವುಗಳ ಉತ್ಪಾದನೆಯನ್ನು ವೃದ್ಧಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಫೈಝರ್ ಮತ್ತು ಜರ್ಮನಿಯ ಬಯೋಎನ್ಟೆಕ್ ಕಂಪೆನಿಗಳು ಜಂಟಿಯಾಗಿ ಕೊರೋನ ವೈರಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿವೆ.

‘‘ಕೊರೋನ ವೈರಸ್ ಲಸಿಕೆಗಳ ಪೇಟೆಂಟ್ರಕ್ಷಣೆಯನು ್ನರದ್ದುಪಡಿಸಬೇಕೆಂಬ ಅಮೆರಿಕದ ಕರೆಯನ್ನು ನನ್ನ ಕಂಪೆನಿ ಖಂಡಿತವಾಗಿಯೂ ಬೆಂಬಲಿಸುವುದಿಲ್ಲ’’ ಎಂದುಎಎಫ್ಪಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ ಬೋರ್ಲಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X