Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರದ ವೈಫಲ್ಯ ಮನಗಂಡು ಆಮ್ಲಜನಕ ವಿತರಣೆ...

ಸರಕಾರದ ವೈಫಲ್ಯ ಮನಗಂಡು ಆಮ್ಲಜನಕ ವಿತರಣೆ ಪರಿಶೀಲನೆಗೆ ರಾಷ್ಟ್ರೀಯ ಕಾರ್ಯಪಡೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ವೈದ್ಯಕೀಯ ಆಮ್ಲಜನಕ,ಕೋವಿಡ್-19 ಔಷಧಿಗಳ ಸಮರ್ಪಕ ಪೂರೈಕೆಗೆ ಸುಪ್ರೀಂಕೋರ್ಟ್ ಮಹತ್ವದ ಹೆಜ್ಜೆ

ವಾರ್ತಾಭಾರತಿವಾರ್ತಾಭಾರತಿ8 May 2021 2:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸರಕಾರದ ವೈಫಲ್ಯ ಮನಗಂಡು ಆಮ್ಲಜನಕ ವಿತರಣೆ ಪರಿಶೀಲನೆಗೆ ರಾಷ್ಟ್ರೀಯ ಕಾರ್ಯಪಡೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮೇ 8: ಕೋವಿಡ್ ವಿರುದ್ಧ ಹೋರಾಟದ ಭಾಗವಾಗಿ ದೇಶಾದ್ಯಂತ ವೈದ್ಯಕೀಯ ಆಕ್ಸಿಜನನ್ನು ವೈಜ್ಞಾನಿಕ,ವೈಚಾರಿಕ ಹಾಗೂ ಸಮಾನತೆಯ ಆಧಾರದಲ್ಲಿ ವಿತರಣೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ಶುಕ್ರವಾರ ರಚಿಸಿದೆ. ಕೋವಿಡ್-19 ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಲಭ್ಯತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದಂತಹ ಕ್ರಮಗಳನ್ನು ಕೂಡಾ ಕಾರ್ಯಪಡೆಯು ಸೂಚಿಸಲಿದೆ. 

ಭವಿಷ್ಯದಲ್ಲಿ ವೈದ್ಯಕೀಯ ತುರ್ತುಸ್ಥಿತಿಯ ಸನ್ನಿವೇಶಗಳಲ್ಲಿ ಪೂರ್ವಸಿದ್ಧತೆಯನ್ನು ಖಾತರಿಪಡಿಸಲು ಪರಿಹಾರಾತ್ಮಕ ಕ್ರಮಗಳನ್ನು ಅಳವಡಿಸಿಕೊಳ್ಳಲು ಕೂಡಾ ಅದು ರಾಜ್ಯಗಳಿಗೆ ನೆರವು ನೀಡಲಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಹಾಗೂ ಎಂ.ಆರ್.ಶಾ ನೇತೃತ್ವದ ದ್ವಿಸದಸ್ಯ ನ್ಯಾಯಪೀಠವು ನೂತನ ಸಮಿತಿಯನ್ನು ರಚಿಸಿ, ಆದೇಶ ಹೊರಡಿಸಿದೆ. ನೂತನ ಕಾರ್ಯಪಡೆಯು ಒಂದು ವಾರದೊಳಗೆ ಕಾರ್ಯಾರಂಭಿಸಲಿದೆ.
  
‘‘ಕೊರೋನಾ ಸಾಂಕ್ರಾಮಿದ ವಿರುದ್ಧ ವೈಜ್ಞಾನಿಕ ಹಾಗೂ ವಿಶೇಷ ಜ್ಞಾನ ಆಧಾರಿತವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ರೂಪಿಸುವುದೇ ಈ ಕಾರ್ಯಪಡೆಯ ರಚನೆಯ ಹಿಂದಿರುವ ತಾರ್ಕಿಕತೆಯಾಗಿದೆ. ದೇಶದ ಪ್ರಮುಖ ತಜ್ಞರು ಈ ಕಾರ್ಯಪಡೆಯೊಂದಿಗೆ ಸದಸ್ಯರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕೈಜೋಡಿಸುವರೆಂದು ನಾವು ನಿರೀಕ್ಷಿಸುತ್ತೇವೆ. ಇದರಿದಾಗಿ ಹಿಂದೆಂದೂ ಕಂಡಿರದಂತಹ ಮಾನವಕುಲದ ಈ ಬಿಕ್ಕಟ್ಟನ್ನು ನಿಭಾಯಿಸಲು ವೈಜ್ಞಾನಿಕ ಕಾರ್ಯತಂತ್ರವನ್ನು ರೂಪಿಸಲು ಹಾಗೂ ಚಿಂತನೆಗಳ ಸಮ್ಮಿಲನಕ್ಕೆ ಅವಕಾಶ ಲಭಿಸಲಿದೆ ’’ ಎಂದು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ತಿಳಿಸಿದೆ. ಕಾರ್ಯಪಡೆಯು ತನ್ನ ವರದಿಗಳನ್ನು ಕೇಂದ್ರ ಹಾಗೂ ನ್ಯಾಯಾಲಯಕ್ಕೆ ಸಲ್ಲಿಸಲಿದೆ.
     
12 ಮಂದಿ ಸದಸ್ಯರ ಸಮಿತಿಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದ ಅಧ್ಯಕ್ಷ ಹಾಗೂ ಕಾರ್ಯಕಾರಿ ನಿರ್ದೇಶಕ ಡಾ.ದೇವಿಪ್ರಸಾದ್ ಶೆಟ್ಟಿ, ಪಶ್ಚಿಮಬಂಗಾಳ ಆರೋಗ್ಯ ವಿಜ್ಞಾನ ವಿವಿಯ ಮಾಜಿ ಕುಲಪತಿ ಡಾ.ಭಾಬತೋಶ್ ಬಿಸ್ವಾಸ್,ಗುರ್ಗಾಂವ್ನ ಮೇದಾಂತ ಹಾಸ್ಪಿಟಲ್ ಆ್ಯಂಡ್ ಹಾರ್ಟ್ ಇನ್ಸ್ಟಿಟ್ಯೂಟ್ನ ಆಡಳಿತ ನಿರ್ದೇಶಕ ಹಾಗೂ ಚೇರ್ಮನ್ ಡಾ.ನರೇಶ್ ಟ್ರೆಹಾನ್ ಕೂಡಾ ಇದ್ದಾರೆ. ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಕೇಂದ್ರ ಸಂಪುಟ ಕಾರ್ಯದರ್ಶಿಯವರನ್ನು ಸಮಿತಿಯ ಸದಸ್ಯರಾಗಿ ಕೇಂದ್ರ ಸರಕಾರವು ಆಯ್ಕೆ ಮಾಡಿದೆ. ಸಂಪುಟ ಕಾರ್ಯದರ್ಶಿಯವರು ಸಮಿತಿಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
  
ಶುಕ್ರವಾರ ಕಾರ್ಯಪಡೆಯ ಸ್ಥಾಪನೆಗೆ ಆದೇಶಿಸಿದ ನ್ಯಾಯಾಲಯವು, ವಿವಿಧ ರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕದ ವಿತರಣೆ ವ್ಯವಸ್ಥೆಯಲ್ಲಿ ಸುಧಾರಣೆ ಮಾಡುವಂತೆಯೂ ನ್ಯಾಯಾಲಯ ಕರೆ ನೀಡಿದೆ. ಆ್ಯಂಬುಲೆನ್ಸ್ ವ್ಯವಸ್ಥೆ, ಕೆಳಸ್ತರದ ಕೋವಿಡ್ ರೋಗಿಗಳ ಪಾಲನಾ ಕೇಂದ್ರಗಳು ಹಾಗೂ ಮನೆಯಲ್ಲಿ ಕ್ವಾರಂಟೈನ್ನಲ್ಲಿರುವ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಲು ಕೇಂದ್ರ ಸರಕಾರ ವಿಫಲವಾಗಿದೆಯೆಂದು ನ್ಯಾಯಾಲಯ ತಿಳಿಸಿದೆ.

ಆಕ್ಸಿಜನ್ ಕೊರತೆಯ ಸಮಸ್ಯೆಯನ್ನು ಅಖಿಲ ಭಾರತ ಮಟ್ಟದಲ್ಲಿ ಪರಾಮರ್ಶಿಸಬೇಕಾದ ಅಗತ್ಯವಿದೆ. ವೈದ್ಯಕೀಯ ಆಮ್ಲಜನಕದ ಲೆಕ್ಕಪರಿಶೋಧನೆಯು ಅತ್ಯವಶ್ಯಕವಾಗಿದೆ. ಒಮ್ಮೆ ಆಕ್ಸಿಜನ್ನ ದಾಸ್ತಾನು ಬಿಡುಗಡೆಯಾದ ಬಳಿಕ ಅವುಗಳ ಸಮರ್ಪಕ ಬಳಕೆಯ ಹೊಣೆಗಾರಿಕೆ ಯಾರದು? ಎಂದು ನ್ಯಾಯಾಲಯ ಪ್ರಶ್ನಿಸಿತು.

ಕೇಂದ್ರ ಸರಕಾರವು ಕೋವಿಡ್-19 ಸಾಂಕ್ರಾಮಿಕದ ಸಂಭಾವ್ಯ ಮೂರನೆ ಅಲೆಯನ್ನ ಎದುರಿಸಲು ಕೇಂದ್ರ ಸರಕಾರವು ಸಿದ್ಧತೆಯನ್ನು ನಡೆಸುತ್ತಿದೆಯೇ ಎಂಬುದನ್ನು ತಾನು ತಿಳಿಯಬಯಸುವುದಾಗಿಯೂ ನ್ಯಾಯಾಲಯ ಈ ಸಂದರ್ಭದಲ್ಲಿ ತಿಳಿಸಿತು. ಒಂದು ವೇಳೆ ದೇಶದಲ್ಲಿ ಮೂರನೆ ಅಲೆ ಅಪ್ಪಳಿಸಿದಲ್ಲಿ ಆಮ್ಲಜನಕ, ಔಷಧಿ ಹಾಗೂ ಆಸ್ಪತ್ರೆ ಹಾಸಿಗೆಗಳ ಕೊರತೆಯು ಇನ್ನಷ್ಟು ಬಿಗಡಾಯಿಸಲಿದೆ ಎಂದು ಅದು ಅಭಿಪ್ರಾಯಿಸಿತು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X