Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಲಾಕ್‌ಡೌನ್ ಪರಿಣಾಮಕಾರಿ...

ಮಂಗಳೂರು: ಲಾಕ್‌ಡೌನ್ ಪರಿಣಾಮಕಾರಿ ಜಾರಿಗೆ ನಾಗರಿಕರ ಸಲಹೆ ಬಯಸಿದ ಪೊಲೀಸ್ ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ8 May 2021 9:41 PM IST
share
ಮಂಗಳೂರು: ಲಾಕ್‌ಡೌನ್ ಪರಿಣಾಮಕಾರಿ ಜಾರಿಗೆ ನಾಗರಿಕರ ಸಲಹೆ ಬಯಸಿದ ಪೊಲೀಸ್ ಕಮಿಷನರ್

ಮಂಗಳೂರು, ಮೇ 8: ರಾಜ್ಯ ಸರಕಾರವು ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ಘೋಷಿಸಿರುವ ಲಾಕ್‌ಡೌನ್‌ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಟ್ವೀಟ್ ಮೂಲಕ ನಾಗರಿಕರ ಸಲಹೆ ಬಯಸಿದ್ದಾರೆ. ಅಲ್ಲದೆ ಮೇ 9ರಂದು ಟ್ವೀಟರ್ ಹಾಗೂ ಫೇಸ್‌ಬುಕ್ ಲೈವ್ ಮೂಲಕ ಜನಾಭಿಪ್ರಾಯ ಆಲಿಸಲು ನಿರ್ಧರಿಸಿದ್ದಾರೆ.

ಈ ಕುರಿತು ಶನಿವಾರ ಮಧ್ಯಾಹ್ನ ಮಾಡಿದ ಟ್ವೀಟ್‌ಗೆ ಅಭಿಪ್ರಾಯಗಳ ಮಹಾಪೂರವೇ ಹರಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ನಾಗರಿಕರು ಹಲವು ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಕೋವ್ಯಾಕ್ಸಿನ್ ಬಂದಿಲ್ಲ, ಕೋವಿಶೀಲ್ಡ್ ಸರಿಯಾಗಿ ಸಿಗುತ್ತಿಲ್ಲ. ಲಸಿಕೆ ಹಾಕಿಸಿಕೊಳ್ಳಲು ಹಾಗೂ ಟೋಕನ್‌ಗಾಗಿ ಲಸಿಕಾ ಕೇಂದ್ರಗಳಿಗೆ ಬರುವುದನ್ನು ತಡೆಯಬೇಕು. ಜನರಿದ್ದಲ್ಲಿಗೆ ತೆರಳಿ ಲಸಿಕೆ ನೀಡುವಂತಾಗಬೇಕು. ಲಸಿಕಾ ಕೇಂದ್ರಗಳೂ ಕೂಡ ಕೋವಿಡ್ ಹರಡಲು ಹಾಸ್ಪಾಟ್ ಆಗುತ್ತವೆ ಎಂಬ ಅಭಿಪ್ರಾಯವನ್ನು ನಾಗರಿಕರೊಬ್ಬರು ವ್ಯಕ್ತಪಡಿಸಿದ್ದಾರೆ.

ಮನೆ ಮನೆಗೆ ದಿನಸಿ ಸಾಮಗ್ರಿ ಮತ್ತು ತರಕಾರಿ ಡೆಲಿವರಿ ಮಾಡಬೇಕು. ಈ ಅಂಗಡಿಗಳು ಮಧ್ಯಾಹ್ನ 12 ಗಂಟೆಯವರೆಗೆ ತೆರೆದಿದ್ದರೆ ಉತ್ತಮ ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಹಾಲು ಮತ್ತು ತರಕಾರಿಗೆ ಖರೀದಿಗೆ ನಿತ್ಯವೂ ಅವಕಾಶ ಬೇಡ, ದಿನಬಿಟ್ಟು ದಿನ ಸಾಕು. ಮನೆ ಸಮೀಪದ ಅಂಗಡಿಯಿಂದಲೇ ಹಾಲು, ತರಕಾರಿ ಖರೀದಿಗೆ ಸೂಚನೆ ನೀಡಬೇಕು ಎಂದು ಇನ್ನೊಬ್ಬರು ಸಲಹೆ ಮಾಡಿದ್ದಾರೆ.

ಕೋವಿಡ್ ಸಂಪೂರ್ಣ ನಿಲ್ಲಬೇಕಾದರೆ ಮೊದಲಿಗೆ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ಭಯ ದೂರವಾಗಬೇಕು. ಆಸ್ಪತ್ರೆಗಳ ಲೂಟಿ ನಿಂತಾಗ ಮಾತ್ರ ಕೊರೋನ ಕೂಡ ಸಾಯುತ್ತದೆ. ದೃಶ್ಯ ಮಾಧ್ಯಮಗಳು ಜನರಲ್ಲಿ ಮತ್ತಷ್ಟು ಭಯ ಹೆಚ್ಚಿಸುತ್ತವೆ ಎಂದು ನಾಗರಿಕರೊಬ್ಬರು ಆರೋಪಿಸಿದ್ದಾರೆ.

ಕೋವಿಡ್ ಸೋಂಕಿನ ಸರಪಳಿ ಕಡಿತಗೊಳ್ಳಬೇಕಾದರೆ ಜನರು ಮನೆಯಲ್ಲೇ ಇರಬೇಕು. ಅದಕ್ಕಾಗಿ ಸರಕಾರವೇ ಅವಶ್ಯಕ ಕುಟುಂಬಗಳಿಗೆ ಪ್ರತಿ 15 ದಿನಕ್ಕೆ ಬೇಕಾಗುವಷ್ಟು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ಮಹಿಳೆಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹಂಪನಕಟ್ಟೆ, ಕ್ಲಾಕ್‌ಟವರ್, ಸೂಪರ್ ಮಾರ್ಕೆಟ್‌ಗಳಲ್ಲಿ ಜನಸಂದಣಿಗೆ ಅವಕಾಶ ನೀಡಬಾರದು. ವಾಹನಗಳಿಂದ ಉಗುಳುವವರು ಸೋಂಕನ್ನು ಪಸರಿಸುವವರು, ಮಾಸ್ಕ್ ಧರಿಸದವರಿಗೂ ದಂಡ ಮೊತ್ತ 1 ಸಾವಿರಕ್ಕೆ ಏರಿಸಬೇಕು. ಬೆಳಗ್ಗೆ 10 ಗಂಟೆಯೊಳಗೆ ಯಾರನ್ನೂ ತಡೆಯಬೇಡಿ, ನಂತರ ಯಾರನ್ನೂ ಬಿಡಬೇಡಿ ಎಂದು ಒಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X