Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಸೋಂಕು ನಿರ್ವಹಣೆಯಲ್ಲಿ ಆಡಳಿತದ...

ಕೊರೋನ ಸೋಂಕು ನಿರ್ವಹಣೆಯಲ್ಲಿ ಆಡಳಿತದ ಸಂಪೂರ್ಣ ವೈಫಲ್ಯ: ವೀರಪ್ಪ ಮೊಯ್ಲಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ8 May 2021 11:23 PM IST
share
ಕೊರೋನ ಸೋಂಕು ನಿರ್ವಹಣೆಯಲ್ಲಿ ಆಡಳಿತದ ಸಂಪೂರ್ಣ ವೈಫಲ್ಯ: ವೀರಪ್ಪ ಮೊಯ್ಲಿ ಟೀಕೆ

ಹೊಸದಿಲ್ಲಿ, ಮೇ 8: ಕೊರೋನ ಸೋಂಕಿನ ಸಮಸ್ಯೆಯನ್ನು ಸೂಕ್ತವಾಗಿ ನಿರ್ವಹಿಸುವಲ್ಲಿ ಕೇಂದ್ರ ಸರಕಾರ ಎಡವಿದೆ. ಇಲ್ಲಿ ಆಡಳಿತದ ಸಂಪೂರ್ಣ ವೈಫಲ್ಯ ಮತ್ತು ರಾಷ್ಟ್ರೀಯ ಕಾರ್ಯತಂತ್ರದ ಕೊರತೆ ಎದ್ದುಕಾಣುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ. ಈಗ ದೇಶದಲ್ಲಿರುವ ಸ್ಥಿತಿಯನ್ನು ಯುದ್ಧದ ರೀತಿಯಲ್ಲಿ ಪರಿಗಣಿಸಿ ಕಾರ್ಯತಂತ್ರ ರೂಪಿಸಬೇಕಿದೆ. ಆದರೆ ರಾಜ್ಯಗಳಿಗೆ ಆಮ್ಲಜನಕ ಹಂಚಿಕೆ, ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಬೆಡ್, ಆಮ್ಲಜನಕ ಅಥವಾ ವೆಂಟಿಲೇಟರ್ ಪೂರೈಕೆಗೆ ಸೂಕ್ತ ಕಾರ್ಯನೀತಿ ರೂಪಿಸಲಾಗಿಲ್ಲ ಎಂದು ಮೊಯ್ಲಿ ಹೇಳಿದ್ದಾರೆ.

ಸೋಂಕಿನ ಪ್ರಥಮ ಮತ್ತು ಎರಡನೇ ಅಲೆಯ ಬಗ್ಗೆ ತಜ್ಞರು ಮುಂಚಿತವಾಗಿಯೇ ಎಚ್ಚರಿಸಿದ್ದರೂ ಇದನ್ನು ಎದುರಿಸಲು ಕೇಂದ್ರ ಸರಕಾರ ಮತ್ತು ಕೆಲವು ರಾಜ್ಯಗಳು ಸಾಕಷ್ಟು ಸನ್ನದ್ಧತೆ ಮಾಡಿಕೊಳ್ಳದಿರುವುದು ಆತಂಕದ ವಿಷಯವಾಗಿದೆ. ದೇಶದಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರಪ್ರದೇಶ, ಕೇರಳ, ತಮಿಳುನಾಡು ಇತ್ಯಾದಿ ಹಲವು ರಾಜ್ಯಗಳು ಕೊರೋನದ ಹಾಟ್ಸ್ಪಾಟ್ ಆಗಿ ಗುರುತಿಸಿಕೊಂಡಿವೆ. ಇನ್ನೇನು 3ನೇ ಅಲೆಯೂ ಬಾಗಿಲನ್ನು ಬಡಿಯಲಿದೆ. ಇದು ಇನ್ನಷ್ಟು ವಿನಾಶಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. 

ದಾಸ್ತಾನು ಇರಿಸುವ ವಿಷಯ ಹಾಗಿರಲಿ, ಆಮ್ಲಜನಕದ ಪೂರೈಕೆಯಲ್ಲಿ ಈಗ ಎದುರಾಗಿರುವ ಕೊರತೆಯನ್ನು ಸರಿದೂಗಿಸಲೇ ಕೇಂದ್ರ ಸರಕಾರ ಹೆಣಗುತ್ತಿದೆ. ಈ ಹಿನ್ನೆಲೆಯಲ್ಲಿ, ಸಮರೋಪಾದಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ರಕ್ಷಣಾ ಪಡೆಗಳ ಸೇವೆಯನ್ನು ಪಡೆಯಬೇಕು. ಎಲ್ಲಾ ತೈಲ ಉತ್ಪಾದನಾ ಸಂಸ್ಥೆಗಳೂ ಆಮ್ಲಜನಕ ಉತ್ಪಾದನೆಯನ್ನು ಹೆಚ್ಚುಗೊಳಿಸಬೇಕು. ಇಂತಹ ಸಂದರ್ಭದಲ್ಲಿ ಪ್ರಧಾನಿ ಮುಂಚೂಣಿಯಲ್ಲಿ ನಿಂತು ನಿರ್ದೇಶಿಸಬೇಕು. ಆದರೆ ಅವರು ಗೃಹ ಸಚಿವರೊಂದಿಗೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು ಎಂದು ಮೊಯ್ಲಿ ಟೀಕಿಸಿದರು.

ಈ ಸಂಕಷ್ಟದ ಸಂದರ್ಭದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳು ಸರಕಾರವನ್ನು ಎಚ್ಚರಿಸಿ, ಕೆಲಸ ಮಾಡುವಂತೆ ತರಾಟೆಗೆತ್ತಿಕೊಳ್ಳುತ್ತಿರುವುದು ನಿರಾಶೆಯ ಕಾರ್ಮೋಡದ ನಡುವಿನ ಆಶಾಕಿರಣದಂತೆ ಗೋಚರಿಸಿದೆ ಎಂದವರು ಹೇಳಿದ್ದಾರೆ. ಈಗ ಜಾರಿಯಲ್ಲಿರುವ ಲಸಿಕಾ ಅಭಿಯಾನದ ವ್ಯಾಪ್ತಿಗೆ ಒಳಪಡದ ಜನರಿಗೆ ಸೂಕ್ತ ವೈದ್ಯಕೀಯ ವಿಮೆ ಒದಗಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X