ಲಾಕ್ಡೌನ್ ಗೊಂದಲ: ಗ್ರಾಮೀಣ ಪ್ರದೇಶದ ಜನತೆ ದಂಗೆ ಎದ್ದರೂ ಆಶ್ಚರ್ಯ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು, ಮೇ 9: `ಕೊರೋನ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರ(ಮೇ 10)ದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.
ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಪರಿಷ್ಕೃತ ಲಾಕ್ಡೌನ್ ಅನ್ವಯ ಬೆಳಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ರಾಜ್ಯ ಬಿಜೆಪಿ ಸರಕಾರದ ಮೂರ್ಖತನದ ನಿರ್ಧಾರ' ಎಂದು ಇದೇ ಸಂದರ್ಭದಲ್ಲಿ ಟೀಕಿಸಿದ್ದಾರೆ.
'ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ. ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ? ಲಾಕ್ಡೌನ್ ಜನವಿರೋಧಿ' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
'ಹೊಸ ಲಾಕ್ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ. ಆದರೆ, ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್ನಲ್ಲಿ ಪಾರ್ಸಲ್ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರಕಾರ?' ಎಂದು ಸಿದ್ದರಾಮಯ್ಯ, ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಹೊಸ ಲಾಕ್ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ' ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಿದ್ದರಾಮಯ್ಯ ಇದೇ ವೇಳೆ ಮನವಿ ಮನವಿ ಮಾಡಿದ್ದಾರೆ.
'ಕೊರೋನ ನಿಯಂತ್ರಿಸಲು ಲಾಕ್ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದೇ ವೇಳೆ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ @BJP4Karnataka ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ.
— Siddaramaiah (@siddaramaiah) May 9, 2021
ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ.@CMofKarnataka#AntiPeopleLockdown
1/6
ಪರಿಷ್ಕೃತ ಲಾಕ್ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು @BJP4Karnataka ಸರ್ಕಾರದ ಮೂರ್ಖತನದ ನಿರ್ಧಾರ.@CMofKarnataka#AntiPeopleLockdown
— Siddaramaiah (@siddaramaiah) May 9, 2021
2/6
ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?#AntiPeopleLockdown
— Siddaramaiah (@siddaramaiah) May 9, 2021
3/6
ಹೊಸ ಲಾಕ್ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ.
— Siddaramaiah (@siddaramaiah) May 9, 2021
ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ.
ಹೊಟೇಲ್ನಲ್ಲಿ ಪಾರ್ಸಲ್ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ.
ಇದೆಂತಹ ತುಘಲಕ್ ಸರ್ಕಾರ?#AntiPeopleLockdown
4/6
ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ
— Siddaramaiah (@siddaramaiah) May 9, 2021
ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ
ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ.@CMofKarnataka#AntiPeopleLockdown
5/6
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ.
— Siddaramaiah (@siddaramaiah) May 9, 2021
ಆದರೆ @CMofKarnataka ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ
ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು.
ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು.#AntiPeopleLockdown
6/6







