Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೋದಿಂದ ಮೂರು ಅಗ್ಗದ ವೆಂಟಿಲೇಟರ್ ಗಳು...

ಇಸ್ರೋದಿಂದ ಮೂರು ಅಗ್ಗದ ವೆಂಟಿಲೇಟರ್ ಗಳು ಮತ್ತು ಆಮ್ಲಜನಕ ಸಾಂದ್ರಕ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ9 May 2021 9:51 PM IST
share
ಇಸ್ರೋದಿಂದ ಮೂರು ಅಗ್ಗದ ವೆಂಟಿಲೇಟರ್ ಗಳು ಮತ್ತು ಆಮ್ಲಜನಕ ಸಾಂದ್ರಕ ಅಭಿವೃದ್ಧಿ

ತಿರುವನಂತಪುರ, ಮೇ 9: ಆಮ್ಲಜನಕ ಮತ್ತು ವೆಂಟಿಲೇಟರ್ಗಳ ಕೊರತೆಯಿಂದ ದೇಶಾದ್ಯಂತ ಹಲವಾರು ಕೋವಿಡ್-19 ರೋಗಿಗಳು ಸಾವನ್ನಪ್ಪುತ್ತಿರುವ ಈ ಸಂದರ್ಭದಲ್ಲಿ ಇಲ್ಲಿಯ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಕ್ರಮ ಸಾರಾಭಾಯಿ ಅಂತರಿಕ್ಷ ಕೇಂದ್ರ (ವಿಎಸ್ಎಸ್ಸಿ)ವು ಮೂರು ವಿವಿಧ ಮಾದರಿಗಳ ವೆಂಟಿಲೇಟರ್ಗಳನ್ನು ಮತ್ತು ಆಮ್ಲಜನಕ ಸಾಂದ್ರಕವನ್ನು ಅಭಿವೃದ್ಧಿಗೊಳಿಸಿರುವುದಾಗಿ ರವಿವಾರ ತಿಳಿಸಿದೆ.

‌ಈ ವೆಂಟಿಲೇಟರ್ಗಳು ಮತ್ತು ಆಮ್ಲಜನಕ ಸಾಂದ್ರಕದ ವಾಣಿಜ್ಯ ಉತ್ಪಾದನೆಗಾಗಿ ಈ ತಿಂಗಳಲ್ಲಿಯೇ ತಂತ್ರಜ್ಞಾನವನ್ನು ವರ್ಗಾಯಿಸಲಾಗುವುದು ಎಂದು ವಿಎಸ್ಎಸ್ಸಿ ನಿರ್ದೇಶಕ ಎಸ್.ಸೋಮನಾಥ ಅವರು ತಿಳಿಸಿದರು.

ಇಸ್ರೋ ಅಭಿವೃದ್ಧಿಗೊಳಿಸಿರುವ ವೆಂಟಿಲೇಟರ್ಗಳಿಗೆ ಸುಮಾರು ಒಂದು ಲಕ್ಷ ರೂ.ಬೆಲೆ ನಿಗದಿಯಾಗುವ ಸಾಧ್ಯತೆಯಿದ್ದು,ಹಾಲಿ ಐದು ಲಕ್ಷ ರೂ.ಬೆಲೆಯಿರುವ ಮಿನಿ ಸಾಂಪ್ರದಾಯಿಕ ವೆಂಟಿಲೇಟರ್ಗಳಿಗೆ ಹೋಲಿಸಿದರೆ ಮಿತವ್ಯಯಿ ಮತ್ತು ನಿರ್ವಹಿಸಲು ಸುಲಭವಾಗಿವೆ.
 
ಈ ವೆಂಟಿಲೇಟರ್ಗಳ ವಿನ್ಯಾಸ ಮತ್ತು ವೈಶಿಷ್ಟಗಳನ್ನು ಅವಲಂಬಿಸಿ ಅವುಗಳನ್ನು ಪ್ರಾಣ,ವಾಯು ಮತ್ತು ಸ್ವಸ್ಥ ಎಂದು ಹೆಸರಿಸಲಾಗಿದೆ. ಎಲ್ಲ ಮೂರೂ ವೆಂಟಿಲೇಟರ್ಗಳು ಬಳಕೆದಾರ ಸ್ನೇಹಿಯಾಗಿದ್ದು,ಸಂಪೂರ್ಣ ಸ್ವಯಂಚಾಲಿತವಾಗಿವೆ,ಟಚ್ ಸ್ಕ್ರೀನ ಸೌಲಭ್ಯಗಳನ್ನು ಹೊಂದಿದ್ದು ಎಲ್ಲ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿವೆ. 

ವೈದ್ಯರು ಮತ್ತು ತಜ್ಞರು ಇವುಗಳ ಪರಿಣಾಮಕಾರಿತ್ವವನ್ನು ಪರೀಕ್ಷಿಸಿದ್ದಾರೆ ಮತ್ತು ಅಂತರಾಷ್ಟ್ರೀಯ ಮಾನದಂಡಗಳನ್ನು ಪಾಲಿಸಿವೆ ಎಂದು ದೃಢಪಡಿಸಿದ್ದಾರೆ ಎಂದು ತಿಳಿಸಿದ ಸೋಮನಾಥ,ಮೊದಲ ಅಲೆಯ ಸಂದರ್ಭದಲ್ಲಿ 2020 ಮಾರ್ಚ್ನಲ್ಲಿಯೇ ವಿಎಸ್ಎಸ್ಸಿ ಈ ವೆಂಟಿಲೇಟರ್ಗಳನ್ನು ಅಭಿವೃದ್ಧಿಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ಆದರೆ ವರ್ಷಾಂತ್ಯದ ವೇಳೆಗೆ ಸಾಂಕ್ರಾಮಿಕದ ಭೀತಿ ಕಡಿಮೆಯಾಗಿದ್ದರಿಂದ ಕಾರ್ಯವು ನಿಧಾನಗೊಂಡಿತ್ತು. ಎರಡನೇ ಅಲೆಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವನ್ನು ಚುರುಕುಗೊಳಿಸುವಂತೆ ಸಂಸ್ಥೆಗೆ ಸೂಚಿಸಲಾಗಿತ್ತು ಎಂದರು.
 
‘ಪ್ರಾಣ’ವೆಂಟಿಲೇಟರ್ ಅಂಬು ಬ್ಯಾಗ್ನ ಸ್ವಯಂಚಾಲಿತ ಒತ್ತಡದ ಮೂಲಕ ರೋಗಿಯ ಉಸಿರಾಟಕ್ಕೆ ಅನುಕೂಲವನ್ನು ಕಲ್ಪಿಸುತ್ತದೆ,‘ಸ್ವಸ್ಥ’ ವಿದ್ಯುತ್ ಶಕ್ತಿಯ ಅಗತ್ಯವಿಲ್ಲದೆ ಕಾರ್ಯ ನಿರ್ವಹಿಸುತ್ತದೆ ಮತ್ತು ‘ವಾಯು’ ಮಾರುಕಟ್ಟೆಯಲ್ಲಿ ಲಭ್ಯವಿರುವ ದುಬಾರಿ ಬೆಲೆಯ ವೆಂಟಿಲೇಟರ್ಗಳಿಗೆ ಸಮನಾದ ಅಗ್ಗದ ವೆಂಟಿಲೇಟರ್ ಆಗಿದೆ. ವೈದ್ಯಕೀಯ ವಾಯು/ಆಮ್ಲಜನಕ ಅಥವಾ ವಾತಾವರಣದಲ್ಲಿಯ ವಾಯುವಿನಿಂದ ಕಾರ್ಯ ನಿರ್ವಹಿಸುವಂತೆ ಇವುಗಳನ್ನು ರೂಪಿಲಾಗಿದೆ ಎಂದು ಅವರು ತಿಳಿಸಿದರು.

ಸುಲಭವಾಗಿ ಸಾಗಿಸಬಹುದಾದ ‘ಶ್ವಾಸ’ ಹೆಸರಿನ ವೈದ್ಯಕೀಯ ಆಮ್ಲಜನಕ ಸಾಂದ್ರಕವನ್ನೂ ವಿಎಸ್ಎಸ್ಸಿ ಅಭಿವೃದ್ಧಿಗೊಳಿಸಿದೆ. ಇದು ಪ್ರತಿ ನಿಮಿಷಕ್ಕೆ 10 ಲೀ.ಸಂವರ್ಧಿತ ಆಮ್ಲಜನಕವನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದ್ದು,ಏಕಕಾಲಕ್ಕೆ ಇಬ್ಬರು ರೋಗಿಗಳಿಗೆ ಬಳಸಬಹುದಾಗಿದೆ. ಇದು ಪ್ರೆಷರ್ ಸ್ವಿಂಗ್ ಅಡ್ಸಾರ್ಪ್ಶನ್(ಪಿಎಸ್ಎ) ಮೂಲಕ ವಾತಾವರಣದಲ್ಲಿಯ ನೈಟ್ರೋಜನ್ ಅನಿಲವನ್ನು ಪ್ರತ್ಯೇಕಗೊಳಿಸುವ ಮೂಲಕ ಆಮ್ಲಜನಕದ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಸೋಮನಾಥ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X