Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರವು ನೀಡುವ ಹೊಣೆಗಾರಿಕೆಯಿಂದ...

ನೆರವು ನೀಡುವ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ದೌರ್ಜನ್ಯಕ್ಕೆ ಇಳಿದ ಸರಕಾರ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ10 May 2021 9:59 PM IST
share
ನೆರವು ನೀಡುವ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ದೌರ್ಜನ್ಯಕ್ಕೆ ಇಳಿದ ಸರಕಾರ: ಕಾಂಗ್ರೆಸ್

ಬೆಂಗಳೂರು, ಮೇ 10: ಜನತೆ ಮೊದಲೆ ನೊಂದಿದ್ದಾರೆ. ಅವರಿಗೆ ಜೀವದಷ್ಟೇ ಜೀವನವೂ ಮುಖ್ಯ, ಬದುಕು ಸಾಗಿಸುವಲ್ಲಿ ಬಸವಳಿದಿದ್ದಾರೆ. ಲಾಕ್‍ಡೌನ್ ಹೆಸರಲ್ಲಿ ಜನತೆಯ ಮೇಲಿನ ಪೊಲೀಸ್ ದೌರ್ಜನ್ಯ ನಿಲ್ಲಿಸಬೇಕು. ಲಾಠಿಗಳಿಂದ ಕೊರೋನ ಓಡಿಸಲಾಗದು. ಜನತೆಗೆ ನೆರವು ನೀಡುವ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಸರಕಾರ ದೌರ್ಜನ್ಯಕ್ಕೆ ಇಳಿದಿದೆ. ಲಾಠಿ ದೌರ್ಜನ್ಯ ನಿಲ್ಲಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಕಾಂಗ್ರೆಸ್, ಪೊಲೀಸರು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆ ಹೊರತು ದೌರ್ಜನ್ಯಕ್ಕೆ ಇಳಿಯಬಾರದು. ಕಳೆದ ವರ್ಷದ ಲಾಕ್‍ಡೌನ್ ಮಾಡಿದ ಹಾನಿಯಿಂದ ಇನ್ನೂ ಸುಧಾರಿಸಿಕೊಂಡಿಲ್ಲ, ಅದಲ್ಲದೆ ಕಳೆದ 15 ದಿನದಿಂದ ಅಘೋಷಿತ ಲಾಕ್‍ಡೌನ್‍ನಿಂದ ಮತ್ತಷ್ಟು ಜರ್ಜರಿತರಾಗಿದ್ದಾರೆ. ಈ ಹೊತ್ತಿನಲ್ಲಿ ಪೊಲೀಸರು ಸಂಯಮದಿಂದ ವರ್ತಿಸದೆ ಹೋದರೆ ಜನತೆ ದಂಗೆ ಏಳುವ ಸಂಭವವಿದೆ ಎಂದು ತಿಳಿಸಿದೆ.

ಬೋನಿನೊಳಗೆ ಕೂಡಿಟ್ಟ ಪ್ರಾಣಿಗಳಿಗೇ ಆಹಾರ ಒದಗಿಸಲಾಗುತ್ತದೆ. ಆದರೆ ಈ ಸರಕಾರ "ಜನತೆ ಬೋನಿನೊಳಗೆ ಇರಬೇಕು ಆದರೆ ಆಹಾರ ಮಾತ್ರ ನೀಡಲಾರೆವು" ಎನ್ನುತ್ತಿದೆ. ಯಾವುದೇ ನೆರವನ್ನೂ ನೀಡದ ಸರಕಾರ ಜನತೆಯನ್ನು ಕೂಡಿಹಾಕಿ ಪೊಲೀಸರ ಕೈಗೆ ಲಾಠಿ ಕೊಟ್ಟರೆ ಜನರನ್ನು ಕಪಾಡಿದಂತಾಗದು ಎಂದು ಕಾಂಗ್ರೆಸ್ ಹೇಳಿದೆ.

ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರಕ್ಕಿಂತಲೂ ಜನತೆ ಹೆಚ್ಚು ಜವಾಬ್ದಾರಿಯುತವಾಗಿದ್ದಾರೆ, ಸರಕಾರಕ್ಕಿಂತಲೂ ಮುಂಜಾಗ್ರತೆಯ ಜಾಗೃತಿ ಜನತೆಗಿದೆ. ಜನರು ಬದುಕಿನ ಅನಿವಾರ್ಯತೆಗೆ ಹೊರತು ಆಟವಾಡಲು ರಸ್ತೆಗೆ ಬರುತ್ತಿಲ್ಲ. ಸರಕಾರ ಪೊಲೀಸ್ ದೌರ್ಜನ್ಯ ನಿಲ್ಲಿಸಿ, ರೇಷನ್ ಕಿಟ್‍ಗಳನ್ನು ಮನೆ ಬಾಗಿಲಿಗೆ ಒದಗಿಸಲಿ. ಅಗತ್ಯ ನೆರವು ಘೋಷಿಸಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಲಸಿಕೆ ನೀಡುವಿಕೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣ ವಿಫಲಗೊಂಡಿವೆ. 18 ವರ್ಷ ಮೇಲ್ಪಟ್ಟವರಿಗೆ ನೋಂದಣಿ ರದ್ದುಗೊಳಿಸಿದ ಸರಕಾರ ಈಗ ನೋಂದಾಯಿಸಿದವರಿಗೆ ಮಾತ್ರ ಲಸಿಕೆ ಎನ್ನುತ್ತಿದೆ. ಲಸಿಕೆ ಬಗ್ಗೆ ಪ್ರಚಾರದ ಅಬ್ಬರ ನಡೆಸುತ್ತಿದ್ದ ಆರೋಗ್ಯ ಸಚಿವ ಸುಧಾಕರ್, ರಾಜ್ಯ ಬಿಜೆಪಿ ಇಂತಹ ಅಧೋಗತಿ ಏಕೆ ಬಂತು? ಇಂತಹ ವೈಫಲ್ಯತೆಗೆ ನಿಮಗೇಕೆ ಆಡಳಿತ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X