Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಮೂರನೆ ಅಲೆ ನಿಯಂತ್ರಣಕ್ಕೆ ಟಾಸ್ಕ್...

ಕೊರೋನ ಮೂರನೆ ಅಲೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 May 2021 10:01 PM IST
share
ಕೊರೋನ ಮೂರನೆ ಅಲೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ

ಬೆಂಗಳೂರು, ಮೇ 10: ಮಹಾಮಾರಿ ಕೊರೋನ ವೈರಸ್ ಸೋಂಕಿನ ಮೂರನೆ ಅಲೆಗೆ ನಿಯಂತ್ರಣಕ್ಕೆ ಈಗಿನಿಂದಲೆ ಸಿದ್ಧರಾಗಬೇಕಿದ್ದು, ಅದಕ್ಕೊಂದು ಟಾಸ್ಕ್ ಫೋರ್ಸ್ ಕಮಿಟಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದ್ದಾರೆ.

ಸೋಮವಾರ ಸಿಎಂ ಅಧಿಕೃತ ನಿವಾಸಿ ಕಾವೇರಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿ ಜಿಲ್ಲೆಗಳ ಕರೋನ ಪರಿಸ್ಥಿತಿ ಹತೋಟಿಗೆ ತರಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು

ಕೋವಿಡ್-19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಹೇರಿರುವ ಲಾಕ್‍ಡೌನ್ ಸಂದರ್ಭದಲ್ಲಿ ಕಟ್ಟುನಿಟ್ಟಿನಿಂದ ಪಾಲಿಸಬೇಕು. ಜನರು ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸಬೇಕು. ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮ್‍ಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚಿಸಿದರು.

ಖಾಸಗಿ ಆಸ್ಪತ್ರೆಗಳ ಬೆಡ್‍ಗಳ ಬಗ್ಗೆ ನಿಗಾ ಇಡಬೇಕು. ಅಲ್ಲದೆ, ಆಕ್ಸಿಜನ್, ರೆಮ್‍ಡಿಸಿವಿರ್ ಹಾಗೂ ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು. ವಾರ್ ರೂಮ್‍ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು. ಹಂತ-ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಲೆ ಕೆಲಸ ಆರಂಭಿಸಬೇಕು ಎಂದು ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X