Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಪೂರ್ಣ ಲಾಕ್‌ಡೌನ್ : ಉಡುಪಿ...

ಸಂಪೂರ್ಣ ಲಾಕ್‌ಡೌನ್ : ಉಡುಪಿ ಜಿಲ್ಲೆಯಾದ್ಯಂತ ಪೊಲೀಸ್ ಕಟ್ಟೆಚ್ಚರ

ನಿಯಮ ಉಲ್ಲಂಘಿಸಿದ 109 ವಾಹನಗಳು ವಶ: 14 ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ10 May 2021 10:40 PM IST
share
ಸಂಪೂರ್ಣ ಲಾಕ್‌ಡೌನ್ : ಉಡುಪಿ ಜಿಲ್ಲೆಯಾದ್ಯಂತ ಪೊಲೀಸ್ ಕಟ್ಟೆಚ್ಚರ

ಉಡುಪಿ, ಮೇ 10: ಇಂದಿನಿಂದ ಜಾರಿಯಾಗಿರುವ ಸಂಪೂರ್ಣ ಲಾಕ್ ಡೌನ್‌ನಲ್ಲಿ ಅಗತ್ಯವಸ್ತುಗಳ ಖರೀದಿಗೆ ವಾಹನ ಬಳಕೆಗೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನಗತ್ಯವಾಗಿ ಓಡಾಟ ನಡೆಸಿದ ಒಟ್ಟು 109 ವಾಹನ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ 14 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ತುರ್ತು ಕಾರಣ ಹೊರತು ಪಡಿಸಿ ಉಳಿದವುಗಳಿಗೆ ವಾಹನ ಬಳಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದರೂ ಬೆಳಗ್ಗೆ ವಾಹನಗಳ ಸಂಚಾರ ಸಾಮಾನ್ಯವಾಗಿ ಕಂಡುಬಂತು. ಜಿಲ್ಲೆಯ ಗಡಿ ಭಾಗ ಸಹಿತ ಒಟ್ಟು 32 ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ ವಾಹನ ತಪಾಸಣೆ ನಡೆಸಲಾ ಯಿತು. ಕಾಪು, ಕುಂದಾ ಪುರ, ಕೋಟ, ಬೈಂದೂರು, ಹೆಬ್ರಿ, ಮಲ್ಪೆ, ಕಾರ್ಕಳ, ಶಿರ್ವ, ಪಡುಬಿದ್ರೆಗಳಲ್ಲೂ ಪೊಲೀಸರು ತಪಾಸಣೆ ಕಾರ್ಯ ನಡೆಸಿದರು.

ಉಡುಪಿ ನಗರದ ಕಲ್ಸಂಕ, ಶಿರಿಬೀಡು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚೆಕ್‌ಪೋಸ್ಟ್ ನಿರ್ಮಿಸಿ ವಾಹನ ತಾಪಸಣೆ ನಡೆಸಲಾಯಿತು. ಇಲ್ಲಿ ಕಾರಣ ಇಲ್ಲದೆ ಸಂಚರಿಸಿದ ಎರಡು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅದೇ ರೀತಿ 44 ಪ್ರಕರಣಗಳನ್ನು ದಾಖಲಿಸಿ 28 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಕಲ್ಸಂಕ ಚೆಕ್‌ಪೋಸ್ಟ್‌ನಲ್ಲಿ ಹಾಗೂ ಅಪರ ಜಿಲ್ಲಾಧಿಕಾರಿ ಶಿರಿಬೀಡು ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ ನಡೆಸಿದರು. ಬ್ರಹ್ಮಾವರದಿಂದ ಉಡುಪಿಗೆ ಕಾರಣ ಇಲ್ಲದೆ ಆಗಮಿಸಿದ ಬೈಕ್ ಸವಾರ ವಿರುದ್ಧ ಎಪಿಡಾಮಿಕ್ ಕಾಯಿದೆಯಡಿ ಪ್ರಕರಣ ದಾಖಲಿಸಿ ಬೈಕ್ ವಶಪಡಿಸಿಕೊಳ್ಳಲಾಗಿದೆ.

ವಾಹನ ಸಂಚಾರಕ್ಕೆ ನಿರ್ಬಂಧಿ ವಿಧಿಸಿರುವುದರಿಂದ ತರಕಾರಿ, ದಿನಸಿ ಅಂಗಡಿ ಗಳಲ್ಲಿ ವ್ಯಾಪಾರ ಕುಸಿತವಾಗಿದೆ. ಹೊಟೇಲಿನಲ್ಲಿ ರಾತ್ರಿ 9ಗಂಟೆಯವರೆಗೆ ಪಾರ್ಸೆಲ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10ಗಂಟೆಯ ನಂತರ ನಗರದ ಎಲ್ಲ ರಸ್ತೆಗಳು ಬೀಕೋ ಎನ್ನುತ್ತಿದ್ದವು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಗತ್ಯ ವಸ್ತುಗಳ ವಾಹನ ಓಡಾಟ ಮಾತ್ರ ಕಂಡುಬಂದವು.

ಕುಂದಾಪುರ ಪೇಟೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅನಗತ್ಯ ಓಡಾಟ ನಡೆಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಅಲ್ಲದೆ ಅಂಗಡಿ- ಮುಂಗಟ್ಟು ಹಾಗೂ ಮೀನು ಮಾರುಕಟ್ಟೆಗಳನ್ನು 10ಗಂಟೆಗೆ ಬಂದ್ ಮಾಡಿಸ ಲಾಯಿತು. ಕುಂದಾಪುರ ಡಿವೈಎಸ್ಪಿಶ್ರೀಕಾಂತ್ ಹಾಗೂ ಎಸ್ಸೈ ಸದಾಶಿವ ಗವರೋಜಿ, ಸಂಚಾರ ಎಸ್ಸೈ ಸುದರ್ಶನ್ ಅವರ ನೇತೃತ್ವದಲ್ಲಿ ಬಿಗಿ ಬಂದೋ ಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಉಡುಪಿ ಜಿಲ್ಲೆಯಾದ್ಯಂತ ಸ್ಥಾಪಿಸಿರುವ 32 ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯ ನಡೆಸಲಾಗಿದೆ. ಅನಗತ್ಯವಾಗಿ ಓಡಾಟ ನಡೆಸಿದ 95 ದ್ವಿಚಕ್ರ ವಾಹನ, ಮೂರು ತ್ರಿ ಚಕ್ರ ವಾಹನ, 12 ಕಾರುಗಳು, ಏಳು ಘನ ವಾಹನಗಳು ಸೇರಿದಂತೆ ಒಟ್ಟು 109 ವಾಹನಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿರುವ ಬಗ್ಗೆ ಉಡುಪಿ-4, ಕಾರ್ಕಳ-4, ಕುಂದಾಪುರದಲ್ಲಿ 6 ಪ್ರಕರಣ ಗಳನ್ನು ದಾಖಲಿಸಿಕೊಳ್ಳಲಾಗಿದೆ.
-ವಿಷ್ಣುವರ್ಧನ್, ಎಸ್ಪಿ ಉಡುಪಿ

ಕೋಟದಲ್ಲೂ ಗ್ರಾಮೀಣ ಮಹಿಳೆಯರ ಪರದಾಟ: ಬೆಳಗ್ಗೆ 8ಗಂಟೆಯಿಂದ ಮಧ್ಯಾಹ್ನ 1ರವರೆಗೆ ಕೋಟ ಹೋಬಳಿಯಲ್ಲಿ ಪಡಿತರ ಸಾಮಾಗ್ರಿಗಳನ್ನು ನೀಡುತ್ತಿದ್ದು ಅದನ್ನು ಪಡೆದು ಕೊಂಡವರು ವಾಹನ ಇಲ್ಲದೆ ಮನೆಗೆ ತೆಗೆದುಕೊಂಡು ಹೋಗಲು ಪರದಾಡುತ್ತಿರುವ ದೃಶ್ಯ ಕಂಡುಬಂತು.

ವೃದ್ದರು, ಮಹಿಳೆಯರು, ಅಂಗವಿಕಲರು, ಮಕ್ಕಳು, ಅನಾರೋಗ್ಯ ಪೀಡಿತರು ಬೆಳಿಗ್ಗೆಯಿಂದ ಪಡಿತರ ಸಾಮಾಗ್ರಿಗಳನ್ನು ಪಡೆದು ಒಂದರಿಂದ ಎರಡು ಕಿಲೋ ಮೀಟರ್ ದೂರ ತಲೆ ಮೇಲೆ ಹೊತ್ತುಕೊಂಡು ಹೋಗುವಂತಾಯಿತು. ಇವರ ಕಷ್ಟ ನೋಡಲಾಗದೆ ಕೋಟ ಸಹಕಾರಿ ವ್ಯವಸಾಯಕ ಸಂಘದ ಮನವಿಯಂತೆ ಕೋಟ ಗ್ರಾಪಂ, ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಗೂಡ್ಸ್ ರಿಕ್ಷಾಗಳ ವ್ಯವಸ್ಥೆಯನ್ನು ಮಾಡಲಾಯಿತು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಡಿತರ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಸಮಾಗ್ರಿಗಳನ್ನು ಪಡೆದವರು ಹೊತ್ತುಕೊಂಡು ಹೋಗಲು ಸಾಧ್ಯವಾಗದೆ ಸರಕಾರಕ್ಕೆ ಹಿಡಿಶಾಪ ಹಾಕುವುದು ಕಂಡುಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X