Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼನನಗೆ ಕೋವಿಡ್‌ ಬಂದಿದೆʼ ಎಂಬ ಕಂಗನಾ...

ʼನನಗೆ ಕೋವಿಡ್‌ ಬಂದಿದೆʼ ಎಂಬ ಕಂಗನಾ ರಣಾವತ್ ಪೋಸ್ಟ್ ಅಳಿಸಿ ಹಾಕಿದ ಇನ್ಸ್ಟಾಗ್ರಾಂ

"ಕೋವಿಡ್‌ ನಾಶ ಮಾಡುತ್ತೇನೆಂದದ್ದಕ್ಕಾಗಿ ಪೋಸ್ಟ್‌ ಅಳಿಸಲಾಗಿದೆ" ಎಂದ ನಟಿ

ವಾರ್ತಾಭಾರತಿವಾರ್ತಾಭಾರತಿ10 May 2021 11:22 PM IST
share
ʼನನಗೆ ಕೋವಿಡ್‌ ಬಂದಿದೆʼ ಎಂಬ ಕಂಗನಾ ರಣಾವತ್ ಪೋಸ್ಟ್ ಅಳಿಸಿ ಹಾಕಿದ ಇನ್ಸ್ಟಾಗ್ರಾಂ

ಹೊಸದಿಲ್ಲಿ, ಮೇ 10: ಪಶ್ಚಿಮಂಗಾಳದ ಚುನಾವಣೋತ್ತರ ಹಿಂಸಾಚಾರದ ಕುರಿತು ಅಸೂಕ್ಷ್ಮ ಹೇಳಿಕೆ ನೀಡಿರುವುದಕ್ಕಾಗಿ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಹ್ಯಾಂಡಲ್ ಅನ್ನು ಟ್ವಿಟ್ಟರ್ ಖಾಯಂ ರದ್ದುಗೊಳಿಸಿದ ದಿನಗಳ ಬಳಿಕ, ಕೊರೋನ ಸಾಂಕ್ರಾಮಿಕ ರೋಗದ ಕುರಿತು ಮಾತನಾಡಿದ ರಾಣಾವತ್ ಅವರ ಪೋಸ್ಟ್ ಒಂದನ್ನು ಇನ್ಸ್ಟಾಗ್ರಾಮ್ ಅಳಿಸಿ ಹಾಕಿದೆ.

ಎರಡು ದಿನಗಳ ಹಿಂದೆ ಕಂಗನಾ ರಣಾವತ್ ಅವರು ಇನ್ಸ್ಟಾಗ್ರಾಂನಲ್ಲಿ ತಾನು ಕೊರೋನ ಸೋಂಕಿಗೆ ಒಳಗಾಗಿದ್ದೇನೆ ಎಂದು ತನ್ನ ಬೆಂಬಲಿಗರಿಗೆ ಮಾಹಿತಿ ನೀಡಿದ್ದರು. ತನ್ನ ಭಾವಚಿತ್ರವನ್ನು ಹಂಚಿಕೊಂಡ ಅವರು, ‘‘ನಾನು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಈ ವೈರಸ್ ನನ್ನ ದೇಹ ಪ್ರವೇಶಿಸುತ್ತದೆ ಎಂದು ನನಗೆ ತಿಳಿದಿರಲಿಲ್ಲ. ಈಗ ನನಗೆ ಅದನ್ನು ಹೇಗೆ ನಾಶಪಡಿಸಬೇಕು ಎಂಬುದು ತಿಳಿದಿದೆ. ಯಾವುದೇ ಶಕ್ತಿ ನಿಮ್ಮ ಮೇಲೆ ಪಾರಮ್ಯ ಮೆರೆಯಲು ಜನರು ಅವಕಾಶ ನೀಡಬಾರದು. ಒಂದು ವೇಳೆ ನೀವು ಭೀತರಾದರೆ, ಅದು ನಿಮ್ಮನ್ನು ಇನ್ನಷ್ಟು ಹೆದರಿಸುತ್ತದೆ. ಇದು ಅಲ್ಪಾವಧಿಯ ಜ್ವರವಲ್ಲದೆ ಬೇರೇನೂ ಅಲ್ಲ. ಆದರೆ ಮಾಧ್ಯಮಗಳು ವ್ಯಾಪಕವಾಗಿ ಸುದ್ದಿ ಮಾಡುತ್ತಿವೆ ಹಾಗೂ ಜನರನ್ನು ಭೀತಿಗೆ ಒಳಪಡಿಸುತ್ತಿವೆ. ಹರಹರ ಮಹಾದೇವ್’’ ಎಂದು ಅವರು ಹೇಳಿದ್ದರು.

ಇನ್ಸ್ಟಾಗ್ರಾಂನಲ್ಲಿ ಈ ಪೋಸ್ಟ್ ಅಪ್ಲೋಡ್ ಮಾಡಿದ ಬಳಿಕ ಅವರು ತೀವ್ರ ಟೀಕೆ ಎದುರಿಸಬೇಕಾಯಿತು. ಕೊರೋನ ಸೋಂಕನ್ನು ಅಲ್ಪಾವಧಿಯ ಜ್ವರ ಎಂದು ಕರೆದಿರುವ ಅವರನ್ನು ದೇಶದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಹಾಗೂ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಬಗ್ಗೆ ಗಮನ ಸೆಳೆಯಲು ಪ್ರಯತ್ನಿ ಸಿದರು. ಕೊರೋನ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಸರಿ ಸುಮಾರು 3 ಲಕ್ಷ ಜನರು ಜೀವ ಕಳೆದುಕೊಂಡಿರುವುದರಿಂದ ಕಂಗನಾ ರಾಣಾವತ್ ಅವರದ್ದು ಅಸೂಕ್ಷ್ಮಹೇಳಿಕೆ ಎಂದು ಇನ್ಸ್ಟಾಗ್ರಾಂ ಖಾತೆದಾರರು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಇನ್ಸ್ಟ್ರಾಗ್ರಾಂ ಕಂಗನಾ ರಾಣಾವತ್ ಅವರ ಪೋಸ್ಟ್ ಅನ್ನು ಅಳಿಸಿತ್ತು. ಆದರೆ, ರವಿವಾರ ಕಂಗನಾ ರಾಣಾವತ್ ಇನ್ಸ್ಟಾಗ್ರಾಂನಲ್ಲಿ, ‘‘ಕೋವಿಡ್ ಅನ್ನು ನಾಶಮಾಡುತ್ತೇನೆ ಎಂದು ಹೇಳಿರುವುದು ಕೆಲವರಿಗೆ ನೋವು ಉಂಟು ಮಾಡಿದೆ. ಆದುದರಿಂದ ಇನ್ಸ್ಟಾಗ್ರಾಂ ನನ್ನ ಪೋಸ್ಟ್ ಅನ್ನು ಅಳಿಸಿದೆ. ಟ್ವಿಟ್ಟರ್ನಲ್ಲಿ ಭಯೋತ್ಪಾದಕರು ಹಾಗೂ ಕಮ್ಯೂನಿಸ್ಟ್ ಅನುಕಂಪೆ ಹೊಂದಿದವರು ಇದ್ದಾರೆ ಎಂದು ನಾನು ಕೇಳಿದ್ದೆ. ಆದರೆ, ಇಲ್ಲಿ ಕೋವಿಡ್ ಅಭಿಮಾನಿಗಳ ಸಂಘ ಅದ್ಭುತ. ನಾನು ಎರಡು ದಿನಗಳ ಕಾಲ ಇನ್ಸ್ಟಾಗ್ರಾಂನಲ್ಲಿ ಇದ್ದೆ. ಆದರೆ, ಒಂದು ವಾರಗಳಿಗಿಂತ ಹೆಚ್ಚು ಇರುವೆ ಎಂದು ನಾನು ಭಾವಿಸಲಾರೆ’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X