Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೋವಿಡ್ ಪರಿಹಾರ ನಿಧಿಗಾಗಿ ವಿಶ್ವನಾಥನ್,...

ಕೋವಿಡ್ ಪರಿಹಾರ ನಿಧಿಗಾಗಿ ವಿಶ್ವನಾಥನ್, ಇತರ ನಾಲ್ವರು ಗ್ರ್ಯಾಂಡ್ ಮಾಸ್ಟರ್ ಗಳಿಂದ ಆನ್ ಲೈನ್ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ11 May 2021 2:44 PM IST
share
ಕೋವಿಡ್ ಪರಿಹಾರ ನಿಧಿಗಾಗಿ ವಿಶ್ವನಾಥನ್, ಇತರ ನಾಲ್ವರು ಗ್ರ್ಯಾಂಡ್ ಮಾಸ್ಟರ್ ಗಳಿಂದ ಆನ್ ಲೈನ್ ಪಂದ್ಯಾಟ

ಹೊಸದಿಲ್ಲಿ: ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಹಾಗೂ ಇತರ ನಾಲ್ವರು ಭಾರತೀಯ ಗ್ರ್ಯಾಂಡ್‌ಮಾಸ್ಟರ್‌ಗಳು ದೇಶದಲ್ಲಿ ಕೋವಿಡ್ -19 ಪರಿಹಾರ ಕಾರ್ಯಗಳಿಗಾಗಿ ಹಣ ಸಂಗ್ರಹಿಸಲು ಗುರುವಾರ ಇತರ ಚೆಸ್ ಆಟಗಾರರೊಂದಿಗೆ ಏಕಕಾಲದಲ್ಲಿ ಆನ್‌ಲೈನ್ ಪ್ರದರ್ಶನ ಪಂದ್ಯಗಳಲ್ಲಿ ಆಡಲಿದ್ದಾರೆ.

ಚೆಸ್ ಡಾಟ್ ಕಾಮ್ ಬ್ಲಿಟ್ಜ್ ಅಥವಾ ಫಿಡೆ ಸ್ಟ್ಯಾಂಡರ್ಡ್ ರೇಟಿಂಗ್ ನಲ್ಲಿ 2000 ಕ್ಕಿಂತ ಕಡಿಮೆ ಇರುವ ಯಾವುದೇ ಆಟಗಾರ ಮಾಜಿ ವಿಶ್ವ ಚಾಂಪಿಯನ್ ಆನಂದ್ ಜೊತೆ ಆಡಲು 150 ಅಮೆರಿಕನ್ ಡಾಲರ್ ಹಾಗೂ ಇತರ ನಾಲ್ವರು ಜಿಎಂಗಳೊಂದಿಗೆ ಆಡಲು 25 ಅಮೆರಿಕನ್ ಡಾಲರ್ ನೋಂದಣಿ ಮೊತ್ತವಾಗಿ ಪಾವತಿಸುವ ಮೂಲಕ ಆಡಬಹುದು.

ಚೆಸ್ ಡಾಟ್ ಕಾಮ್ ನಲ್ಲಿ ಪ್ರಸಾರವಾಗುವ ಪ್ರದರ್ಶನ ಪಂದ್ಯಗಳ ವೇಳೆ ದೇಣಿಗೆ ಸ್ವೀಕರಿಸಲಾಗುವುದು.

ಒಟ್ಟು 10,000 ಡಾಲರ್‌ಗಳವರೆಗಿನ ಎಲ್ಲಾ ದೇಣಿಗೆಗಳಿಗೆ ಇದು ಹೊಂದಿಕೆಯಾಗಲಿದೆ ಎಂದು ವೆಬ್‌ಸೈಟ್ ಹೇಳಿದೆ. ಆನಂದ್, ಕೊನೆರು ಹಂಪಿ, ದ್ರೋಣವಳ್ಳಿ ಹರಿಕಾ, ನಿಹಾಲ್ ಸರಿನ್ ಹಾಗೂ  ಪ್ರಗ್ನಾನಂದ ರಮೇಶ್‌ಬಾಬು ಒಳಗೊಂಡ ಏಕಕಾಲಿಕ ಪ್ರದರ್ಶನಗಳಿಂದ ಬರುವ ಎಲ್ಲಾ ಆದಾಯವು ರೆಡ್‌ಕ್ರಾಸ್ ಇಂಡಿಯಾ ಹಾಗೂ  ಅಖಿಲ ಭಾರತದ ಚೆಕ್‌ಮೇಟ್ ಕೋವಿಡ್ ಉಪಕ್ರಮ ಚೆಸ್ ಫೆಡರೇಶನ್ (ಎಐಸಿಎಫ್)ಗೆ ಸೇರಲಿದೆ.

"ಕೋವಿಡ್ -19 ವಿರುದ್ಧ ಭಾರತ ತೀವ್ರವಾಗಿ ಹೋರಾಡುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಸಮಯದಲ್ಲಿ, ನಾವೆಲ್ಲರೂ ಒಂದು ರೀತಿಯಲ್ಲಿ ಬಾಧಿತರಾಗಿದ್ದೇವೆ. ಯುವಕ ಅಥವಾ ವಯಸ್ಸಾದ ಒಬ್ಬನೇ ಒಬ್ಬ ವ್ಯಕ್ತಿ ಸೋಂಕಿನಿಂದ ಬಾಧಿತನಾಗಿಲ್ಲ ಎಂದು ನಾನು ಭಾವಿಸುವುದಿಲ್ಲ'' ಎಂದು  ಚೆಸ್ ಡಾಟ್ ಕಾಂನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಸಂದೇಶದಲ್ಲಿ ಆನಂದ್ ಹೇಳಿದರು.

"ನಾವು ಭಾರತದಲ್ಲಿ ಕೋವಿಡ್ ಪರಿಹಾರ ಕಾರ್ಯಕ್ರಮವನ್ನು ಬೆಂಬಲಿಸೋಣ. ನೀವು ಭಾರತದ ಕೆಲವು ಅತ್ಯುತ್ತಮ ಗ್ರಾಂಡ್‌ಮಾಸ್ಟರ್‌ಗಳೊಂದಿಗೆ ಆಡಬಹುದು.  ಚೆಸ್ ಡಾಟ್ ಕಾಮ್ ನಿಮ್ಮ ದೇಣಿಗೆಗಳನ್ನು ಸಂಗ್ರಹಿಸುತ್ತಿದೆ. ದಯವಿಟ್ಟು ಈ ಗುರುವಾರ ಚೆಕ್‌ಮೇಟ್ ಕೋವಿಡ್‌ನಲ್ಲಿ ಭಾಗವಹಿಸಲು ಸೈನ್ ಅಪ್ ಮಾಡಿ. ಇದು ನಮ್ಮ ಚೆಸ್ ಭ್ರಾತೃತ್ವದ ಅಲ್ಪ ಕೊಡುಗೆಯಾಗಿದೆ'' ಎಂದು ಆನಂದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X