Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದ ಬಳಿಕ ಇದೀಗ ಉತ್ತರಪ್ರದೇಶದ ಗಂಗಾ...

ಬಿಹಾರದ ಬಳಿಕ ಇದೀಗ ಉತ್ತರಪ್ರದೇಶದ ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹಗಳು

ವಾರ್ತಾಭಾರತಿವಾರ್ತಾಭಾರತಿ11 May 2021 3:26 PM IST
share
ಬಿಹಾರದ ಬಳಿಕ ಇದೀಗ ಉತ್ತರಪ್ರದೇಶದ ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹಗಳು

ಹೊಸದಿಲ್ಲಿ, ಮೇ 11: ಉತ್ತರಪ್ರದೇಶದ ಗಾಝಿಪುರದ ಗಂಗಾ ನದಿ ತೀರಕ್ಕೆ ಮಂಗಳವಾರ ಹಲವು ಮೃತದೇಹಗಳು ತೇಲಿ ಬಂದಿವೆ. ಸೋಮವಾರ 100ಕ್ಕೂ ಅಧಿಕ ಮೃತದೇಹಗಳು ತೇಲಿ ಬಂದ ಬಿಹಾರದ ಬಕ್ಸಾರ್ ನಿಂದ 55 ಕಿ.ಮೀ. ದೂರದಲ್ಲಿ ಈ ಮೃತದೇಹಗಳು ಕಂಡು ಬಂದಿವೆ. ಇದು ಜನರಲ್ಲಿ ಆತಂಕ ಉಂಟು ಮಾಡಿದೆ.

ಕೊರೋನ ಸೋಂಕು ಉತ್ತರಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಹರಡುತ್ತಿದ್ದು, ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹಗಳು ಕೋವಿಡ್ ಸೋಂಕಿನಿಂದ ಮೃತಪಟ್ಟವರದ್ದೆಂದು ಶಂಕಿಸಲಾಗಿದೆ. ಗ್ರಾಮೀಣ ಪ್ರದೇಶದ ಚಿತಾಗಾರಗಳಲ್ಲಿ ಯಾವುದೇ ಕೋವಿಡ್ ಶಿಷ್ಟಾಚಾರ ಇಲ್ಲದೇ ಇರುವುದರಿಂದ ಸೋಂಕು ಹರಡುವ ಭೀತಿಯಿಂದ ಕುಟುಂಬಿಕರು ಮೃತದೇಹವನ್ನು ನದಿಯಲ್ಲಿ ತೇಲಿಬಿಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೃತದೇಹಗಳಿಂದ ನದಿ ನೀರು ಮಲೀನಗೊಂಡಿದ್ದು, ಕೊರೋನ ಸೋಂಕು ತೀವ್ರವಾಗಿ ಹರಡುವ ಭೀತಿಯ ನಡುವೆ ಸ್ಥಳೀಯಾಡಳಿತ, ‘‘ಈ ಬಗ್ಗೆ ತನಿಖೆ ನಡೆಸಲಾಗುವುದು’’ ಎಂದು ಹೇಳಿದೆ.

‘‘ನಾವು ಮಾಹಿತಿ ಪಡೆದುಕೊಂಡಿದ್ದೇವೆ. ನಮ್ಮ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತನಿಖೆ ನಡೆಯುತ್ತಿದೆ. ಮೃತದೇಹಗಳು ಎಲ್ಲಿಂದ ತೇಲಿ ಬಂದವು ಎಂದು ಶೋಧಿಸುತ್ತಿದ್ದೇವೆ.’’ ಎಂದು ಗಾಝಿಪುರದ ಜಿಲ್ಲಾ ದಂಡಾಧಿಕಾರಿ ಎಂ.ಪಿ. ಸಿಂಗ್ ಹೇಳಿದ್ದಾರೆ.

‘‘ಈ ವಿಷಯದ ಕುರಿತು ನಾವು ಆಡಳಿತಕ್ಕೆ ಮಾಹಿತಿ ನೀಡಿದ್ದೇವೆ. ಆದರೆ, ಅವರು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಈ ಪರಿಸ್ಥಿತಿ ಮುಂದುವರಿದರೆ, ನಾವು ಕೂಡ ಕೊರೋನ ಸೋಂಕಿಗೆ ತುತ್ತಾಗುವ ಭೀತಿ ಎದುರಾಗಿದೆ’’ ಎಂದು ಇಲ್ಲಿನ ನಿವಾಸಿಯೊಬ್ಬರು ಹೇಳಿದ್ದಾರೆ.

ಬಕ್ಸಾರ್ ಘಟನೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಈ ಬಗ್ಗೆ ಕೂಡಲೇ ಗಮನ ಹರಿಸುವಂತೆ ಸಂಬಂಧಿತ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಬಿಹಾರದ ಬಕ್ಸಾರ್ ನ ಗಂಗಾ ನದಿ ದಡಕ್ಕೆ ಸೋಮವಾರ 100ಕ್ಕೂ ಅಧಿಕ ಕೊಳೆತ ಮೃತದೇಹಗಳು ತೇಲಿ ಬಂದಿತ್ತು. ಇದು ಈ ಪ್ರದೇಶದಲ್ಲಿ ಕೋವಿಡ್ ಸೋಂಕು ಏರಿಕೆಯಾಗುವ ಬಗ್ಗೆ ಜನರಲ್ಲಿ ಆತಂಕ ಹುಟ್ಟಿ ಹಾಕಿತ್ತು. ಬಿಹಾರ್-ಉತ್ತರಪ್ರದೇಶ ಗಡಿಯ ಸಮೀಪ ಇರುವ ಚೌಸಾ ಪಟ್ಟಣದ ಸಮೀಪದ ನದಿಯಲ್ಲಿ ಕೂಡ 12ಕ್ಕೂ ಅಧಿಕ ಮೃತದೇಹಗಳು ತೇಲುತ್ತಿರುವುದು ಪತ್ತೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X