Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಅಕಾಲಿಕ ಮಳೆಗೆ ಜನಜೀವನ...

ಚಿಕ್ಕಮಗಳೂರು: ಅಕಾಲಿಕ ಮಳೆಗೆ ಜನಜೀವನ ತತ್ತರ; ಧರೆಗುರುಳಿದ ವಿದ್ಯುತ್ ಕಂಬ, ಮರಗಳು

ವಾರ್ತಾಭಾರತಿವಾರ್ತಾಭಾರತಿ11 May 2021 5:57 PM IST
share
ಚಿಕ್ಕಮಗಳೂರು: ಅಕಾಲಿಕ ಮಳೆಗೆ ಜನಜೀವನ ತತ್ತರ; ಧರೆಗುರುಳಿದ ವಿದ್ಯುತ್ ಕಂಬ, ಮರಗಳು

ಚಿಕ್ಕಮಗಳೂರು, ಮೇ 11: ಕಾಫಿನಾಡಿನಲ್ಲಿ ಒಂದೆಡೆ ಕೊರೋನ ಅಬ್ಬರಕ್ಕೆ ಜನರು ಕಂಗಾಲಾಗಿದ್ದರೆ, ಮತ್ತೊಂದೆಡೆ ನಿರಂತರ ಮಳೆಯಿಂದಲೂ ಜನರು ಹೈರಾಣಾಗಿದ್ದಾರೆ. ಮಂಗಳವಾರ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿದ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕಳೆದೊಂದು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದ ವೇಳೆ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಯಲು ಭಾಗದಲ್ಲಿ ಆಗಾಗ್ಗೆ ಮಳೆಯಾಗುತ್ತಿತ್ತು. ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದೆ. ಕಡೂರು, ತರೀಕೆರೆ ತಾಲೂಕುಗಳ ಅಲ್ಲಲ್ಲಿ ಮಂಗಳವಾರ ಉತ್ತಮ ಮಳೆ ಸುರಿದಿದೆ. ಧಾರಾಕಾರ ಮಳೆಯಿಂದಾಗಿ ನಗರ ಸೇರಿದಂತೆ ವಿವಿಧ ಪಟ್ಟಣಗಳು, ಚೆಕ್‍ಪೋಸ್ಟ್ ಗಳಲ್ಲಿ ಲಾಕ್‍ಡೌನ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್, ಗೃಹರಕ್ಷಕ ಸಿಬ್ಬಂದಿ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಪರದಾಡಿದ ದೃಶ್ಯಗಳು ಸಾಮಾನ್ಯವಾಗಿದ್ದವು.

ಮಂಗಳವಾರ ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಸತತ ಮಳೆಯಿಂದಾಗಿ ಮಲೆನಾಡಿನಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳೂ ಸೇರಿದಂತೆ ಹಳ್ಳಕೊಳ್ಳಗಳಲ್ಲಿ ನೀರಿನ ಹರಿವಿನಲ್ಲಿ ಕೊಂಚ ಏರಿಕೆಯಾಗಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ತಿಂಗಳಿನಿಂದ ಪ್ರತಿದಿನ ಸಂಜೆ, ರಾತ್ರಿ ಮಳೆಯಾಗುತ್ತಿರುವುದರಿಂದ ಕಾಫಿ, ಅಡಿಕೆ ತೋಟಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಜನತಾ ಕರ್ಫ್ಯೂ, ಲಾಕ್‍ಡೌನ್ ಜಾರಿ ಮಾಡಿರುವುದರಿಂದ ಕೃಷಿ ಕೆಲಸಗಳಿಗೆ ಕಾರ್ಮಿಕರನ್ನು ಕರೆ ತರಲು ರೈತರು ಪರದಾಡುವಂತಾಗಿದೆ. ಪೊಲೀಸರ ಭೀತಿಯಿಂದಾಗಿ ಕಾರ್ಮಿಕರ ಸಾಗಣೆ ವಾಹನ ಚಾಲಕರು ಮುಂದಾಗದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಇನ್ನು ನಿರಂತರ ಮಳೆಯಿಂದಾಗಿ ಮಲೆನಾಡಿನ ಗ್ರಾಮೀಣ ಭಾಗದ ಜನರು ರೋಸಿ ಹೋಗಿದ್ದು, ಮಳೆಗಾಲಕ್ಕೆ ಬೇಕಾಗುವ ಕಟ್ಟಿಗೆ ಸಂಗ್ರಹದಂತಹ ಕೆಲಸ ಕಾರ್ಯಗಳಿಗೆ ಧಾರಾಕಾರ ಮಳೆ ಅಡ್ಡಿಯಾಗಿದೆ.

ಇನ್ನು ಕಳೆದೊಂದು ತಿಂಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಮಳೆ, ಗಾಳಿಗೆ ನೂರಾರು ಮರಗಳು ನೆಲಕ್ಕುರುಳಿದ ಸಂದರ್ಭ ವಿದ್ಯುತ್ ಕಂಬಗಳ ತಂತಿ ತುಂಡಾಗಿ ಗ್ರಾಮೀಣ ಭಾಗದಲ್ಲಿ ನೂರಾರು ವಿದ್ಯುತ್ ಕಂಬಗಳು ತುಂಡಾಗಿವೆ. ಮಲೆನಾಡಿನ ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬಗಳನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸಲ್ಲಿ ನಿರತರಾಗಿದ್ದಾರೆ. ಒಟ್ಟಾರೆ ಕೊರೋನ ಕರ್ಫ್ಯೂವಿನ ಮಧ್ಯೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನಜೀವನವನ್ನು ಮತ್ತಷ್ಟು ಹೈರಾಣಾಗುವಂತೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X