Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎರಡು ಕೋಟಿ ಕೋವಿಡ್ ಲಸಿಕೆ ಖರೀದಿಗೆ...

ಎರಡು ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್: ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ11 May 2021 8:16 PM IST
share
ಎರಡು ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಮೇ 11: ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಮಂಗಳವಾರ ನಗರದಲ್ಲಿ ನಡೆದ ಉನ್ನತಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ 3 ಕೋಟಿ ವ್ಯಾಕ್ಸಿನ್ ಖರೀದಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 1 ಕೋಟಿ ಕೋವ್ಯಾಕ್ಸಿನ್, 2 ಕೋಟಿ ಕೋವಿಶೀಲ್ಡ್ ಲಸಿಕೆ ಸೇರಿದೆ ಎಂದರು.

18 ವರ್ಷ ಮೇಲ್ಪಟ್ಟ ಜನರಿಗೆ ಲಸಿಕೆ ಕೊಡಲು ಆರಂಭಿಸಿದ ನಂತರ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಖರೀದಿ ಮಾಡಲಾಗುತ್ತಿದೆ. ಈವರೆಗೂ ಕೇಂದ್ರ ಸರಕಾರ ಹಂಚಿಕೆ ಮಾಡುತ್ತಿದ್ದ ಲಸಿಕೆಯನ್ನು ಬಿಟ್ಟರೆ ನೇರವಾಗಿ ಮುಕ್ತ ಮಾರುಕಟ್ಟೆಯಲ್ಲಿ ಟೆಂಡರ್ ಕರೆದು ಖಾಸಗಿ ಕಂಪನಿಗಳಿಂದ ಖರೀದಿ ಮಾಡಿರಲಿಲ್ಲ. ಇವತ್ತೇ ಟೆಂಡರ್ ಕರೆಯಲು ಸೂಚಿಸಲಾಗಿದ್ದು, ಯಾವ ಕಂಪನಿ ಬೇಕಾದರೂ ಟೆಂಡರ್ ನಲ್ಲಿ ಭಾಗವಹಿಸಬಹುದು. ಏಳು ದಿನದ ಒಳಗಾಗಿ ಈ ಪ್ರಕ್ರಿಯೆ ಮುಗಿಸಿ ಟೆಂಡರ್ ಪಡೆಯುವ ಕಂಪನಿಯು ಲಸಿಕೆಯನ್ನು ಪೂರೈಕೆ ಆರಂಭಿಸಬೇಕು ಎಂದು ಅವರು ಹೇಳಿದರು.

1 ಲಕ್ಷ ಪಲ್ಸ್ ಆಕ್ಸಿಮೀಟರ್ ಖರೀದಿ: ಸೋಂಕಿತರಿಗೆ ಅಗತ್ಯವಾದ ಪಲ್ಸ್ ಆಕ್ಸಿಮೀಟರ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕೂಡಲೇ ಒಂದು ಲಕ್ಷ ಪಲ್ಸ್ ಆಕ್ಸಿಮೀಟರ್ ಗಳನ್ನು ಖರೀದಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಅವುಗಳನ್ನು ಎಲ್ಲ ಜಿಲ್ಲೆ ಮತ್ತು ತಾಲೂಕುಗಳಿಗೆ ಹಂಚಲಾಗುವುದು. ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮತ್ತು ಸೋಂಕಿತರು ಗುಣಮುಖರಾದ ನಂತರ ವಾಪಸ್ ಪಡೆಯುವುದು ಆಯಾ ಡಿಎಚ್‍ಒ ಮತ್ತು ಟಿಎಚ್‍ಒ ಹೊಣೆ. ಈ ಮೂಲಕ ಪಲ್ಸ್ ಆಕ್ಸಿಮೀಟರ್ ಬ್ಯಾಂಕ್ ಮಾಡುವ ಉದ್ದೇಶ ಇದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾದ ಐವರ್‍ಮೆಕ್ಟಿನ್ ಮಾತ್ರೆಯನ್ನು 10 ಲಕ್ಷ ಖರೀದಿ ಮಾಡಲಾಗಿದ್ದು, ಇದೇ 14ಕ್ಕೆ ಪೂರೈಕೆ ಶುರುವಾಗುತ್ತದೆ. ಅಲ್ಲದೆ, ಇನ್ನೂ 25 ಲಕ್ಷ ಮಾತ್ರೆ ಖರೀದಿಸುವಂತೆ ಸೂಚಿಸಿದ್ದೇನೆ. ಇದು ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಲಭ್ಯ ಇರಬೇಕು. ಜತೆಗೆ, 35 ಲಕ್ಷ ಜಿಂಕ್ ಟ್ಯಾಬ್ಲೆಟ್ ಹಾಗೂ ಒಂದು ಕೋಟಿ ಕಾಲ್ಸಿಚಿನ್ ಮಾತ್ರೆಗಳನ್ನೂ ಕೂಡಲೇ ಖರೀದಿ ಮಾಡಲು ನಿರ್ಧರಿಸಲಾಗಿದೆ. ಈ ಎಲ್ಲ ಔಷಧಿಗಳು ರಾಜ್ಯದ ಎಲ್ಲ ಜಿಲ್ಲಾ, ತಾಲೂಕು, ಆಸ್ಪತ್ರೆ ಹಾಗೂ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.

ಈಗ 10.50 ಲಕ್ಷ ರಾಟ್ ಕಿಟ್ ಇವೆ. ಈಗ ದಿನಕ್ಕೆ 50 ಸಾವಿರದಂತೆ ಪೂರೈಕೆ ಆಗುತ್ತಿವೆ. ಜತೆಗೆ, 37 ಲಕ್ಷ ಆರ್‍ಟಿಪಿಸಿಆರ್ ಕಿಟ್‍ಗಳನ್ನೂ ಖರೀದಿ ಮಾಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯ ನಡುವೆ ಮುಖ್ಯ ಕಾರ್ಯದರ್ಶಿ ಜತೆ ಮಾತನಾಡಿದ ಡಿಸಿಎಂ, ನೊಟೀಸ್ ಕೊಟ್ಟರೂ ಸಕಾಲಕ್ಕೆ ರೆಮ್‍ಡಿಸಿವಿರ್ ಪೂರೈಕೆ ಮಾಡದ ಕಂಪನಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ದಾಖಲು ಮಾಡಿಕೊಳ್ಳುವ ಮುನ್ನ ಭೌತಿಕ ಪರೀಕ್ಷೆ ನಡೆಸಿಯೇ ದಾಖಲು ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಗಂಭೀರ ಸೋಂಕಿತರಿಗೆ ಹಾಸಿಗೆಗಳು ಸಿಗುತ್ತವೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಲಸಿಕೆಗಾಗಿ ಹಳ್ಳಿಗಳಿಗೆ ಹೋಗುವುದು ಬೇಡ: ನಗರದ ಜನರು ಲಸಿಕೆ ಪಡೆಯಲು ಗ್ರಾಮೀಣ ಪ್ರದೇಶಕ್ಕೆ ಹೋಗುವುದು ಬೇಡ. ಅವರು ನಗರದಲ್ಲೇ ಲಸಿಕೆ ಪಡೆಯಲಿ. ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಕೆ ಮಾಡಲು ಎಲ್ಲ ಕ್ರಮ ವಹಿಸಲಾಗಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಅವರು ಮಾಹಿತಿ ನೀಡಿದರು.

ಡಿಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಔಷಧಿ ಖರೀದಿ ಉಸ್ತುವಾರಿ ಅಂಜುಂ ಪರ್ವೇಜ್, ರಾಜ್ಯ ಔಷಧ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಲತಾ ಕುಮಾರಿ, ಆರೋಗ್ಯ ಇಲಾಖೆ ನಿರ್ದೇಶಕ ಓಂ ಪ್ರಕಾಶ್ ಪಾಟೀಲ್ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X