Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೂರೈಕೆಯಾಗದ ಕೋವ್ಯಾಕ್ಸಿನ್‌: ದ.ಕ....

ಪೂರೈಕೆಯಾಗದ ಕೋವ್ಯಾಕ್ಸಿನ್‌: ದ.ಕ. ಜಿಲ್ಲೆಯಲ್ಲಿ ಸೆಕೆಂಡ್ ಡೋಸ್‌ಗಾಗಿ ಮುಂದುವರಿದ ಪರದಾಟ

ವಾರ್ತಾಭಾರತಿವಾರ್ತಾಭಾರತಿ12 May 2021 2:30 PM IST
share
ಪೂರೈಕೆಯಾಗದ ಕೋವ್ಯಾಕ್ಸಿನ್‌: ದ.ಕ. ಜಿಲ್ಲೆಯಲ್ಲಿ ಸೆಕೆಂಡ್ ಡೋಸ್‌ಗಾಗಿ ಮುಂದುವರಿದ ಪರದಾಟ

ಮಂಗಳೂರು, ಮೇ 12: ಕೋವಿಡ್ ನಿಯಂತ್ರಣ ಲಸಿಕೆಗಾಗಿನ ಬೇಡಿಕೆ ಹೆಚ್ಚುತ್ತಿರುವಂತೆಯೇ ಈಗಾಗಲೇ ಪ್ರಥಮ ಡೋಸ್ ಪಡೆದು ದ್ವಿತೀಯ ಡೋಸ್‌ಗೆ ಕಾಯುತ್ತಿರುವ 45 ವರ್ಷ ಮೇಲ್ಪಟ್ಟ ವಯಸ್ಕರು ಹಾಗೂ ಹಿರಿಯ ನಾಗರಿಕರಿಂದ ಲಸಿಕೆಗಾಗಿ ಪರದಾಟ ಮುಂದುವರಿದೆ.

ಕೋವ್ಯಾಕ್ಸಿನ್ ಲಸಿಕೆ ಇನ್ನೂ ಜಿಲ್ಲೆಗೆ ಪೂರೆಕೈಯಾಗದ ಕಾರಣ ಈಗಾಗಲೇ ಪ್ರಥಮ ಡೋಸ್ ಈ ಲಸಿಕೆಯನ್ನು ಪಡೆದು ಅವಧಿ ಮುಗಿದಿರುವ ಮಂದಿ ಲಸಿಕಾ ಕೇಂದ್ರಗಳಿಗೆ ದಿನಾ ಆಗಮಿಸಿ ಅಧಿಕಾರಿ, ಸಿಬ್ಬಂದಿ ಜತೆ ವಾಗ್ವಾದ ನಡೆಸಿ ಹಿಂತಿರುಗುತ್ತಿದ್ದಾರೆ. ಈ ನಡುವೆ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ 2ನೆ ಡೋಸ್ ನೀಡಲು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಲಭ್ಯವಿದ್ದ ಲಸಿಕೆಯನ್ನು ಹಂಚಲಾಗಿತ್ತು. ಆದರೆ ಅದು ಕೂಡಾ ನಿನ್ನೆ ಸಂಜೆಯ ವೇಳೆಗೆ ಮುಗಿದ ಕಾರಣ ಇಂದು ಕೂಡಾ ಅನೇಕರು ಈ ಲಸಿಕಾ ಕೇಂದ್ರಗಳತ್ತ ಆಗಮಿಸಿ ಹಿಂದಿರುಗಿದರು. ಕೆಲವರು ತಮ್ಮ ಸ್ಥಳೀಯ ಲಸಿಕಾ ಕೇಂದ್ರಗಳಿಂದ ವೆನ್‌ಲಾಕ್‌ಗೆ ಆಗಮಿಸಿ ವಿಚಾರಿಸಿ ಅಧಿಕಾರಿಗಳನ್ನು ತರಾಟೆಗೈದು ತೆರಳಿದ ಘಟನೆಯೂ ನಡೆಯಿತು.

ಇನ್ನು 45 ವರ್ಷ ಮೇಲ್ಪಟ್ಟವರಿಂದ ಪ್ರಥಮ ಡೋಸ್‌ಗಾಗಿಯೂ ಬೇಡಿಕೆ ಹೆಚ್ಚಾಗುತ್ತಿದ್ದು, ಪ್ರತಿನಿತ್ಯ ಲಸಿಕಾ ಕೇಂದ್ರಗಳತ್ತ ಆಗಮಿಸಿ ಹಿಂದಿರುಗುತ್ತಿದ್ದಾರೆ. ಲಸಿಕೆ ಸದ್ಯ ಲಭ್ಯವಿಲ್ಲ. ಆ್ಯಪ್ ಮೂಲಕ ಆನ್‌ಲೈನ್ ನೋಂದಣಿ ಮಾಡಿಸಿಕೊಂಡವರಿಗೆ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು, ಸಿಬ್ಬಂದಿ ಹೇಳಿದರೆ, ನಮಗೆ ಆನ್‌ಲೈನ್ ನೋಂದಣಿ ಮಾಡಲು ಬರುವುದಿಲ್ಲ. ನೀವೇ ಮಾಡಿ, ನಮಗೆ ಲಸಿಕೆ ನೀಡಿ ಎಂಬ ಆಗ್ರಹ ಕೆಲ ಹಿರಿಯ ನಾಗರಿಕರದ್ದು.

ವೆನ್‌ಲಾಕ್ ಜಿಲ್ಲಾಸ್ಪತ್ರೆಯ ಲಸಿಕಾ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಆನ್‌ಲೈನ್ ನೋಂದಣಿ ಮಾಡಿಸಿಕೊಂಡು ದಿನಾಂಕ ಹಾಗೂ ಸಮಯ ನಿಗದಿಗೊಂಡು 18ರಿಂದ 44 ವರ್ಷದೊಳಗಿನರಿಗೆ ಲಸಿಕೆ ನೀಡುವ ಕಾರ್ಯ ಸುಸೂತ್ರವಾಗಿ ನಡೆಯುತ್ತಿದೆ. ವೆನ್‌ಲಾಕ್‌ನಲ್ಲಿ ಮಂಗಳವಾರ 250 ಮಂದಿ ಲಸಿಕೆ ಪಡೆದಿದ್ದರೆ, ಇಂದೂ ಕೂಡಾ 250 ಮಂದಿ ಪಡೆಯುತ್ತಿದ್ದಾರೆ. 45 ವರ್ಷ ಮೇಲ್ಪಟ್ಟರಿಗೆ ಎರಡನೆ ಡೋಸ್‌ನ ಲಸಿಕೆ ಸದ್ಯ ಲಭ್ಯವಿಲ್ಲ. ಲಸಿಕೆ ಪೂರೈಕೆಯಾದ ಬಳಿಕ ತಿಳಿಸಲಾಗುವುದು ಎಂದು ಕೋವಿಡ್ ತಡೆ ಲಸಿಕೆ ಜಿಲ್ಲಾ ನೋಡಲ್ ಅಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X