Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ...

ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರಕಾರಗಳಿಂದ ಜನರಿಗೆ ದ್ರೋಹ: ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 May 2021 10:38 PM IST
share
ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರಕಾರಗಳಿಂದ ಜನರಿಗೆ ದ್ರೋಹ: ಸಿದ್ದರಾಮಯ್ಯ

ಬೆಂಗಳೂರು, ಮೇ 12: ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ದ್ರೋಹವೆಸಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ಧೋರಣೆ ಖಂಡಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಂದಿಗೆ ಸಾಂಕೇತಿವಾಗಿ ಪ್ರತಿಭಟನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಲಸಿಕೆ ಲಭ್ಯ ಇಲ್ಲ ಎಂದಾದರೆ ಎಲ್ಲರಿಗೂ ಲಸಿಕೆ ಹಾಕುವುದಾಗಿ ಏಕೆ ಹೇಳಬೇಕಿತ್ತು. ರಾಜ್ಯದಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು? 18 ವರ್ಷ ಮೀರಿದ ಎಲ್ಲರಿಗೂ ಲಸಿಕೆ ಹಾಕುವುದಾಗಿ ಪ್ರಧಾನಿ ಘೋಷಣೆ ಮಾಡಿದರು. ಆದರೆ, 45, 60 ವರ್ಷ ಮೀರಿದವರಿಗೇ ಇನ್ನೂ ಲಸಿಕೆ ಸಿಗುತ್ತಿಲ್ಲ. ಮೊದಲ ಡೋಸ್ ಪಡೆದವರೇ ಎರಡನೇ ಡೋಸ್‍ಗೆ ಪರದಾಡುತ್ತಿದ್ದಾರೆ ಎಂದು ಅವರು ಹೇಳಿದರು.

ನರೇಂದ್ರ ಮೋದಿಗೆ ಮುಖ್ಯಮಂತ್ರಿಯಾಗಿ 13 ವರ್ಷ, ಪ್ರಧಾನಿಯಾಗಿ ಏಳು ವರ್ಷಗಳ ಅನುಭವವಿದೆ. ಆದರೂ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಮೇ ಒಂದರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮುಖ್ಯ ಕಾರ್ಯದರ್ಶಿಗಳು ಮೇ ಮೂರು ಅಥವಾ ನಾಲ್ಕನೇ ವಾರದಲ್ಲಿ ಲಸಿಕೆ ಬರುತ್ತದೆ ಎಂದಿದ್ದಾರೆ. ಆರೋಗ್ಯ ಸಚಿವರು 15 ದಿನ ಲಸಿಕೆ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ. ಇದನ್ನು ಜವಾಬ್ದಾರಿಯುತ ಸರಕಾರ ಎಂದು ಕರೆಯಲು ಆಗುವುದೇ? ಜನರು ಲಸಿಕೆಗಾಗಿ ಸರತಿ ಸಾಲಿನಲ್ಲಿ ದಿನಗಟ್ಟಲೇ ಕಾಯುತ್ತಿದ್ದಾರೆ ಇದರ ಹೊಣೆಗಾರರು ಯಾರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮತ್ತೊಂದೆಡೆ ಆಕ್ಸಿಜನ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿದ್ದು, ಎರಡನೇ ಅಲೆ ತೀವ್ರವಾಗಿ ಬಾಧಿಸುತ್ತಿದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮಾಹಿತಿ ಇತ್ತು. ತಜ್ಞರೂ ವರದಿ ನೀಡಿದ್ದರು. ಆದರೆ ತಜ್ಞರ ವರದಿಯನ್ನು ಉಭಯ ಸರಕಾರಗಳು ಉದಾಸೀನ ಮಾಡಿ, ಸಲಹೆಗಳನ್ನು ನಿರ್ಲಕ್ಷಿಸಿದವು. ಅದರ ಪರಿಣಾಮವಾಗಿ ಕೆಟ್ಟ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಅವರು ಕಿಡಿಗಾರಿದರು.

ದೇಶ ಮತ್ತು ರಾಜ್ಯ ಇಂತಹ ಸ್ಥಿತಿಗೆ ಬರಲು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರೇ ನೇರ ಹೊಣೆಗಾರರು, ಮೊದಲೇ ಸಿದ್ಧತೆ ಮಾಡಿಕೊಂಡಿದ್ದರೆ, ಅಗತ್ಯ ವವಸ್ಥೆಗೆ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈ ಮೀರುತ್ತಿರಲಿಲ್ಲ. ಬೆಡ್, ಆಕ್ಸಿಜನ್, ರೆಮಿಡಿಸಿವಿರ್, ವೆಂಟಿಲೇಟರ್ ಸಿದ್ಧತೆ ಮಾಡಿಕೊಳ್ಳಲಿಲ್ಲ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಎನ್ನುವಂತೆ ಈಗ ಮಾಡುತ್ತಿದ್ದಾರೆ. ಸರಕಾರ ತಜ್ಞರ ವರದಿ, ಸಲಹೆ ಕೇಳುವುದಿಲ್ಲ. ತಜ್ಞರೂ ಸರಕಾರದ ನಿರ್ಲಕ್ಷ್ಯ ಧೋರಣೆ ನೋಡಿ ಮೌನಕ್ಕೆ ಶರಣಾಗಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಆದರೆ, ಕಟ್ಟುನಿಟ್ಟಾಗಿ ಮಾಡಿಲ್ಲ. ವಲಸೆ ಹೋಗಿರುವ ಕಾರ್ಮಿಕರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಅವರು ಬದುಕುವುದಾದರೂ ಹೇಗೆ? ಜೀವ ಉಳಿಸಿಕೊಳ್ಳಲು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಒತ್ತಾಯ ಮಾಡಿದರೂ ಸರ್ಕಾರ ಕಿವಿಗೊಡಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾದರೆ ಸರಕಾರದ ಜವಾಬ್ದಾರಿ ಏನು? ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಏಕಿರಬೇಕು? ಬೆಡ್‍ಗೆ ಒಬ್ಬರು, ಲಸಿಕೆಗೆ ಇನ್ನೊಬ್ಬರು ಹೀಗೆ ಸಚಿವರನ್ನು ನೇಮಕ ಮಾಡಲಾಗಿದೆ. ಆದರೂ ಸೋಂಕಿತರ ಪರದಾಟ ನಿಂತಿಲ್ಲ. ಸಿದ್ಧತೆ ಮಾಡಿಕೊಳ್ಳದೆ ರಾಜ್ಯವನ್ನು ಇಂಥ ಸ್ಥಿತಿಗೆ ತಳ್ಳಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.

ಆಕ್ಸಿಜನ್ ನೀಡದೆ ಸೋಂಕಿತರನ್ನು ಸಾಯಿಸುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರಕಾರ ಮಾಡುತ್ತಿರುವ ಕೊಲೆಗಳು. ಸರಕಾರಗಳು ಸತ್ತಿರುವುದರಿಂದಲೇ ನ್ಯಾಯಾಲಯಗಳು ಮಧ್ಯೆ ಪ್ರವೇಶ ಮಾಡಿವೆ. ಈಗಲಾದರೂ ಕೇಂದ್ರ ಸರಕಾರ ಎಚ್ಚೆತ್ತು ಲಸಿಕೆ ಸಂಗ್ರಹಕ್ಕೆ ಮುಂದಾಗಲಿ. 18 ವರ್ಷ ಮೀರಿದವರು ರಾಜ್ಯದಲ್ಲಿ 3.26 ಕೋಟಿ ಇದ್ದಾರೆ. ಅವರಿಗೆ ಆರೂವರೆ ಕೋಟಿ ಡೋಸ್ ಲಸಿಕೆ ಬೇಕು. ಎರಡು, ಮೂರು ತಿಂಗಳಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡಿದಾಗ ಮಾತ್ರ ಈ ರೋಗ ತಡೆಯಲು ಸಾಧ್ಯ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಶಾಸಕರಾದ ರಮೇಶ್ ಕುಮಾರ್, ಕೆ.ಜೆ.ಜಾರ್ಜ್, ವಿ.ಮುನಿಯಪ್ಪ, ಕೃಷ್ಣ ಬೈರೇಗೌಡ, ನಸೀರ್ ಅಹಮದ್, ದಿನೇಶ್ ಗುಂಡೂರಾವ್, ಎಚ್.ಎಂ. ರೇವಣ್ಣ, ಎನ್.ಎ.ಹಾರೀಸ್, ಭೈರತಿ ಸುರೇಶ್, ರಿಝ್ವಾನ್ ಅರ್ಶದ್, ಸೌಮ್ಯಾರೆಡ್ಡಿ, ಸಂಸದ ಜಿ.ಸಿ.ಚಂದ್ರಶೇಖರ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ಎಂ.ಆರ್.ಸೀತಾರಾಂ, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X