Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಗೆ ಕೊವ್ಯಾಕ್ಸಿನ್ ಲಸಿಕೆ...

ದಿಲ್ಲಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಸದಂತೆ ಕೇಂದ್ರದ ಸೂಚನೆ: ಮನೀಷ್ ಸಿಸೋಡಿಯಾ ಆರೋಪ

ವಾರ್ತಾಭಾರತಿವಾರ್ತಾಭಾರತಿ12 May 2021 10:45 PM IST
share
ದಿಲ್ಲಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಸದಂತೆ ಕೇಂದ್ರದ ಸೂಚನೆ: ಮನೀಷ್ ಸಿಸೋಡಿಯಾ ಆರೋಪ

ಹೊಸದಿಲ್ಲಿ, ಮೇ 12: ಕೇಂದ್ರ ಸರಕಾರದ ಸೂಚನೆಯಂತೆ ದಿಲ್ಲಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಸಲು ಭಾರತ್ ಬಯೊಟೆಕ್ ಸಂಸ್ಥೆ ನಿರಾಕರಿಸಿದೆ. ಕೇಂದ್ರ ಸರಕಾರ ಕೋವಿಡ್-19 ಲಸಿಕೆಯ ಪೂರೈಕೆಯನ್ನು ನಿಯಂತ್ರಿಸುತ್ತಿದೆ ಎಂದು ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ಇದನ್ನು ನಿರಾಕರಿಸಿರುವ ಭಾರತ್ ಬಯೊಟೆಕ್, ತನ್ನ ಉದ್ದೇಶದ ಬಗ್ಗೆ ಕೆಲವು ರಾಜ್ಯಗಳು ದೂರುತ್ತಿರುವುದರಿಂದ ನಿರಾಶೆಯಾಗಿದೆ ಎಂದಿದೆ. ಬುಧವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಿಸೋಡಿಯಾ ʼಕೇಂದ್ರದ ಆದೇಶ ಮತ್ತು ಸೀಮಿತ ಲಭ್ಯತೆಯಿಂದಾಗಿ ದಿಲ್ಲಿಗೆ ಲಸಿಕೆ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಭಾರತ್ ಬಯೊಟೆಕ್ ಪತ್ರಬರೆದು ತಿಳಿಸಿದೆ. 

ಕೇಂದ್ರ ಸರಕಾರ ಲಸಿಕೆ ಪೂರೈಕೆಯನ್ನು ನಿಯಂತ್ರಿಸುತ್ತಿದೆ ಎಂಬುದು ಇದರರ್ಥವಾಗಿದೆ.  18ರಿಂದ 45 ವರ್ಷದೊಳಗಿನವರಿಗೆ ಲಸಿಕೆ ನೀಡಲು 1.34 ಕೋಟಿ ಡೋಸ್ ಲಸಿಕೆ(ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆ ಸೇರಿ) ಪೂರೈಸುವಂತೆ ದಿಲ್ಲಿ ಸರಕಾರ ಕೋರಿತ್ತು. ಆದರೆ ಇದಕ್ಕೆ ಉತ್ತರಿಸಿದ್ದ ಭಾರತ್ ಬಯೋಟೆಕ್, ಯಾರಿಗೆ ಯಾವ ಲಸಿಕೆ ಎಷ್ಟು ಪ್ರಮಾಣದಲ್ಲಿ ಪೂರೈಸಬೇಕು ಎಂಬುದನ್ನು ಕೇಂದ್ರ ಸರಕಾರ ನಿರ್ಧರಿಸುತ್ತದೆ' ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದರು. ಜೊತೆಗೆ ಮೇ 7ರಂದು ಭಾರತ್ ಬಯೊಟೆಕ್ನ ಅಧ್ಯಕ್ಷ ಕೃಷ್ಣಾ ಏಲ್ಲ ಬರೆದಿರುವ ಪತ್ರವನ್ನು  ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.

ಸಂಸ್ಥೆಯ ಲಸಿಕೆಗೆ ಅಭೂತಪೂರ್ವ ಬೇಡಿಕೆಯಿದ್ದು ಪ್ರತೀ ತಿಂಗಳೂ ಉತ್ಪಾದನೆ ಹೆಚ್ಚಿಸುತ್ತಿದ್ದರೂ ಬೇಡಿಕೆ ಈಡೇರಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಕೇಂದ್ರಸರಕಾರದ ಅಧಿಕಾರಿಗಳ ಸೂಚನೆಯಂತೆ ನಾವು ಲಸಿಕೆ ಕಳಿಸುತ್ತಿದ್ದೇವೆ. ಆದ್ದರಿಂದ ನೀವು ಕೋರಿದಂತೆ ಹೆಚ್ಚುವರಿ ಲಸಿಕೆ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದಕ್ಕೆ ಟ್ವಿಟರ್ ಮೂಲಕವೇ ಪ್ರತಿಕ್ರಿಯಿಸಿರುವ ಕೃಷ್ಣಾ ಏಲ್ಲ "ಮೇ 10ರಂದು 18 ರಾಜ್ಯಗಳಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು(ನಮ್ಮಿಂದ ಸಾಧ್ಯವಾದಷ್ಟು ಪ್ರಮಾಣದಲ್ಲಿ) ರವಾನಿಸಿದ್ದೇವೆ. ಆದರೂ ಕೆಲವು ರಾಜ್ಯಗಳು ದೂರುತ್ತಿರುವುದರಿಂದ ನಿರಾಶೆಯಾಗಿದೆ. ಕೋವಿಡ್ ಸೋಂಕಿನಿಂದಾಗಿ ನಮ್ಮ ಸುಮಾರು 50 ಸಿಬ್ಬಂದಿಗಳು ಕರ್ತವ್ಯದಿಂದ ಗೈರಾಗಿದ್ದಾರೆ. ಆದರೂ ದಿನದ 24 ಗಂಟೆಯೂ ನಿಮಗಾಗಿ ಕಾರ್ಯನಿರ್ವಹಿಸುತ್ತಿದ್ದೇವೆ" ಎಂದು ಉತ್ತರಿಸಿದ್ದಾರೆ.

ಲಸಿಕೆಯ ರಫ್ತು ನಿಲ್ಲಿಸಿ, ಕೋವಿಡ್ ಲಸಿಕೆಯ ಸೂತ್ರ(ಫಾರ್ಮುಲಾ)ವನ್ನು ಇತರ ಸಂಸ್ಥೆಗಳಿಗೆ ತಿಳಿಸಿ ಉತ್ಪಾದನೆ ಹೆಚ್ಚಿಸಿ ಲಸಿಕೆಯ ಕೊರತೆ ನಿವಾರಿಸಬಹುದು. ಜೊತೆಗೆ, ಅಂತರಾಷ್ಟ್ರೀಯ ಮಾರುಕಟ್ಟೆಯಿಂದ ಲಸಿಕೆ ಖರೀದಿಸಿ ರಾಜ್ಯಗಳಿಗೆ ಒದಗಿಸುವುದು ಸರಕಾರದ ಕರ್ತವ್ಯವಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X