Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿಯಿಂದಾಗಿ ಬಹರೈನ್ ಆಕ್ಸಿಜನ್ ನೀಡಿದೆ...

ಮೋದಿಯಿಂದಾಗಿ ಬಹರೈನ್ ಆಕ್ಸಿಜನ್ ನೀಡಿದೆ ಎಂದು ಸಿ.ಟಿ. ರವಿ: ನೆಟ್ಟಿಗರಿಂದ ವ್ಯಾಪಕ ಟೀಕೆ

ವಾರ್ತಾಭಾರತಿವಾರ್ತಾಭಾರತಿ12 May 2021 11:13 PM IST
share
ಮೋದಿಯಿಂದಾಗಿ ಬಹರೈನ್ ಆಕ್ಸಿಜನ್ ನೀಡಿದೆ ಎಂದು ಸಿ.ಟಿ. ರವಿ: ನೆಟ್ಟಿಗರಿಂದ ವ್ಯಾಪಕ ಟೀಕೆ

ಚಿಕ್ಕಮಗಳೂರು, ಮೇ 12: 'ಕಷ್ಟಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಹರೈನ್ ದೇಶಕ್ಕೆ ವ್ಯಾಕ್ಸಿನ್ ಪೂರೈಕೆ ಮಾಡಿ ನೆರವು ನೀಡಿದ್ದರಿಂದಾಗಿಯೇ ಬಹರೈನ್ ದೇಶ ನಮ್ಮ ದೇಶಕ್ಕೆ ಆಕ್ಸಿಜನ್ ಕಳುಹಿಸಿದೆ. ಬಹರೈನ್‍ನಿಂದ ಬಂದ ಒಂದು ಟ್ಯಾಂಕರ್ ಆಕ್ಸಿಜನ್ ಅನ್ನು ನಮ್ಮ ಜಿಲ್ಲೆಗೆ ನೀಡಿದ್ದಾರೆ" ಎಂದು ಸಿ.ಟಿ.ರವಿ ಅವರು ಪ್ರಧಾನಿಯನ್ನು ಹೊಗಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ವಿಡಿಯೋ ಸಹಿತ ಪೋಸ್ಟ್‍ವೊಂದನ್ನು ಹಾಕಿದ್ದು, ಈ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿರುವ ನೆಟ್ಟಿಗರು, ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಮಂಗಳವಾರ ಬಹರೈನ್ ದೇಶವು ಭಾರತಕ್ಕೆ ನೌಕಾ ಸೇನೆಯ ಯುದ್ಧ ನೌಕೆಗಳಲ್ಲಿ 40 ಟನ್ ಲಿಕ್ವಿಡ್ ಆಕ್ಸಿಜನ್ ಅನ್ನು ಮಂಗಳೂರು ಬಂದರು ಮೂಲಕಕ್ಕೆ ದೇಶಕ್ಕೆ ಪೂರೈಕೆ ಮಾಡಿದ್ದು, ಈ ಆಕ್ಸಿಜನ್‍ನಲ್ಲಿ 1 ಟ್ಯಾಂಕರ್ ಆಕ್ಸಿಜನ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಬಂದಿದೆ. ಮಂಗಳವಾರ ಸಂಜೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಆಕ್ಸಿಜನ್ ಪ್ಲಾಂಟ್‍ಗೆ ಈ ಟ್ಯಾಂಕರ್ ಬಂದಿದ್ದು, ಇದರ ವಿಡಿಯೋವನ್ನು ಶಾಸಕರ ಸಿ.ಟಿ.ರವಿ ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ.

ವಿಡಿಯೋದೊಂದಿಗೆ ಅವರು, "ಯಾರಾದರೂ ಕಷ್ಟದಲ್ಲಿದ್ದಾಗ ನಾವು ಸಹಾಯ ಮಾಡಿದರೆ, ನಾವು ಕಷ್ಟದಲ್ಲಿದ್ದಾಗ ಅವರು ಸಹಾಯಕ್ಕೆ ಬರುತ್ತಾರೆ ಎನ್ನುವ ಮಾತು ಅಕ್ಷರಶಃ ಸತ್ಯ. ಭಾರತ ಕೊರೋನ ಸೋಂಕಿಗೆ ವಾಕ್ಸಿನ್ ಕಂಡು ಹಿಡಿದಾಗ ಪ್ರಧಾನಿ ಮೋದಿ ವ್ಯಾಕ್ಸಿನ್ ಅನ್ನು ಬಹರೈನ್ ದೇಶಕ್ಕೆ ನೀಡಿತ್ತು. ಇಂದು ನಮ್ಮ ದೇಶದಲ್ಲಿ ಆಖ್ಸಿಜನ್ ಕೊರತೆ ಉಂಟಾಗಿದ್ದು, ಇದು ಗೊತ್ತಾದ ಕೂಡಲೇ ಬಹರೈನ್ ದೇಶ ನೌಕಪಡೆಯ ಯುದ್ಧನೌಕೆಗಳಲ್ಲಿ ಆಕ್ಸಿಜನ್ ಕಳುಹಿಸಿದೆ. ಒಂದು ಟ್ಯಾಂಕ್ ಆಕ್ಸಿಜನ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ" ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್ ಗೆ ಕೆಲವೇ ಮಂದಿ ಮೋದಿಗೆ ಧನ್ಯವಾದ ಎಂದು ಬರೆದುಕೊಂಡಿದ್ದರೆ, ಉಳಿದವರು ಸಿ.ಟಿ.ರವಿ ಹಾಗೂ ಪ್ರಧಾನಿ ವಿರುದ್ಧ ವ್ಯಾಪಕ ಟೀಕೆಗಳ ಸುರಿಮಳೆಗೈದಿದ್ದಾರೆ. "ಹೊರ ದೇಶಕ್ಕೆ ಲಸಿಕೆ ಕೊಡೋಕೆ ಆಗುತ್ತೆ, ನಮ್ಮ ಕರ್ನಾಟಕಕ್ಕೆ ಲಸಿಕೆ ಕೊಡೋಕೆ ಆಗಲ್ವಾ, ನಿನ್ನಂತಹ ಪ್ರಚಾರಬುರುಕ ಇರೋದ್ರಿಂದಲೇ ರಾಜ್ಯಕ್ಕೆ ಈ ಸ್ಥಿತಿ ಬಂದಿದೆ" ಎಂದು ಕನಕರಾಜ್ ಎಂಬವರು ಟೀಕಿಸಿದ್ದಾರೆ. "ಬೇರೆ ದೇಶದವರು ಆಕ್ಸಿಜನ್ ಕಳುಹಿಸಿದರೆ ಅದಕ್ಕೆ ಬೇರೆ ಯಾರದ್ದೋ ಪೋಸ್ಟರ್ ಹಾಕುವ ನಿಮ್ಮ ಜನ್ಮಕ್ಕೆ ನಾಚಿಕೆಯಾಗಬೇಕು, ಕರ್ನಾಟಕದ 25 ಮಂದಿ ಎಂಪಿಗಳು ಏನು ಮಾಡುತ್ತಿದ್ದಾರೆ" ಎಂದು ಮಹಂತೇಶ್ ಎಂಬವರು ಕಮೆಂಟ್ ಮಾಡಿದ್ದಾರೆ.

ಸಂದೀಪ್ ಸಿದ್ದರಾಜು ಎಂಬವರು, "ಸ್ವಾಮಿ ರವಿ ಅವರೇ, ಸುಪ್ರೀಂಕೋರ್ಟ್ ಆದೇಶದಿಂದ ರಾಜ್ಯ, ಜಿಲ್ಲೆಗೆ ಆಕ್ಸಿಜನ್ ಬಂದಿದೆ. ನಿಮ್ಮ ಮೋದಿಯಿಂದಲ್ಲ ಎಂದು ಬರೆದುಕೊಂಡಿದ್ದರೆ, ಕಿರಣ್ ಎಂಬವರು, "ನಿಮ್ಮ ಧರ್ಮ ಪ್ರಮುಖರ ಸಂಘ ಎಲ್ಲಿ ಹೋಗಿವೆ. ಈಗಾಲಾದರೂ ಎಲ್ಲ ಧರ್ಮದವರು ಒಂದೇ ಎಂಬುದನ್ನು ಅರ್ಥಮಾಡಿಕೊಳ್ಳಿ" ಎಂದು ಕಮೆಂಟಿಸಿದ್ದಾರೆ.

"ದೇಶದ ಜನರ ತೆರಿಗೆ ಹಣದಿಂದ ಮೋದಿ ಅಧಿಕಾರ ನಡೆಸುತ್ತಿದ್ದಾರೆ. ಬಹರೈನ್ ದೇಶಕ್ಕೆ ವ್ಯಾಕ್ಸಿನ್ ನೀಡಿದ್ದು, ಜನರ ಹಣದಿಂದಲೇ ಹೊರತು ಮೋದಿ ಅಥವಾ ಬಿಜೆಪಿಯವರ ಮನೆಯ ಹಣದಿಂದಲ್ಲ. ಜನರಿಂದಾಗಿಯೇ ಬಹರೈನ್ ದೇಶ ಆಕ್ಸಿಜನ್ ಕಳುಹಿಸಿದೆ. ನೀವು ಪ್ರಚಾರ ಪಡೆಯುವುದನ್ನು ಈ ಪರಿಸ್ಥಿತಿಯಲ್ಲೂ ಮುಂದುವರಿಸಿರುವುದು ನಾಚಿಕೆಗೇಡು ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು, ಮುಂದೆ ಮೋದಿ ಹೆಸರು ಹೇಳಿಕೊಂಡು ಓಟು ಕೇಳಲು ಬಂದರೇ ಚಪ್ಪಲಿ ಏಟು ಎಂದೂ ಖಾರವಾಗಿ ಪ್ರತಿಕ್ರಿಯಿಸಿದ್ದು, ನೂರಾರು ಮಂದಿ ಸಿ.ಟಿ,ರವಿ ಅವರ ಪೋಸ್ಟ್ ಗೆ ವ್ಯಂಗ್ಯ, ಆಕ್ರೋಶದಿಂದ ಕಮೆಂಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X