Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ: ಗಂಗಾ ನದಿಯಲ್ಲಿ ತೇಲಿಬಂದ...

ಬಿಹಾರ: ಗಂಗಾ ನದಿಯಲ್ಲಿ ತೇಲಿಬಂದ ಮತ್ತಷ್ಟು ಮೃತದೇಹ; ಸ್ಥಳೀಯರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ12 May 2021 11:59 PM IST
share
ಬಿಹಾರ: ಗಂಗಾ ನದಿಯಲ್ಲಿ ತೇಲಿಬಂದ ಮತ್ತಷ್ಟು ಮೃತದೇಹ; ಸ್ಥಳೀಯರಲ್ಲಿ ಆತಂಕ

ಪಾಟ್ನ, ಮೇ 12: ಕೋವಿಡ್ ಸೋಂಕಿತದ್ದು ಎಂದು ಶಂಕಿಸಲಾಗಿರುವ ಇನ್ನಷ್ಟು ಮೃತದೇಹಗಳು ಬಿಹಾರದಲ್ಲಿ ಗಂಗಾ ನದಿಯಲ್ಲಿ ತೇಲಿಬಂದಿದ್ದು ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮತ್ತು ಆಘಾತ ಉಂಟಾಗಿದೆ.

ಮೃತದೇಹದ ಅಂತ್ಯಸಂಸ್ಕಾರದ  ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಲು ಯಾರೊಬ್ಬರೂ ಸಿದ್ಧರಿಲ್ಲದ ಕಾರಣ ಬಿಹಾರದ ಗ್ರಾಮೀಣ ಭಾಗದಲ್ಲಿ ಗಂಗಾ ನದಿ ಪಾತ್ರದ ಬಳಿಯಿರುವ ಪ್ರದೇಶದಲ್ಲಿ ಆರೋಗ್ಯದ ಸಮಸ್ಯೆ ಬಿಗಡಾಯಿಸುವ ಭೀತಿ ನೆಲೆಸಿದೆ. ನೆರೆಯ ಉತ್ತರಪ್ರದೇಶದಲ್ಲೂ ಗಂಗಾ ನದಿ ಹರಿಯುವ ಪ್ರದೇಶದ ಜನತೆ ಅನಾರೋಗ್ಯದ ಸಮಸ್ಯೆಯ ಭೀತಿಗೆ ಒಳಗಾಗಿದ್ದಾರೆ.

ಕಳೆದ 2 ದಿನಗಳಲ್ಲಿ ಬಿಹಾರದ ಗಂಗಾನದಿ ತೀರದಲ್ಲಿರುವ ಬಕ್ಸರ್ ಹಾಗೂ ಬ್ರಹ್ಮಪುರ  ಪ್ರಾಂತ್ಯದಲ್ಲಿ 100ಕ್ಕೂ ಹೆಚ್ಚು ಕೊಳೆತ ಶವಗಳು ನದಿಯಲ್ಲಿ  ತೇಲಿಬಂದಿವೆ. ಆದರೆ ಈ ಮೃತದೇಹ ಪತ್ತೆಯಾದ ಸ್ಥಳ ಉತ್ತರಪ್ರದೇಶಕ್ಕೆ ಸೇರುತ್ತದೆ ಎಂದು ಹೇಳಿರುವ ಅಧಿಕಾರಿಗಳು ಮೃತದೇಹದ ಅಂತ್ಯಸಂಸ್ಕಾರದ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಎರಡೂ ರಾಜ್ಯಗಳ ಅಧಿಕಾರಿಗಳು ಪರಸ್ಪರರ ಮೇಲೆ ದೋಷಾರೋಪಣೆಗೆ ಮುಂದಾಗಿದ್ದಾರೆ.

ಬಿಹಾರವನ್ನು ಉತ್ತರಪ್ರದೇಶದ ಬಲ್ಲಿಯಾ ಗ್ರಾಮಕ್ಕೆ ಸಂಪರ್ಕಿಸುವ ಜೈಪ್ರಭಾ ಸೇತುವೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಈ ಮೃತದೇಹಗಳನ್ನು ನದಿಗೆ ಎಸೆಯಲಾಗಿದ್ದು ಅವು ಬಿಹಾರಕ್ಕೆ ತೇಲಿಬಂದಿವೆ ಎಂದು ಬಿಹಾರದ ಬಿಜೆಪಿ ಸಂಸದ ಜನಾರ್ದನ ಸಿಂಗ್ ಸಿಗ್ರಿವಾಲ್ ಆರೋಪಿಸಿದ್ದಾರೆ. ಅಂತ್ಯಸಂಸ್ಕಾರ ಸೂಕ್ತ ರೀತಿಯಲ್ಲಿ ನಡೆಸುವ ಬಗ್ಗೆ ಗಮನ ನೀಡುವಂತೆ ಅಧಿಕಾರಿಗಳಿಗೆ  ಸೂಚಿಸಿದ್ದೇನೆ ಎಂದವರು ಹೇಳಿದ್ದಾರೆ.

‌

ಆದರೆ ಗ್ರಾಮಸ್ಥರ ಪ್ರಕಾರ, ಎರಡೂ ರಾಜ್ಯಗಳಲ್ಲಿ ಶವಗಳನ್ನು ಗಂಗಾ ನದಿಗೆ ಎಸೆಯಲಾಗುತ್ತಿದೆ. ಮಂಗಳವಾರ ಉತ್ತರಪ್ರದೇಶದ ಘಾಝಿಪುರದ ಗಂಗಾನದಿ ತೀರದಲ್ಲೂ ಮೃತದೇಹಗಳು ತೇಲಿಬಂದಿದೆ. ತಕ್ಷಣ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದು ಮೃತದೇಹ ಎಲ್ಲಿಂದ ಬಂದಿದೆ ಎಂಬ ಬಗ್ಗೆ  ತನಿಖೆ ನಡೆಸಲಾಗುವುದು ಎಂದು ಗಾಝಿಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ.ಪಿ. ಸಿಂಗ್ ಹೇಳಿದ್ದಾರೆ.

ಮೃತದೇಹ ಸುಡಲು ಕಟ್ಟಿಗೆಯ ಕೊರತೆ ಇರುವುದರಿಂದ ಮೃತದೇಹಗಳನ್ನು ಈ ರೀತಿ ಗಂಗೆಯಲ್ಲಿ ತೇಲಿಬಿಟ್ಟಿರಬಹುದು. ಆದರೆ ತೇಲಿಬಂದ  ಮೃತದೇಹದ ಅಂತ್ಯಸಂಸ್ಕಾರಕ್ಕೆ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸ್ಥಳದಲ್ಲಿ ಸೋಂಕು ರೋಗ ಹರಡುವ ಸಾಧ್ಯತೆಯಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಮಧ್ಯೆ, ಕೊರೋನ ಸೋಂಕಿನ ಅಧಿಕೃತ ಅಂಕಿಅಂಶವನ್ನು ಮುಚ್ಚಿಟ್ಟು, ಮೃತಪಟ್ಟವರ ಪ್ರಮಾಣವನ್ನು ಕಡಿಮೆ ಎಂದು ತೋರಿಸಿಕೊಳ್ಳುವ ಉದ್ದೇಶದಿಂದ ಸೋಂಕಿತರ ಮೃತದೇಹಗಳನ್ನು ಈ ರೀತಿ ವಿಲೇವಾರಿ ಮಾಡಿರುವ ಸಾಧ್ಯತೆಯಿದೆ ಎಂದೂ ಸ್ಥಳೀಯರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X