Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಪ್ರತಿನಿಧಿಸುವ ವಾರಣಾಸಿ...

ಪ್ರಧಾನಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ನದಿಯಲ್ಲಿ ತೇಲುತ್ತಿರುವ ಶವಗಳು

ಉನ್ನಾವೊ: ಗಂಗಾ ನದಿ ತೀರದ ಮರಳಿನಲ್ಲಿ ಹೂತುಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ13 May 2021 10:02 AM IST
share
ಪ್ರಧಾನಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ನದಿಯಲ್ಲಿ ತೇಲುತ್ತಿರುವ ಶವಗಳು

ಲಕ್ನೊ: ಘಾಜಿಪುರ,  ಬಕ್ಸರ್ ಬಳಿಕ  ಈಗ  ಉತ್ತರಪ್ರದೇಶದ ವಾರಣಾಸಿ ಮತ್ತು ಉನ್ನಾವೊದಲ್ಲಿನ ಗಂಗಾ ನದಿ ನೀರಿನಲ್ಲಿ ಶವಗಳು ಸಂಗ್ರಹವಾಗುತ್ತಿವೆ. ನದಿಯ ವಿವಿಧ ಭಾಗಗಳಲ್ಲಿ ಬುಧವಾರ ನಾಲ್ಕು ಶವಗಳು ಪತ್ತೆಯಾಗಿದ್ದರಿಂದ  ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿಯಲ್ಲಿ ಭೀತಿ ಆವರಿಸಿದೆ.

ವಾರಣಾಸಿಯಲ್ಲಿ ನದಿಯಲ್ಲಿ ಎರಡು ಶವಗಳು ತೇಲುತ್ತಿದ್ದರೆ, ಇತರ ಎರಡು ಶವಗಳು ಮರಳಿನ ರಾಶಿಯ ಮೇಲೆ ಬಿದ್ದದ್ದವು. ವಾರಣಾಸಿಯ ಘಾಟ್ ಗಳಾದ್ಯಂತ, ನದಿಯ ಮರಳು ದಂಡೆಯಲ್ಲಿ ಎರಡು ಶವಗಳನ್ನು ಗುರುತಿಸಲಾಗಿದೆ.

ವಾರಣಾಸಿ ಘಾಟ್‌ಗಳಲ್ಲಿದ್ದ ಅಂಬಿಗರು ಮೃತ ದೇಹದಿಂದ ದುರ್ವಾಸನೆ ಬೀರುತ್ತಿರುವ ಬಗ್ಗೆ ದೂರು ನೀಡಿದ್ದು, ಶವಗಳು ಕೋವಿಡ್ -19 ಸಂತ್ರಸ್ತರದ್ದಾಗಿರಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ದಡದ ಇನ್ನೊಂದು ಬದಿಯ ಸ್ಥಳೀಯರು ನದಿ ನೀರಿನಲ್ಲಿ ಶವಗಳನ್ನು ಎಸೆಯುತ್ತಿದ್ದಾರೆ ಎಂದು ಅಂಬಿಗರು ಹೇಳಿದ್ದಾರೆ.

ಏತನ್ಮಧ್ಯೆ, ಉನ್ನಾವೊದಲ್ಲಿ, ಗಂಗಾ ನದಿ ಬಳಿ ಮರಳಿನಲ್ಲಿ ಹೂತುಹಾಕಿದ ಶವಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

"ಕೆಲವರು ಶವಗಳನ್ನು ಸುಡುವುದಿಲ್ಲ. ಆದರೆ ಶವಗಳನ್ನು ನದಿಯ ಮರಳಿನಲ್ಲಿ ಹೂತುಹಾಕುತ್ತಾರೆ. ನಮ್ಮ ತಂಡವು ನದಿಯಿಂದ ದೂರದಲ್ಲಿರುವ ಪ್ರದೇಶದಲ್ಲಿ ಸಮಾಧಿ ಮಾಡಿದ ಶವಗಳನ್ನು ಪತ್ತೆ ಮಾಡಿದೆ. ಇತರ ಪ್ರದೇಶಗಳಲ್ಲಿ ಹೆಚ್ಚಿನ ಶವಗಳಿಗಾಗಿ ಶೋಧ ನಡೆಸಲಾಗುತ್ತಿದೆ. ನನಗೆ ಮಾಹಿತಿ ದೊರೆತ ನಂತರ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೇನೆ. ವಿಚಾರಣೆ ನಡೆಸುವಂತೆ ನಾನು ಅವರನ್ನು ಕೇಳಿದ್ದು,  ನಾವು ಕ್ರಮ ಕೈಗೊಳ್ಳುತ್ತೇವೆ" ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಮಾಧ್ಯಮಗಳಿಗೆ ತಿಳಿಸಿದರು

ಗಂಗಾ ನದಿ ಮಧ್ಯದಲ್ಲಿ ತೇಲುತ್ತಿರುವ ಹಲವಾರು ಶವಗಳನ್ನು ಜನರು ನೋಡಿದ್ದಾರೆ. ಉನ್ನಾವೊದಲ್ಲಿನ ಕೆಲವು ಶವಗಳನ್ನು ನಾಯಿಗಳು  ತಿನ್ನುತ್ತಿರುವುದನ್ನು ನೋಡಿ ಜನರು  ಆತಂಕಗೊಂಡಿದ್ದಾರೆ.

“ಮೂರು ಜಿಲ್ಲೆಗಳ ಸ್ಥಳೀಯರು ಈ ಪ್ರದೇಶದಲ್ಲಿ ಶವಸಂಸ್ಕಾರ ಮಾಡುತ್ತಾರೆ ಹಾಗೂ  ಅಂತಿಮ ವಿಧಿಗಳನ್ನು ನಿರ್ವಹಿಸಲು ಸಾಧ್ಯವಾಗದ ಕೆಲವರು ಶವಗಳನ್ನು ಎಸೆದಿರಬೇಕು’’ ಎಂದು ಉನ್ನಾವೊ ಜಿಲ್ಲಾಧಿಕಾರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X