Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ದೇವಸ್ಥಾನಗಳು, ಮೂರ್ತಿಗಳು, ಪ್ರಧಾನಿ...

"ದೇವಸ್ಥಾನಗಳು, ಮೂರ್ತಿಗಳು, ಪ್ರಧಾನಿ ನಿವಾಸ ನಿರ್ಮಿಸುವ ಬದಲು, ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಬೇಕಿದೆ"

ಕೋವಿಡ್‍ನಿಂದ ಮೃತಪಟ್ಟ ಪಂಡಿತ್ ರಾಜನ್ ಮಿಶ್ರಾ ಪುತ್ರ ರಜನೀಶ್

ವಾರ್ತಾಭಾರತಿವಾರ್ತಾಭಾರತಿ13 May 2021 3:00 PM IST
share
ದೇವಸ್ಥಾನಗಳು, ಮೂರ್ತಿಗಳು, ಪ್ರಧಾನಿ ನಿವಾಸ ನಿರ್ಮಿಸುವ ಬದಲು, ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಬೇಕಿದೆ

ಹೊಸದಿಲ್ಲಿ: ದೇವಸ್ಥಾನಗಳು, ಮೂರ್ತಿಗಳು ಹಾಗೂ ಪ್ರಧಾನಿಯ  ಹೊಸ ನಿವಾಸದ ಬದಲು ಕೇಂದ್ರ ಸರಕಾರ ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಬೇಕಿದೆ ಎಂದು  ಕಳೆದ ತಿಂಗಳು ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ನಿಧನರಾದ ಖ್ಯಾತ ಹಿಂದುಸ್ತಾನಿ ಗಾಯಕ ಪಂಡಿತ್ ರಾಜನ್ ಮಿಶ್ರಾ ಅವರ ಪುತ್ರ  ರಜನೀಶ್ ಮಿಶ್ರಾ ಹೇಳಿದ್ದಾರೆ.

"ಸೂಕ್ತ ಚಿಕಿತ್ಸೆ ದೊರೆತಿದ್ದರೆ ಬದುಕುಳಿಯುತ್ತಿದ್ದ ಆದರೆ  ಚಿಕಿತ್ಸೆ ಲಭಿಸದೇ ಇದ್ದ ಪಂಡಿತ್‍ಜೀ ಅವರಂತಹ ಒಬ್ಬ ವ್ಯಕ್ತಿ, ಒಬ್ಬ ಪದ್ಮ ಭೂಷಣ ಪ್ರಶಸ್ತಿ ವಿಜೇತ ಅವರಿಗೆ ಹೀಗಾಗಿದ್ದರೆ ಜನಸಾಮಾನ್ಯರ ಗತಿಯೇನು,?" ಎಂದು ರಜನೀಶ್ ಪ್ರಶ್ನಿಸಿದ್ದಾರೆ.

"ತಂದೆ ಈಗ ಆಸ್ಪತ್ರೆ ನೋಡಲು ಬರುವುದಿಲ್ಲ ಹಾಗೂ ರಾಮ್ ಜೀ ಕೂಡ ಅಯ್ಯೋಧ್ಯೆಯಲ್ಲಿನ ದೇವಸ್ಥಾನ ನೋಡಲು ಬರುವುದಿಲ್ಲ, ಈಗ ದೇಶಕ್ಕೆ ಉತ್ತಮ ಸವಲತ್ತುಗಳಿರುವ  ಆಸ್ಪತ್ರೆ ಬೇಕಿದೆ" ಎಂದು ಹೇಳಿದ ಅವರು "ದೇವಸ್ಥಾನ, ಮೂರ್ತಿಗಳು ಹಾಗೂ ಸಾವಿರಾರು ಕೋಟಿ ರೂಪಾಯಿ ಬಳಸಿ ಪ್ರಧಾನಿಗೆ ಹೊಸ ಮನೆ ನಿರ್ಮಿಸುವ ಬದಲು ಸರಕಾರ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. 

ಜನಸಾಮಾನ್ಯ ಮತ್ತಾತನ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕೆಂದು ಸರಕಾರವನ್ನು ಕೋರುತ್ತೇನೆ. ಯಾರಾದರೂ ನಮ್ಮನ್ನಗಲಿದಾಗ ಅದು ಬಹಳಷ್ಟು ನೋವುಂಟು ಮಾಡುತ್ತದೆ.  ನಾವೆಲ್ಲರೂ ಆ ನೋವನ್ನು ಅನುಭವಿಸಬೇಕು.  ಒಬ್ಬ ವ್ಯಕ್ತಿ ಸತ್ತ ಮೇಲೆ ಸ್ಮಾರಕಗಳನ್ನು ನಿರ್ಮಿಸಿ ಅಥವಾ ಪ್ರಶಸ್ತಿ ನೀಡಿ ಪ್ರಯೋಜನವಿಲ್ಲ, ನಿಮ್ಮಲ್ಲಿ ದೇವಸ್ಥಾನಗಳು, ಪ್ರಧಾನಿ ನಿವಾಸ ಅಥವಾ ರಾಷ್ಟ್ರಪತಿ ಭವನ ನಿರ್ಮಿಸಲು ಹಣವಿದ್ದರೆ, ಅದು ಕಾಯಬಹುದು,. ಈಗ ಆ ಹಣವನ್ನು ದೇಶದ  ಆರೋಗ್ಯ ಸೇವಾ ವ್ಯವಸ್ಥೆಗೆ ವಿನಿಯೊಗಿಸಬೇಕಿದೆ,'' ಎಂದು ಅವರು ಹೇಳಿದರು.

 ದಿಲ್ಲಿಯ ಸೈಂಟ್ ಸ್ಟೀಫನ್ಸ್  ಆಸ್ಪತ್ರೆಗೆ ದಾಖಲಾಗಿದ್ದ ಪಂಡಿತ್ ರಾಜನ್ ಮಿಶ್ರಾ ಅವರಿಗೆ ವೆಂಟಿಲೇಟರ್ ತುರ್ತಾಗಿ ಅಗತ್ಯವಿದ್ದರೂ ಅದು ಲಭಿಸಿರಲಿಲ್ಲ, ಕೊನೆಗೆ ಪ್ರಧಾನಿ ಕಾರ್ಯಾಲಯ ಸಹಾಯ ಮಾಡಲು ಮುಂದೆ ಬಂದಿತ್ತಾದರೂ ಅಷ್ಟರೊಳಗಾಗಿ ರಾಜನ್ ಮಿಶ್ರಾ ಅವರು ಕೊನೆಯುಸಿರೆಳೆದಿದ್ದರು ಎಂದು ರಜನೀಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X