Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ...

ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್: ಸಚಿವ ಅರವಿಂದ ಲಿಂಬಾವಳಿ

ವಾರ್ತಾಭಾರತಿವಾರ್ತಾಭಾರತಿ14 May 2021 5:11 PM IST
share
ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್: ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು ಮೇ 14: ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್‍ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಶುಕ್ರವಾರ ಯಶವಂತಪುರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನ ಸೋಂಕಿತರಿಗೆ ನೆರವು ನೀಡಲು ಸ್ಥಾಪಿಸಿರುವ 1912 ಸಹಾಯವಾಣಿಯ ಹೆಚ್ಚುವರಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ 1912 ಸಹಾಯವಾಣಿಯಲ್ಲಿ 60 ಮಾರ್ಗಗಳಿದ್ದವು, ಈಗ ಅದಕ್ಕೆ ಹೆಚ್ಚುವರಿಯಾಗಿ 70 ಮಾರ್ಗಗಳನ್ನು(ಸೀಟರ್) ಸೇರಿಸಲಾಗಿದೆ. ಈವರೆಗೂ ಈ ಸಹಾಯವಾಣಿಗೆ ಕರೆ ಮಾಡಿದಾಗ 12 ರಿಂದ 20 ನಿಮಿಷಗಳ ಕಾಯುವಿಕೆ ಇರುತ್ತಿತ್ತು, ಆದರೆ ಈ ಹೆಚ್ಚುವರಿ ಕರೆ ಮಾರ್ಗಗಳನ್ನು ಸ್ಥಾಪಿಸಿರುವುದರಿಂದ ಈಗ ಕರೆ ಮಾಡಿದ ಕೂಡಲೇ ಸೇವೆ ಲಭ್ಯವಾಗಲಿದೆ ಎಂದು ತಿಳಿಸಿದರು.

ಈ ಕಾಲ್ ಸೆಂಟರ್ ನಲ್ಲಿ ವೈದ್ಯರು ಉಪಸ್ಥಿತರಿದ್ದು, ವಲಯಗಳಿಗೆ ಕರೆ ವರ್ಗಾವಣೆ ವಿಳಂಬವಾದಲ್ಲಿ ಅವರೇ ಸ್ವತಃ ಮಾತನಾಡಿ ಅಗತ್ಯ ವೈದ್ಯಕೀಯ ಸಲಹೆ ಸೂಚನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಕಾಲ್ ಸೆಂಟರ್ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಜೊತೆಗೆ ಟ್ರಯೇಜಿಂಗ್ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಈ ಕೇಂದ್ರವನ್ನು ಸ್ಥಾಪಿಸುವ ಮೂಲಕ ಎಲ್ಲ ವಲಯಗಳನ್ನು ಒಳಗೊಂಡಂತೆ 9 ವಾರ್ ರೂಮ್ ಮತ್ತು ಒಂದು ಕೇಂದ್ರ ವಾರ್ ರೂಮ್ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ. ಜೊತೆಗೆ ಇದರಿಂದ ವಾರ್ ರೂಮ್ ಮತ್ತು ಕಾಲ್ ಸೆಂಟರ್‍ಗಳ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ರಂದೀಪ್, ಸಹಾಯವಾಣಿ ನೋಡಲ್ ಅಧಿಕಾರಿ ವಿಪಿನ್ ಸಿಂಗ್ ಸೇರಿ ಉನ್ನತ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X