Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರ...

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರ ಬೇಜವಾಬ್ದಾರಿ ಹೇಳಿಕೆ: ಕುಮಾರಸ್ವಾಮಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ14 May 2021 5:36 PM IST
share
ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರ ಬೇಜವಾಬ್ದಾರಿ ಹೇಳಿಕೆ: ಕುಮಾರಸ್ವಾಮಿ ಟೀಕೆ

ಬೆಂಗಳೂರು, ಮೇ 14: ಬಿಜೆಪಿ ನಾಯಕರೇ ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ನಿಮ್ಮ ಕರ್ತವ್ಯ ನೀವು ಮಾಡಿ. ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಹೊಸದಿಲ್ಲಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ' ಎಂದು ತಿಳಿಸಿದ್ದಾರೆ.

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರಕಾರಗಳಿರುವೆಡೆ ಅಂತಹ ಬದ್ಧತೆ ಕಾಣುತ್ತಿಲ್ಲ' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೋವಿಡ್-19 ಸೋಂಕು ನಿಭಾಯಿಸುವಲ್ಲಿ ಕೇಂದ್ರ, ರಾಜ್ಯಗಳೆರಡೂ ವಿಫಲವಾಗಿವೆ. ಅತೀ ಹೆಚ್ಚು ಕೋವಿಡ್ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರಕಾರದ ಅಸಮರ್ಥತೆ' ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

`ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,' ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? `ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,' ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

`ನಾವೇನ್ ನೋಟ್ ಪ್ರಿಂಟ್ ಮಾಡ್ತೀವಾ? ಜಡ್ಜ್ ಗಳು ಸರ್ವಜ್ಞರಲ್ಲ. ಕೊರೋನ ವೈರಸ್‍ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್ ಪ್ಯಾಕೇಜ್ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ. ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X