Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ವಯಂ ಸೇವಕ ತಂಡ ಕಟ್ಟಿಕೊಂಡು ಕೋವಿಡ್...

ಸ್ವಯಂ ಸೇವಕ ತಂಡ ಕಟ್ಟಿಕೊಂಡು ಕೋವಿಡ್ ಪೀಡಿತರಿಗೆ ಕ್ರಿಕೆಟಿಗ ಹನುಮ ವಿಹಾರಿ ನೆರವು

ವಾರ್ತಾಭಾರತಿವಾರ್ತಾಭಾರತಿ14 May 2021 6:01 PM IST
share
ಸ್ವಯಂ ಸೇವಕ ತಂಡ ಕಟ್ಟಿಕೊಂಡು ಕೋವಿಡ್ ಪೀಡಿತರಿಗೆ ಕ್ರಿಕೆಟಿಗ ಹನುಮ ವಿಹಾರಿ ನೆರವು

ಹೈದರಾಬಾದ್: ದೇಶದಿಂದ ದೂರವಿದ್ದರೂ  ಟೆಸ್ಟ್ ಬ್ಯಾಟ್ಸ್‌ಮನ್ ಹನುಮ ವಿಹಾರಿ ಅವರು ಕೊರೋನವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ಕೊಡುಗೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ, ಕೋವಿಡ್ -19 ರೋಗಿಗಳಿಗೆ ಆಸ್ಪತ್ರೆಯ ಹಾಸಿಗೆಗಳು ಹಾಗೂ ಆಮ್ಲಜನಕದ ಸಿಲಿಂಡರ್‌ಗಳನ್ನು ವ್ಯವಸ್ಥೆ ಮಾಡಿ  ಜನರಿಗೆ ಸಹಾಯ ಮಾಡಿದ್ದಾರೆ.

"ನಾನು ನನ್ನನ್ನು ವೈಭವೀಕರಿಸಲು ಬಯಸುವುದಿಲ್ಲ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯದ ಅಗತ್ಯವಿರುವ ತಳಮಟ್ಟದ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ನಾನು ಇದನ್ನು ಮಾಡುತ್ತಿದ್ದೇನೆ. ಇದು ಕೇವಲ ಆರಂಭವಾಗಿದೆ" ಎಂದು ವಿಹಾರಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದರು .

ಕೋವಿಡ್-19 ರೋಗಿಗಳು ಹಾಗೂ  ಅವರ ಕುಟುಂಬಗಳು ಪ್ರತಿದಿನ ಎದುರಿಸುತ್ತಿರುವ ಸಮಸ್ಯೆಗಳಿಂದ ಎಲ್ಲ ಭಾರತೀಯರಂತ ವಿಹಾರಿ ಕೂಡ ಆಘಾತಕ್ಕೊಳಗಾಗಿದ್ದಾರೆ. ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ ಸರಬರಾಜು ಹಾಗೂ  ಅಗತ್ಯ ಔಷಧಿಗಳಂತಹ ಮೂಲಭೂತ ಅವಶ್ಯಕತೆಯನ್ನು ಪೂರೈಸಿಕೊಳ್ಳುವುದು ತ್ರಾಸದಾಯಕವಾಗಿದೆ.

“ಕೊರೋನದ ಎರಡನೆಯ ಅಲೆಯು  ತುಂಬಾ ಪ್ರಬಲವಾಗಿದ್ದರಿಂದ, ಆಸ್ಪತ್ರೆಯ ಹಾಸಿಗೆಯನ್ನು ಪಡೆಯುವುದು ಕಷ್ಟಕರವಾಯಿತು ಹಾಗೂ  ಅದು ಯೋಚಿಸಲಾಗದ ಸಂಗತಿಯಾಗಿದೆ. ಆದ್ದರಿಂದ, ನನ್ನ ಫಾಲೋವರ್ಸ್ ಗಳನ್ನು ನನ್ನ ಸ್ವಯಂಸೇವಕರಾಗಿ ಬಳಸಲು ಹಾಗೂ  ನನಗೆ ಸಾಧ್ಯವಾದಷ್ಟು ಜನರಿಗೆ ಸಹಾಯ ಮಾಡಲು ನಾನು ನಿರ್ಧರಿಸಿದ್ದೇನೆ "ಎಂದು 110,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಹಾರಿ ಹೇಳಿದರು.

"ಪ್ಲಾಸ್ಮಾ, ಹಾಸಿಗೆಗಳು ಮತ್ತು ಅಗತ್ಯ ಔಷಧಿಗಳನ್ನು ಪಡೆಯಲು ಅಥವಾ ವ್ಯವಸ್ಥೆ ಮಾಡಲು ಸಾಧ್ಯವಾಗದ ಜನರನ್ನು ತಲುಪುವುದು ನನ್ನ ಗುರಿಯಾಗಿದೆ. ಆದರೆ ಇದು ಸಾಕಾಗುವುದಿಲ್ಲ. ಭವಿಷ್ಯದಲ್ಲಿ ಹೆಚ್ಚಿನ ಸೇವೆ ಮಾಡಲು ನಾನು ಬಯಸುತ್ತೇನೆ" ಎಂದು ವಿಹಾರಿ ಹೇಳಿದರು.

ನಾನು ಸ್ವಯಂಸೇವಕರಾಗಿ ವಾಟ್ಸಾಪ್ ಗುಂಪಿನಲ್ಲಿ ಸುಮಾರು 100 ಜನರನ್ನು ಹೊಂದಿದ್ದೇನೆ ಹಾಗೂ  ಅವರ ಕಠಿಣ ಪರಿಶ್ರಮದಿಂದ ನಾವು ಕೆಲವು ಜನರಿಗೆ ಸಹಾಯ ಮಾಡಲು ಸಾಧ್ಯವಾಯಿತು. ಹೌದು, ನಾನು ಕ್ರಿಕೆಟಿಗ, ಚಿರಪರಿಚಿತ, ಆದರೆ ತೊಂದರೆಗೀಡಾದವರನ್ನು ತಲುಪಲು ಸ್ವಯಂ ಸೇವಕರ ಸತತ ಪ್ರಯತ್ನದಿಂದಾಗಿ ನಾನು ಸಹಾಯ ಮಾಡಲು ಸಮರ್ಥನಾಗಿದ್ದೇನೆ "ಎಂದು ವಿಹಾರಿ ಹೇಳಿದರು.

"ನನ್ನ ಪತ್ನಿ, ಸಹೋದರಿ ಹಾಗೂ ನನ್ನ ಕೆಲವು ಆಂಧ್ರ ಕ್ರಿಕೆಟ್ ತಂಡದ ಸಹ ಆಟಗಾರರು ಕೂಡ ನನ್ನ ಸ್ವಯಂಸೇವಕ ತಂಡದ ಭಾಗವಾಗಿದ್ದಾರೆ. ಅವರ ಬೆಂಬಲವನ್ನು ನೋಡಿದಾಗ ಹೃದಯ ತುಂಬಿ ಬರುತ್ತದೆ" ಎಂದು ವಿಹಾರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X