Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ಪೊಲೀಸ್ ಕೋವಿಡ್ ಕೇರ್...

ಮಂಗಳೂರು: ‘ಪೊಲೀಸ್ ಕೋವಿಡ್ ಕೇರ್ ಸೆಂಟರ್’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 May 2021 10:18 PM IST
share
ಮಂಗಳೂರು: ‘ಪೊಲೀಸ್ ಕೋವಿಡ್ ಕೇರ್ ಸೆಂಟರ್’ಗೆ ಚಾಲನೆ

ಮಂಗಳೂರು, ಮೇ 14: ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆರಂಭಗೊಂಡ ‘ಪೊಲೀಸ್ ಕೋವಿಡ್ ಕೇರ್ ಸೆಂಟರ್’ಗೆ ಚಾಲನೆ ನೀಡಲಾಗಿದೆ.

ಈ ಸೆಂಟರ್‌ನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪೊಲೀಸರು ಸಹಿತ ಕೊರೋನ ಫ್ರಂಟ್‌ಲೈನ್ ವಾರಿಯರ್ಸ್‌ ಜತೆ ಜಿಲ್ಲಾಡಳಿತ ಸಹಿತ ಸರಕಾರ ಸದಾ ಇರುತ್ತದೆ ಎಂದರು.

ಪೊಲೀಸರು ಪ್ರತೀ ಕ್ಷಣವು ವಿಷಮ ಪರಿಸ್ಥಿತಿಯಲ್ಲೂ ರಾತ್ರಿ ಹಗಲು ಎನ್ನದೆ ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಾರೆ. ಕೊರೋನ ಸಂದರ್ಭ ಕೂಡ ಪೊಲೀಸರ ಸೇವೆ ಮಹತ್ವದ್ದಾಗಿದೆ. ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು, ಸಿಬಂದಿ, ಚಾಲಕರಿಗೆ ಪ್ರತ್ಯೇಕವಾದ ಕೋವಿಡ್ ಸೆಂಟರ್‌ನ್ನು ಈಗಾಗಲೇ ಆರಂಭಿಸಲಾಗಿದೆ. ಅದೇ ರೀತಿಯಲ್ಲಿ ಪೊಲೀಸರಿಗೂ ‘ಪೊಲೀಸ್ ಕೋವಿಡ್ ಕೇರ್‌ಸೆಂಟರ್’ ಆರಂಭಿಸ ಲಾಗಿದೆ ಎಂದು ಡಾ. ರಾಜೇಂದ್ರ ತಿಳಿಸಿದರು.

ಈ ಕೋವಿಡ್ ಕೇರ್ ಸೆಂಟರ್‌ಗೆ ಬೇಕಾಗುವ ವೈದ್ಯರು, ಸಿಬ್ಬಂದಿ ವರ್ಗವನ್ನು ನೀಡಲಾಗುವುದು. ಯಾವುದೇ ರೀತಿಯ ವೈದ್ಯಕೀಯ ಸೌಲಭ್ಯ ಬೇಕಾದರೂ ಒದಗಿಸಿಕೊಡಲು ಜಿಲ್ಲಾಡಳಿತ ಬದ್ಧವಿದೆ. ಕೋವಿಡ್ ಕೇರ್ ಸೆಂಟರ್‌ಗೆ ಕಟ್ಟಡ ಹಾಗೂ ಇತರ ಸೌಕರ್ಯ ಒದಗಿಸಿಕೊಟ್ಟಿರುವ ಕಾಲೇಜಿನ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಅಭಿನಂದನಾರ್ಹರು. ಪೊಲೀಸರ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಆಯುಕ್ತರು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ನುಡಿದರು.

ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಕೋವಿಡ್ ಕೇರ್ ಸೆಂಟರ್ ಅಲೋಶಿಯಸ್ ಕಾಲೇಜಿನ ಸುವ್ಯವಸ್ಥಿತ ಕಟ್ಟಡದಲ್ಲಿದ್ದು, ಇತರೆ ಕಟ್ಟಡಗಳಿಂದ ಪ್ರತ್ಯೇಕವಾಗಿದೆ. ಇಲ್ಲಿ ಉತ್ತಮ ವಾತಾವರಣವಿದೆ. ಸದ್ಯ 20 ಬೆಡ್‌ಗಳಿದ್ದು ಡೈನಿಂಗ್ ಹಾಲ್, ರಿಕ್ರಿಯೇಷನ್ ರೂಮ್ ಕೂಡ ಇದೆ. ಊಟ, ಉಪಹಾರ, ಬಿಸಿ ನೀರು ಮೊದಲಾದ ವ್ಯವಸ್ಥೆಯೂ ಇರುತ್ತದೆ. ಯಾವುದೇ ಹಿಂಜರಿಕೆ ಇಲ್ಲದೆ ಕೋವಿಡ್ ಸೋಂಕಿತ ಪೊಲೀಸರು ಹಾಗೂ ಅವರ ಕುಟುಂಬದವರು ಇಲ್ಲಿ ಬಂದು ಉಳಿದುಕೊಳ್ಳಬಹುದು. ಮನೆಯಲ್ಲಿ ಐಸೊಲೇಷನ್‌ನಲ್ಲಿ ರುವುದು ಅಸಾಧ್ಯವಾದವರಿಗೆ ವ್ಯವಸ್ಥೆ ಮಾಡಿಕೊಡುವ ಉದ್ದೇಶದಿಂದ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಈ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಎಂದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ವಂ.ಪ್ರವೀಣ್ ಮಾರ್ಟಿಸ್, ಐಟಿಐ ನಿರ್ದೇಶಕ ವಂ.ಸಿರಿಲ್ ಡಿಮೆಲ್ಲೊ, ಎಸ್‌ಎಸಿಎಎ ಅಧ್ಯಕ್ಷ ಸ್ಟೀವನ್ ಪಿಂಟೊ, ಪಿಯು ಕಾಲೇಜಿನ ಪ್ರಾಂಶುಪಾಲ ವಂ. ಕ್ಲಿಫರ್ಡ್ ಸಿಕ್ವೇರಾ, ಪರೀಕ್ಷಾಂಗ ಕುಲಸಚಿವ ಅಲ್ವಿನ್ ಡೇಸಾ ಉಪಸ್ಥಿತರಿದ್ದರು.

ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 1,700 ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಬಾರಿ 330 ಪೊಲೀಸರು ಕೊರೋನ ಸೋಂಕಿತರಾಗಿದ್ದರು. ಈ ಬಾರಿ 62 ಮಂದಿ ಸೋಂಕಿತರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಅವರ ಕುಟುಂಬಿಕರ ಸುರಕ್ಷತೆಗೆ ಆದ್ಯತೆ ನೀಡುವ ದೃಷ್ಟಿಯಿಂದ ಪೊಲೀಸ್ ಕೋವಿಡ್ ಕೇರ್ ಆರಂಭಿಸಲಾಗಿದೆ.
-ಎನ್.ಶಶಿಕುಮಾರ್
ಪೊಲೀಸ್ ಆಯುಕ್ತರು, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X