Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋವಿಡ್‌ಗೆ 7 ಬಲಿ; 1146 ಮಂದಿಗೆ...

ಉಡುಪಿ: ಕೋವಿಡ್‌ಗೆ 7 ಬಲಿ; 1146 ಮಂದಿಗೆ ಕೊರೋನ ಪಾಸಿಟಿವ್

1496 ಮಂದಿ ಗುಣಮುಖ

ವಾರ್ತಾಭಾರತಿವಾರ್ತಾಭಾರತಿ15 May 2021 9:34 PM IST
share
ಉಡುಪಿ: ಕೋವಿಡ್‌ಗೆ 7 ಬಲಿ; 1146 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 15: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಶನಿವಾರ ಮತ್ತೆ ಏಳು ಮಂದಿ ಬಲಿಯಾಗಿದ್ದಾರೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 261ಕ್ಕೇರಿದೆ. ದಿನದಲ್ಲಿ 1146 ಮಂದಿ ಹೊಸದಾಗಿ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಇಂದು 1496 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 7262 ಮಂದಿ ಸೋಂಕಿಗೆ ಸಕ್ರಿಯರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಶನಿವಾರ ವರದಿಯಾದ ಏಳು ಮಂದಿ ಮೃತರಲ್ಲಿ ನಾಲ್ವರು (75, 63, 65, 35 ವರ್ಷ) ಪುರುಷರು ಹಾಗೂ ಮೂವರು (46, 35, 87 ವರ್ಷ) ಮಹಿಳೆಯರು. ಇವರೆಲ್ಲರೂ ಉಡುಪಿ ತಾಲೂಕಿನವರು. ಆರು ಮಂದಿ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಒಬ್ಬರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಮೃತರಲ್ಲಿ ಒಬ್ಬರು 13ರಂದು, ನಾಲ್ವರು ಶುಕ್ರವಾರ ಹಾಗೂ ಇಬ್ಬರು ಇಂದು ನಿಧನರಾದರು. ಎಲ್ಲರೂ ಕೋವಿಡ್ ರೋಗದ ಲಕ್ಷಣಗಳೊಂದಿಗೆ ತೀವ್ರ ಉಸಿರಾಟ ತೊಂದರೆ ಹಾಗೂ ನ್ಯುಮೋನಿಯಾದಿಂದ ಬಳಲುತಿದ್ದರು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಪಾಸಿಟಿವ್ ಬಂದ 1146 ಮಂದಿಯಲ್ಲಿ 591 ಮಂದಿ ಪುರುಷರು ಹಾಗೂ 555 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 636, ಕುಂದಾಪುರ ತಾಲೂಕಿನ 246 ಹಾಗೂ ಕಾರ್ಕಳ ತಾಲೂಕಿನ 255 ಮಂದಿ ಇದ್ದು, ಉಳಿದ 9 ಮಂದಿ ಹೊರಜಿಲ್ಲೆಗಳಿಂದ ಆಗಮಿಸಿದವರು.

ಶುಕ್ರವಾರ 1496 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 38,471 ಕ್ಕೇರಿದೆ. ನಿನ್ನೆ ಜಿಲ್ಲೆಯ 2902 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿ ದ್ದಾರೆ. ಇಂದಿನ 1146 ಮಂದಿ ಸೇರಿ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 45,994 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,45,389 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

6742 ಮಂದಿಗೆ ಲಸಿಕೆ

ಜಿಲ್ಲೆಯಲ್ಲಿ ಇಂದು ಒಟ್ಟು 6742 ಮಂದಿಗೆ ಕೋವಿಡ್ ವಿರುದ್ಧದ ಲಸಿಕೆ ಯನ್ನು ವಿತರಿಸಲಾಯಿತು. ಇದರಲ್ಲಿ 61 ಮಂದಿ ಮೊದಲ ಡೋಸ್‌ನ್ನು ಪಡೆದರೆ 6681 ಮಂದಿ ಎರಡನೇ ಡೋಸ್ ಸ್ವೀಕರಿಸಿದರು ಎಂದು ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದರು.

45ವರ್ಷಕ್ಕಿಂತ ಮೇಲಿನ ಪ್ರಾಯದ 43 ಮಂದಿ ಮೊದಲ ಡೋಸ್‌ನ್ನೂ 6347 ಮಂದಿ ಎರಡನೇ ಡೋಸ್‌ನ್ನು ಪಡೆದರು. 275 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 77 ಮಂದಿ ಕೊರೋನ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆಯನ್ನು ಸ್ವೀಕರಿಸಿದರು ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X