Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ನಂತರ ಕಪ್ಪು ಶಿಲೀಂಧ್ರ...

ಕೋವಿಡ್ ನಂತರ ಕಪ್ಪು ಶಿಲೀಂಧ್ರ ಪ್ರಕರಣಗಳು ಹೆಚ್ಚುತ್ತಿವೆ:ಏಮ್ಸ್ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ15 May 2021 10:42 PM IST
share

  ಹೊಸದಿಲ್ಲಿ,ಮೇ 15: ಮ್ಯುಕರ್ಮೈಕೊಸಿಸ್ ಎಂದು ಕರೆಯಲಾಗುವ ಕಪ್ಪು ಶಿಲೀಂಧ್ರ ಸೋಂಕು ಹೊಸದೇನಲ್ಲ,ಅದು ಕೋವಿಡ್ಗೆ ಮೊದಲೂ ಇತ್ತು. ಆದರೆ ಕೋವಿಡ್-19 ಮತ್ತು ಅದರ ಚಿಕಿತ್ಸೆಯಿಂದಾಗಿ ಪ್ರಕರಣಗಳ ಸಂಖ್ಯೆಯಲ್ಲಿ ಏಕಾಏಕಿ ಹೆಚ್ಚಳವಾಗಿದೆ ಎಂದು ಏಮ್ಸ್ ಮುಖ್ಯಸ್ಥ ಡಾ.ರಣದೀಪ ಗುಲೆರಿಯಾ ಅವರು ಶನಿವಾರ ಇಲ್ಲಿ ತಿಳಿಸಿದರು.

ಈ ಶಿಲೀಂಧ್ರದ ಬೀಜಾಣುಗಳು ಗಾಳಿಯಲ್ಲಿ,ಮಣ್ಣಿನಲ್ಲಿ ಮತ್ತು ಕೆಲವೊಮ್ಮೆ ಆಹಾರದಲ್ಲಿಯೂ ಇರುತ್ತವೆ,ಆದರೆ ಅವುಗಳ ಉಗ್ರತೆ ಕಡಿಮೆಯಿರುತ್ತದೆ ಎಂದು ಅವರು,ಹೀಗಾಗಿ ಮಾಸ್ಕ್ಗಳನ್ನು,ವಿಶೇಷವಾಗಿ ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿದಾಗ ಧರಿಸುವುದು ತುಂಬ ಮುಖ್ಯವಾಗಿದೆ ಎಂದರು. ದಿಲ್ಲಿಯ ಏಮ್ಸ್ನಲ್ಲಿ 23 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು,ಈ ಪೈಕಿ 20 ರೋಗಿಗಳಲ್ಲಿ ಈಗಲೂ ಕೋವಿಡ್-19 ಸೋಂಕು ಇದೆ ಎಂದು ತಿಳಿಸಿದರು.
ಕೆಲವು ರಾಜ್ಯಗಳಲ್ಲಿ 400ರಿಂದ 500 ಕಪ್ಪು ಶಿಲೀಂಧ್ರ ಪ್ರಕರಣಗಳು ದಾಖಲಾಗಿವೆ ಎಂದು ಅವರು ಸೋಂಕನ್ನು ನಿಯಂತ್ರಿಸಲು ಹೆಚ್ಚಿನ ಗಮನ ನೀಡುವಂತೆ ಆಸ್ಪತ್ರೆಗಳನ್ನು ಆಗ್ರಹಿಸಿದರು. ಸೆಕೆಂಡರಿ ಹಂತದ ಶಿಲೀಂಧ್ರ ಸೋಂಕು ಹೆಚ್ಚು ಅನಾರೋಗ್ಯ ಮತ್ತು ಸಾವುಗಳನ್ನುಂಟು ಮಾಡುತ್ತದೆ ಎಂದರು.
2003ರಲ್ಲಿ ಸಾರ್ಸ್ ಸಾಂಕ್ರಾಮಿಕ ಭುಗಿಲೆದ್ದಾಗಲೂ ಕಪ್ಪು ಶಿಲೀಂಧ್ರ ಸೋಂಕು ವರದಿಯಾಗಿತ್ತು ಎಂದ ಅವರು,ಕೋವಿಡ್ ಸೋಂಕು,ಮಧುಮೇಹ ಮತ್ತು ಕೋವಿಡ್ ಚಿಕಿತ್ಸೆ ಸಂದರ್ಭ ಸ್ಟಿರಾಯ್ಡಿಗಳ ದುರ್ಬಳಕೆ ಸೋಂಕಿನ ಹೆಚ್ಚಳಕ್ಕೆ ಕಾರಣವಾಗಿವೆ ಎಂದರು.
ಕೋವಿಡ್ಗಿಂತ ಮೊದಲು ಈ ಸೋಂಕು ಅನಿಯಂತ್ರಿತ ರಕ್ತದೊತ್ತಡ ಮಟ್ಟಗಳೊಂದಿಗೆ ಮಧುಮೇಹ ರೋಗಿಗಳಲ್ಲಿ ಅಥವಾ ಕಿಮೊಥೆರಪಿಗೊಳಗಾದವರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿತ್ತು. ಆದರೆ ಕೋವಿಡ್ನಿಂದಾಗಿ ಈ ಸೋಂಕು ಈಗ ಸಾಮಾನ್ಯವಾಗಿದೆ ಎಂದರು.
ಸೋಂಕಿನಲ್ಲಿ ಎರಡು ವಿಧಗಳಿವೆ. ಒಂದು ಮುಖ,ಮೂಗು ಮತ್ತು ಮಿದುಳಿನ ಭಾಗಗಳನ್ನು ಬಾಧಿಸುತ್ತದೆ ಮತ್ತು ಇನ್ನೊಂದು ಶ್ವಾಸಕೋಶಗಳನ್ನು ಸೋಂಕಿಗೆ ಗುರಿಯಾಗಿಸುತ್ತದೆ. ಮುನ್ನೆಚ್ಚರಿಕೆ ಈ ರೋಗವನ್ನು ತಡೆಯುವಲ್ಲಿ ಮುಖ್ಯವಾಗಿದೆ ಎಂದು ಗುಲೆರಿಯಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X