Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಪರೀಕ್ಷೆ, ಸೋಂಕಿತರ ಸಾವಿನ...

ಕೊರೋನ ಪರೀಕ್ಷೆ, ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 May 2021 11:00 AM IST
share
ಕೊರೋನ ಪರೀಕ್ಷೆ, ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು: ಕೊರೋನ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ವಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಅವರು ಪತ್ರ ಬರೆದಿದ್ದು ಮುಖ್ಯಾಂಶಗಳು ಹೀಗಿದೆ: 

ಕಳೆದ ಕೆಲವು ದಿನಗಳಿಂದ ಮುಖ್ಯ ಮಂತ್ರಿಗಳು ರಾಜ್ಯದಲ್ಲಿ ಕೊರೋನ ಸೋಂಕು ಕಡಿಮೆಯಾಗುತ್ತಿದೆ ಎಂದು ಮಾತನಾಡುತ್ತಿದ್ದಾರೆ. ತಜ್ಞರ ಪ್ರಕಾರ ವೈರಸ್ಸಿನ ಅಲೆ ಕಡಿಮೆಯಾಗುವುದೆಂದರೆ ಟೆಸ್ಟುಗಳನ್ನು ನಡೆಸಿದಾಗ ಪಾಸಿಟಿವಿಟಿ ದರ ಶೇ. 5 ಕ್ಕಿಂತ ಕಡಿಮೆಯಾಗಬೇಕು. ವಾಸ್ತವದಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವುದರ ಬದಲು ಹೆಚ್ಚಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಹಾಸನ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮುಂತಾದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ 50 ಕ್ಕಿಂತ ಹೆಚ್ಚಿಗೆ ಇದೆ. ಇನ್ನುಳಿದ ಜಿಲ್ಲೆಗಳಲ್ಲೂ  ಪಾಸಿಟಿವಿಟಿ ದರ ಶೇ. 35 ರ ಆಸುಪಾಸಿನಲ್ಲೇ ಇದೆ.  20 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳು ಒಂದೆರಡಷ್ಟೆ ಹೀಗಿರುವಾಗ ಸೋಂಕು ಕಡಿಮೆಯಾಗುತ್ತಿದೆ ಎಂದರೆ ಸುಳ್ಳು ಹೇಳಲಾಗುತ್ತಿದೆ ಎಂದು ಅರ್ಥ.

ಕಡಿಮೆಯಾದ ಟೆಸ್ಟುಗಳು

ಟೆಸ್ಟುಗಳು, ಸಾವುಗಳು, ಚಿಕಿತ್ಸೆಗಳು ಎಲ್ಲದರಲ್ಲೂ ಭೀಕರ ಸುಳ್ಳುಗಳನ್ನು ಹೇಳುತ್ತಾ ಬರಲಾಗುತ್ತಿದೆ. ಟೆಸ್ಟುಗಳ ವಿಚಾರವನ್ನೇ ನೋಡಿದರೂ ಕೂಡ  ಏಪ್ರಿಲ್ ತಿಂಗಳ ಕಡೆಯ ವಾರದಲ್ಲಿ ಪ್ರತಿ ದಿನ ಸರಾಸರಿ 1.75 ಲಕ್ಷ ಟೆಸ್ಟುಗಳನ್ನು ಮಾಡಲಾಗುತ್ತಿತ್ತು. ಈಗ ಶೇ 30 ರಷ್ಟು ಕಡಿಮೆಯಾಗಿ ದಿನಕ್ಕೆ ಸರಾಸರಿ  1.15 ಲಕ್ಷದಿಂದ 1.24 ಲಕ್ಷಕ್ಕೆ ಇಳಿಕೆಯಾಗಿದೆ. 6-5-2021 ರಂದು 2,64,441 ಟೆಸ್ಟುಗಳನ್ನು ಮಾಡಲಾಗಿದ್ದರೆ 11-5-2021 ರಂದು ಕೇವಲ 1,16,238 ಟೆಸ್ಟುಗಳನ್ನು ಮಾಡಿದ್ದಾರೆ.

ಇದರ ಜೊತೆಗೆ ಲಸಿಕೆ ಹಾಕಿಸಿಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡದೆ ಅಲ್ಲೂ ಕಿ.ಮೀ ಗಟ್ಟಲೆ ಕ್ಯೂ ನಿಲ್ಲಿಸುವುದು, ಪಡಿತರ ಪಡೆಯಲು ಅಂಗಡಿಗಳ ಮುಂದೆ ಕ್ಯೂ ನಿಲ್ಲಿಸುವುದೂ ನಡೆಯುತ್ತಿದೆ. ಈ ರೀತಿಯ ಅವ್ಯವಸ್ಥೆಗಳಿಂದ ಕೊರೋನಾವನ್ನು ನಿಯಂತ್ರಿಸಲು ಸಾಧ್ಯವೇ? ಸರ್ಕಾರ ಈ ಎಲ್ಲ ತಪ್ಪುಗಳನ್ನು ಮುಚ್ಚಿಕೊಳ್ಳಲು ಟೆಸ್ಟುಗಳನ್ನೇ ಕಡಿಮೆ ಮಾಡಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಸುಳ್ಳುಗಳನ್ನು ಹೇಳಲಾಗುತ್ತಿದೆ. 

ವ್ಯಾಕ್ಸಿನ್ ಕುರಿತ ಯೋಜನೆ ಏನು?

ವ್ಯಾಕ್ಸಿನ್ ಹಾಕುವುದರ ವಿಚಾರದಲ್ಲೂ ಹೀಗೇ ಆಗಿದೆ. ಲಸಿಕೆಗಳ ಪೇಟೆಂಟನ್ನು ರದ್ದು ಪಡಿಸಿ ಹೆಚ್ಚು ಕಂಪೆನಿಗಳಿಗೆ ಉತ್ಪಾದನೆ ಮಾಡಲು ಅವಕಾಶ ಮಾಡಿಕೊಡಿ ಎಂದು ಸುಮಾರು ದಿನಗಳಿಂದ ಒತ್ತಾಯಿಸುತ್ತಿದ್ದೆವು.

ಈ ಕುರಿತು ನಾನು ಪ್ರಧಾನ ಮಂತ್ರಿಗಳಿಗೆ ಪತ್ರವನ್ನೂ ಬರೆದಿದ್ದೆ. ಇಷ್ಟೆಲ್ಲ ಮಾಡಿದ ಮೇಲೆ ಈಗ ನಿಧಾನಕ್ಕೆ ಸರ್ಕಾರದ ಅಧೀನದ ಮೂರು ಕಂಪೆನಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ತಯಾರಿಸಲು ಅವಕಾಶ ನೀಡಲಾಗಿದೆ. ನನ್ನ ಪ್ರಕಾರ ಪ್ರತಿ ರಾಜ್ಯಕ್ಕೆ ಕನಿಷ್ಟ ಒಂದೊಂದು ಕಂಪೆನಿಗಳಿಗೆ ಉತ್ಪಾದನೆ ಮಾಡಲು ಅವಕಾಶ ನೀಡಬೇಕು. ಅಮೆರಿಕದಲ್ಲಿ ಈಗಾಗಲೇ 12 ವರ್ಷ ತುಂಬಿದ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಕೊರೋನಾದ ಮೂರನೇ ಅಲೆಯಲ್ಲಿ ಹೆಚ್ಚು ಬಾಧಿತರಾಗುವವರು ಮಕ್ಕಳೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪೋಷಕರು ಹೆಚ್ಚು ಆತಂಕಕ್ಕೆ ಒಳಗಾಗುತ್ತಿದ್ದಾರೆ. ನಮ್ಮಲ್ಲೂ ಮುಂದಿನ ಎರಡು ಮೂರು ತಿಂಗಳಲ್ಲಿ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿ ಮುಗಿಸಬೇಕು.

‘ಕನಿಷ್ಟ ಸರ್ಕಾರ ಗರಿಷ್ಟ ಆಡಳಿತ’ ಎಂದು ಬುರುಡೆ ಬಿಟ್ಟು ಜನರನ್ನು ಯಾಮಾರಿಸಿದ ಮೋದಿಯವರ ಸರ್ಕಾರ ಮತ್ತು ಅವರ ಪಟಾಲಮ್ಮಿಗೆ ಬಹುಶಃ ಈಗಲಾದರೂ ಅರ್ಥವಾಗಬೇಕು ;  ಸರ್ಕಾರದ ಅಧೀನದಲ್ಲಿರುವ ಕಂಪೆನಿ, ಕಾರ್ಖಾನೆಗಳು ಮಾತ್ರ ಇಂತಹ ತುರ್ತು ಪರಿಸ್ಥಿತಿಯಲ್ಲಿ ದೇಶದ ರಕ್ಷಣೆಗೆ ನಿಲ್ಲುತ್ತವೆ ಎಂದು. ಸಾರಾ ಸಗಟಾಗಿ ಸರ್ಕಾರದ ಅಧೀನದಲ್ಲಿದ್ದ ಕಾರ್ಖಾನೆ, ಕಂಪೆನಿ, ಸಂಸ್ಥೆಗಳನ್ನು ಕಾರ್ಪೊರೇಟ್ ಧಣಿಗಳಿಗೆ ಮಾರಾಟ ಮಾಡಿ ಅದರ ಮೂಲಕ ಜನರ ಸಂಪತ್ತನ್ನೆಲ್ಲ ದೋಚುವ ಭೀಕರ ಭ್ಟಷ್ಟಾಚಾರಕ್ಕೆ ಅವಕಾಶ ಕೊಡುವ ಕೇಂದ್ರ ಸರ್ಕಾರಕ್ಕೆ ಕೇವಲ ಒಬ್ಬನೇ ಒಬ್ಬ ವ್ಯಾಕ್ಸಿನ್ ತಯಾರಕನನ್ನು ನಿಯಂತ್ರಿಸಲಾಗದ ದುಸ್ಥಿತಿ ಬಂದೊದಗಿದೆ.‌‌ ಸಾರ್ವಜನಿಕ ಕಂಪೆನಿಗಳನ್ನು ಯಾವ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಒತ್ತಾಯಿಸುವ ಠರಾವನ್ನು  ಮಾಡಿ ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು. 

2019ಕ್ಕೆ ಹೋಲಿಸಿದರೆ  2020ರ ಡಿಸೆಂಬರ್ 31 ರವರೆಗೆ  ಹೃದಯಾಘಾತಗಳಿಂದ 38583, ವಯಸ್ಸಿನ ಕಾರಣಗಳಿಂದ 28647, ಪ್ಯಾರಾಲಿಸಿಸ್ ನಿಂದ 4262ಕ್ಕೂ ಹೆಚ್ಚು ಜನ ಮರಣ ಹೊಂದಿದ್ದಾರೆ. ಕೋವಿಡ್ ನಿಂದ ಮರಣ ಹೊಂದಿದವರು  ಡಿಸೆಂಬರ್ ವರೆಗೆ 12090 ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಆದರೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಮಾಹಿತಿಯ ಪ್ರಕಾರ 22320.  ಈ ನಾಲ್ಕು ಕಾಯಿಲೆಗಳಿಂದಲೇ 2019 ಕ್ಕೆ ಹೋಲಿಸಿದರೆ 93812ಕ್ಕೂ ಹೆಚ್ಚು ಜನ ಮರಣ ಹೊಂದಿದ್ದಾರೆ. ಇವೆಲ್ಲವೂ ಕೊರೋನ ಸಂಬಂಧಿತ ಸಾವುಗಳು ಎಂಬುದರಲ್ಲಿ ಯಾವ ಅನುಮಾನಗಳೂ ಉಳಿದಿಲ್ಲ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹೃದಯಾಘಾತದಿಂದ ಮರಣ ಹೊಂದುತ್ತಿರುವವಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಕೊರೋನ ಇರುವುದು ದೃಢಪಟ್ಟಿದೆ ಎಂದು ಇತ್ತೀಚೆಗೆ ಹೇಳಿದ್ದಾರೆ. ಇದೇ ಮಾತನ್ನೇ ನಾನು ಪದೇ ಪದೇ ಹೇಳುತ್ತಾ ಬಂದಿದ್ದೆ . ಸರ್ಕಾರ ನನ್ನ ಮಾತುಗಳಿಗೆ ಉತ್ತರಿಸುವ ಧೈರ್ಯವನ್ನು ಇದುವರೆಗೂ ಮಾಡಿಲ್ಲ. 

ಇಷ್ಟೆಲ್ಲದರ ನಡುವೆ ಸರ್ಕಾರದಲ್ಲಿನ ಅನೇಕರು, ಬಿಜೆಪಿಯ ಮುಖಂಡರುಗಳು ಜಗತ್ತಿನ ದೇಶಗಳಿಗಿಂತ ನಮ್ಮಲ್ಲಿ ಕಡಿಮೆ ಸಾವುಗಳಾಗಿವೆ. ಇದು ಮೋದಿಯವರ ಸಾಧನೆ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಬಿಜೆಪಿಯು ಸುಳ್ಳು ಹೇಳುವುದಕ್ಕಾಗಿಯೇ ಸೋಷಿಯಲ್ ಮೀಡಿಯಾ ಎಂಬ ಕಾರ್ಖಾನೆಯನ್ನು ತೆರೆದು ಕೂತಿದೆ. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಧೈರ್ಯವಿದ್ದರೆ ಪ್ರತಿ ತಿಂಗಳು ಸಂಭವಿಸಿದ ಮರಣಗಳನ್ನು ಮತ್ತು ವಿತರಿಸಿದ ಮರಣ ಪ್ರಮಾಣ ಪತ್ರಗಳ ವಿವರಗಳನ್ನು ಪ್ರಕಟಿಸಬೇಕು. 

ಈ ಎಲ್ಲ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಟೆಸ್ಟುಗಳನ್ನು ಹೆಚ್ಚಿಸಬೇಕು. ಗರಿಷ್ಟ 24 ಗಂಟೆಗಳ ಒಳಗೆ ಫಲಿತಾಂಶ ಸಿಗುವಂತೆ ಮಾಡಬೇಕು. ಮುಂಬೈ ಮಾದರಿಯಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪ್ರತ್ಯೇಕಿಸಿ ಆರೈಕೆ ಮಾಡಬೇಕು. ಮಕ್ಕಳಿಗೂ ಲಸಿಕೆ ಹಾಕಲು ಸಮರೋಪಾದಿಯಲ್ಲಿ ಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕು. ಕೋವಿಡ್‍ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಿ, ಪ್ರತಿ ತಿಂಗಳು ನೀಡಿದ ಮರಣ ಪ್ರಮಾಣಗಳ ವಿವರಗಳ ಕುರಿತು ದಾಖಲೆ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತೇನೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X