Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸೆ ಕಾರ್ಮಿಕರ ಸಮೀಕ್ಷೆ ಸ್ಥಗಿತಕ್ಕೆ...

ವಲಸೆ ಕಾರ್ಮಿಕರ ಸಮೀಕ್ಷೆ ಸ್ಥಗಿತಕ್ಕೆ ಕೋವಿಡ್ ಎರಡನೇ ಅಲೆಯ ಕಾರಣ ನೀಡಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ16 May 2021 4:47 PM IST
share
ವಲಸೆ ಕಾರ್ಮಿಕರ ಸಮೀಕ್ಷೆ ಸ್ಥಗಿತಕ್ಕೆ ಕೋವಿಡ್ ಎರಡನೇ ಅಲೆಯ ಕಾರಣ ನೀಡಿದ ಸರಕಾರ

ಹೊಸದಿಲ್ಲಿ,ಮೇ 16: ಸಾಂಕ್ರಾಮಿಕದಿಂದಾಗಿ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರ ಸಾಮಾಜಿಕ-ಆರ್ಥಿಕ ಸ್ಥಿತಿಗಳ ಕುರಿತು ಸಮೀಕ್ಷೆ ಸೇರಿದಂತೆ ಐದು ರಾಷ್ಟ್ರೀಯ ಸಮೀಕ್ಷೆಗಳನ್ನು ಸ್ಥಗಿತಗೊಳಿಸಿರುವ ಸರಕಾರವು,ಕೋವಿಡ್-19 ಎರಡನೇ ಅಲೆಯ ಕಾರಣವನ್ನು ಉಲ್ಲೇಖಿಸಿದೆ ಎಂದು telegraphindia.com ಮಾಡಿದೆ.

ಆದರೆ ವಲಸೆ ಕಾರ್ಮಿಕರಿಗೆ ಸಹಾಯವನ್ನು ವಿಳಂಬಿಸಲು ಇದೊಂದು ನೆಪವಾಗಬಾರದು ಎಂದಿರುವ ಕಾರ್ಮಿಕರ ಪ್ರತಿನಿಧಿಗಳು, ದುಡಿಯುವ ವರ್ಗದಲ್ಲಿಯ ದುರ್ಬಲ ಗುಂಪುಗಳ ಕುರಿತು ಈಗಾಗಲೇ ಬಹಳಷ್ಟು ದತ್ತಾಂಶಗಳು ಲಭ್ಯವಿವೆ ಮತ್ತು ಈ ಗುಂಪುಗಳಿಗೆ ತಕ್ಷಣ ಪರಿಹಾರದ ಅಗತ್ಯವಿದೆ ಎನ್ನುವುದನ್ನು ಇವು ಸ್ಪಷ್ಟಪಡಿಸಿವೆ ಎಂದು ಒತ್ತಿ ಹೇಳಿದ್ದಾರೆ.

ಕಾರ್ಮಿಕ ಸಚಿವಾಲಯದ ಕಾರ್ಮಿಕ ಘಟಕವು ಎಪ್ರಿಲ್ನಿಂದ ಈ ಸಮೀಕ್ಷೆಯನ್ನು ಆರಂಭಿಸಬೇಕಿತ್ತು.

ಜನರು ಸಮೀಕ್ಷಕರಿಗೆ ಸ್ಪಂದಿಸುವುದಿಲ್ಲ,ಹೀಗಾಗಿ ಸದ್ಯದ ಮಟ್ಟಿಗೆ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ವಿರಾಮ ನೀಡಲಾಗಿದೆ. ಪರಿಸ್ಥಿತಿಯು ಸುಧಾರಿಸಿದ ಬಳಿಕ ಸಮೀಕ್ಷೆ ಕಾರ್ಯವು ಆರಂಭಗೊಳ್ಳುತ್ತದೆ ಎಂದು ಕಾರ್ಮಿಕ ಘಟಕದ ಮಹಾ ನಿರ್ದೇಶಕ ಡಿ.ಪಿ.ಎಸ್.ನೇಗಿ ತಿಳಿಸಿದರು.

ಎರಡು ಸಮೀಕ್ಷೆಗಳು ಅನುಕ್ರಮವಾಗಿ ವಲಸೆ ಕಾರ್ಮಿಕರು ಮತ್ತು ಮನೆಗೆಲಸದ ಕಾರ್ಮಿಕರ ಸಾಮಾಜಿಕ-ಆರ್ಥಿಕ ಸ್ಥಿತಿಗಳ ವೌಲ್ಯಮಾಪನಕ್ಕಾಗಿದ್ದರೆ,ಇತರ ಮೂರು ಸಮೀಕ್ಷೆಗಳು ವೃತ್ತಿಪರರಿಂದ ಉದ್ಯೋಗ ಸೃಷ್ಟಿಯ ಅಧ್ಯಯನ,ಸಾರಿಗೆ ಕ್ಷೇತ್ರ ಹಾಗೂ ಎಲ್ಲ ನೋಂದಾಯಿತ ಮತ್ತು ನೋದಾಯಿತವಲ್ಲದ ಸಂಸ್ಥೆಗಳಿಗೆ ಸಂಬಂಧಿಸಿವೆ. ವಲಸೆ ಕಾರ್ಮಿಕರ ಕುರಿತ ಮತ್ತು ಸಂಸ್ಥೆಗಳಿಗೆ ಸಂಬಂಧಿಸಿದ ಸಮೀಕ್ಷೆ ಎ.1ರಿಂದ ಮತ್ತು ಇತರ ಸಮೀಕ್ಷೆಗಳು ಎಪ್ರಿಲ್ ಮೂರನೇ ವಾರದಿಂದ ಹಂತಹಂತವಾಗಿ ಆರಂಭಗೊಳ್ಳಬೇಕಿತ್ತು ಮತ್ತು ಎಲ್ಲ ಸಮೀಕ್ಷೆಗಳು ಅಕ್ಟೋಬರ್ನೊಳಗೆ ಪೂರ್ಣಗೊಳ್ಳಬೇಕಿತ್ತು.

ದುಡಿಯುವ ವರ್ಗಗಳ ಸಮೀಕ್ಷೆಗಾಗಿ ಕಳೆದೊಂದು ವರ್ಷದಲ್ಲಿ ಸರಕಾರದ ಬಳಿ ಸಾಕಷ್ಟು ಸಮಯಾವಕಾಶವಿತ್ತು. ಕಳೆದ ವರ್ಷದ ಮಾ.25ರಂದು ಲಾಕ್ಡೌನ್ ಹೇರಿದಾಗ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದ ಬಳಿಕ ಸರಕಾರವು ಕ್ವಾರಂಟೈನ್ ಕೇಂದ್ರಗಳಿಂದ ಸುಲಭವಾಗಿ ಮಾಹಿತಿಗಳನ್ನು ಸಂಗ್ರಹಿಸಬಹುದಿತ್ತು ಮತ್ತು ವಲಸೆ ಕಾರ್ಮಿಕರ ರಿಜಿಸ್ಟ್ರಿಯನ್ನು ಸಿದ್ಧಪಡಿಸಬಹುದಿತ್ತು ಎಂದು ಹೇಳಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಎ.ಆರ್.ಸಿಂಧು ಅವರು,ಆದರೆ ಸರಕಾರವು ಯಾವುದೇ ಆಸಕ್ತಿಯನ್ನು ತೋರಿಸಲಿಲ್ಲ. ವಲಸೆ ಕಾರ್ಮಿಕರು ಮತ್ತು ಅಸಂಘಟಿತ ಕ್ಷೇತ್ರಗಳ ಕಾರ್ಮಿಕರಿಗಾಗಿ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ತಕ್ಷಣವೇ ನೆರವಿಗಾಗಿ ನಾವು ಆಗ್ರಹಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X