Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೌಲಭ್ಯಗಳ ಕೊರತೆಯಿಂದ ಮರದಲ್ಲೇ 11 ದಿನ...

ಸೌಲಭ್ಯಗಳ ಕೊರತೆಯಿಂದ ಮರದಲ್ಲೇ 11 ದಿನ ಐಸೋಲೇಷನ್ ಗೆ ಒಳಗಾದ ವಿದ್ಯಾರ್ಥಿ‌

ವಾರ್ತಾಭಾರತಿವಾರ್ತಾಭಾರತಿ16 May 2021 10:04 PM IST
share
ಸೌಲಭ್ಯಗಳ ಕೊರತೆಯಿಂದ ಮರದಲ್ಲೇ 11 ದಿನ ಐಸೋಲೇಷನ್ ಗೆ ಒಳಗಾದ ವಿದ್ಯಾರ್ಥಿ‌

ಹೈದರಾಬಾದ್, ಮೇ 16: ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತೆಲಂಗಾಣದ ನಲಂಗೊಂಡ ಜಿಲ್ಲೆಯ ಜನರು ಕೇವಲ ಆರೋಗ್ಯ ಕೇಂದ್ರ, ಚಿಕಿತ್ಸೆ ಹಾಗೂ ಲಸಿಕೆ ಲಭ್ಯತೆಯ ಸವಾಲನ್ನು ಮಾತ್ರ ಎದುರಿಸುತ್ತಿಲ್ಲ. ಬದಲಾಗಿ, ಮನೆಯಲ್ಲಿ ಐಸೋಲೇಶನ್ಗೆ ಒಳಗಾಗಲು ಸ್ಥಳದ ಅಭಾವದ ಸವಾಲನ್ನು ಕೂಡ ಎದುರಿಸುತ್ತಿದ್ದಾರೆ.

ಇಲ್ಲಿನ ಹಲವು ಕುಟುಂಬಗಳು ಅಡುಗು ಕೋಣೆ ಸೇರಿದಂತೆ ಒಂದೇ ಕೊಠಡಿಯಲ್ಲಿ ಜೀವಿಸುತ್ತಿದ್ದಾರೆ. ಇಲ್ಲಿ ಕೊರೋನ ಸೋಂಕಿಗೆ ಒಳಗಾದರೆ ಐಸೋಲೇಷನ್ಗೆ ಒಳಗಾಗಲು ಯಾವುದೇ ಸೌಲಭ್ಯ ಇಲ್ಲ.

ಇದನ್ನು ಅರಿತು 18 ವರ್ಷದ ವಿದ್ಯಾರ್ಥಿ ಶಿವ ತನ್ನ ನಿವಾಸದ ಕಂಪೌಂಡ್ನಲ್ಲಿರುವ ಮರದ ಕೊಂಬೆಗಳ ಮೇಲೆ ಬಿದಿರಿನಿಂದ ಕೋವಿಡ್ ‘ವಾರ್ಡ್’ ನಿರ್ಮಿಸಿದ್ದಾನೆ ಹಾಗೂ ಅಲ್ಲೇ 11 ದಿನಗಳ ಕಾಲ ಐಸೋಲೇಷನ್ಗೆ ಒಳಗಾಗಿದ್ದಾನೆ.

ನಲಗೊಂಡ ಜಿಲ್ಲೆಯ ಬುಡಕಟ್ಟು ಕುಗ್ರಾಮ ಕೊತ್ತನಂದಿಕೊಂಡದಲ್ಲಿ ವಾಸಿಸುತಿರುವ ಶಿವ ಅವರಿಗೆ ಮೇ 4ರಂದು ಕೊರೋನ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಇರುವಂತೆ ಹಾಗೂ ಕುಟುಂಬದಿಂದ ಪ್ರತ್ಯೇಕವಾಗಿ ಇರುವಂತೆ ಗ್ರಾಮದ ಸ್ವಯಂ ಸೇವಕರು ಶಿವನಿಗೆ ಸೂಚಿಸಿದ್ದರು. ಆದರೆ, ಮನೆಯಲ್ಲಿ ಅಥವಾ ಗ್ರಾಮದಲ್ಲಿ ಐಸೋಲೇಶನ್ಗೆ ಒಳಗಾಗಲು ಯಾವುದೇ ವ್ಯವಸ್ಥೆ ಇರಲಿಲ್ಲ. ಆದುದರಿಂದ ಶಿವ ಮರದ ಮೇಲೆ ಐಸೋಲೇಶನ್ ವ್ಯವಸ್ಥೆ ರೂಪಿಸಲು ನಿರ್ಧರಿಸಿದರು.

ಕೊತ್ತನಂದಿಕೊಂಡದಲ್ಲಿ 350 ಕುಟುಂಬಗಳು ವಾಸಿಸುತ್ತಿವೆ. ಜಿಲ್ಲೆಯ ಅಡವಿದೇವುಲಪಲ್ಲಿ ಮಂಡಳದ ಅಡಿಯಲ್ಲಿ ಬರುವ ಹಲವು ಬುಡಕಟ್ಟು ಕುಗ್ರಾಮಗಳಲ್ಲಿ ಇದು ಕೂಡ ಒಂದು. ಈ ಗ್ರಾಮಕ್ಕೆ ಸಮೀಪ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ 5 ಕಿ.ಮೀ. ದೂರದಲ್ಲಿದೆ. ವೈದ್ಯಕೀಯ ತುರ್ತು ಸಂದರ್ಭ ಇಲ್ಲಿನ ಜನರು ಆಸ್ಪತ್ರೆಗೆ ಇಲ್ಲಿಂದ ಸುಮಾರು 30 ಕಿ.ಮೀ. ಪ್ರಯಾಣಿಸಬೇಕು.

ರಾಜ್ಯದ ಗ್ರಾಮೀಣ ಭಾಗದಲ್ಲಿ ಕೂಡ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೇ 13ರಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಾಸ್ಟೆಲ್ ಅನ್ನು ಐಸೋಲೇಶನ್ ಕೇಂದ್ರವಾಗಿ ಪರಿವರ್ತಿಸಿತ್ತು.

‘‘ಇಲ್ಲಿ ಐಸೋಲೇಶನ್ ಕೇಂದ್ರಗಳಿಲ್ಲ. ಎರಡು ದಿನಗಳ ಹಿಂದೆ ಎಸ್ಟಿ ಹಾಸ್ಟೆಲ್ ಅನ್ನು ಐಸೋಲೇಶನ್ ಕೇಂದ್ರವಾಗಿ ಪರಿವರ್ತಿಸಲಾಯಿತು. ಇತರ ಗ್ರಾಮಗಳಲ್ಲಿ ಇಂತಹ ಕೇಂದ್ರಗಳು ಇವೆಯೇ ಎಂದು ನನಗೆ ತಿಳಿದಿಲ್ಲ. ನನಗೆ ಹಾಗೆ ಭಾವಿಸಲು ಸಾಧ್ಯವಿಲ್ಲ. ನಾನು ಇನ್ನೇನು ಮಾಡಬಹುದು?’’ ಎಂದು ಶಿವ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X