Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಚಂಡಮಾರುತದ ಅರ್ಭಟ : ಅಪಾರ...

ಭಟ್ಕಳದಲ್ಲಿ ಚಂಡಮಾರುತದ ಅರ್ಭಟ : ಅಪಾರ ಹಾನಿ

ವಾರ್ತಾಭಾರತಿವಾರ್ತಾಭಾರತಿ16 May 2021 10:39 PM IST
share
ಭಟ್ಕಳದಲ್ಲಿ ಚಂಡಮಾರುತದ ಅರ್ಭಟ : ಅಪಾರ ಹಾನಿ

ಭಟ್ಕಳ : ತಾಲ್ಲೂಕಿನಲ್ಲಿ ಕಳೆದೆರಡು ದಿನಗಳಲ್ಲಿ ಚಂಡಮಾರುತದ ಪರಿಣಾಮ ಮನೆಗಳು, ಮೀನುಗಾರಿಕೆ ಬೋಟುಗಳು ಮತ್ತು ಹೆಸ್ಕಾಂಗೆ ಹೆಚ್ಚಿನ ಹಾನಿ ಸಂಭವಿಸಿದೆ.

ಶಿರಾಲಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಮುಂದೆ ನಿಲ್ಲಿಸಲಾಗಿದ್ದ ಕಾರೊಂದರ ಮೇಲೆ ತೆಂಗಿನಮರ ಬಿದ್ದು ಜಖಂ ಆಗಿದೆ. ಬೇಂಗ್ರೆ ಮೂಡಶಿರಾಲಿಯ ಈರಮ್ಮ ನಾರಾಯಣ ನಾಯ್ಕ ಎನ್ನುವವರಿಗೆ ಸೇರಿದ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮುಂಡಳ್ಳಿಯ ಶನಿಯಾರ ನಾಯ್ಕ ಅವರ ಮನೆ ಮೇಲೆ ಮರಬಿದ್ದು ಮೇಲ್ಚಾವಣಿ ಕುಸಿದಿದೆ. ಮಾವಿನಕುರ್ವೆ ಬಂದರಿನಲ್ಲಿ ಶನಿವಾರ ಮತ್ತು ರವಿವಾರ ಬೆಳಿಗ್ಗೆಯ ಭಾರೀ ಗಾಳಿಗೆ ಲಂಗರು ಹಾಕಿದ್ದ ಬೋಟುಗಳು ಒಂದೊಕ್ಕೊಂದು ಡಿಕ್ಕಿಯಾಗಿ ಹಾನಿಗೊಂಡಿದೆ. ಸುಮಾರು 50ಕ್ಕೂ ಅಧಿಕ ಬೋಟುಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

ಪುರಸಭೆ, ಜಾಲಿ ಪಟ್ಟಣ ಪಂಚಾಯತ್ ಮತ್ತು ಹದಿನಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಚಂಡಮಾರುತಕ್ಕೆ ಸುಮಾರು 30 ಕ್ಕೂ ಅಧಿಕ ಮನೆಗಳಿಗೆ ಭಾಗಶ: ಹಾನಿಯಾಗಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಬಿರುಗಾಳಿಗೆ ಅಡಕೆ, ತೆಂಗು ಸೇರಿದಂತೆ ವಿವಿಧ ಮರಗಳು ಕಿತ್ತು ಬಿದ್ದಿದೆ. ಮುರ್ಡೇಶ್ವರದಲ್ಲಿ ತೌಕ್ಟೆ ಚಂಡಮಾರುತದ ಅಬ್ಬರಕ್ಕೆ  ಪ್ರವಾಸಿ ಮತ್ತು ಮೀನುಗಾರಿಕಾ ಬೋಟುಗಳು, ಆಟಿಕೆ ಸಾಮಗ್ರಿಗಳ ಅಂಗಡಿಗೆ ಹಾನಿಯಾಗಿದೆ. ತೀರದಲ್ಲಿರುವ ಹಲವು ಗೂಡಂಗಡಿ ಗಳಿಗೂ  ನೀರು ನುಗ್ಗಿದ್ದು,  ಕಡಲತೀರದಲ್ಲಿ ಪ್ರವಾಸಿಗರ ಮೇಲೆ ನಿಗಾ ಇಡಲು ಇರುವ ವೀಕ್ಷಣಾ ಗೋಪುರಕ್ಕೂ ಸಹ ಹಾನಿಯಾಗಿದೆ.

ರವಿವಾರ  ಬೆಳಗ್ಗೆ 10 ಗಂಟೆಯ ವರೆಗೂ ಜೋರಾಗಿ ಸುರಿದಿದ್ದ ಮಳೆ ನಂತರ ಬಿಡುವು ಪಡೆದುಕೊಂಡರೂ ಸಂಜೆ ವೇಳೆ ಮತ್ತೆ ಗಾಳಿಯೊಂದಿಗೆ ಮತ್ತೆ ಆರಂಭಗೊಂಡಿತ್ತು. ರವಿವಾರ ಬೆಳಗ್ಗೆ ವರೆಗೆ  163.8 ಮಿಮಿ ಮಳೆಯಾಗಿದೆ.

ಹೆಸ್ಕಾಂಗೆ 5.07 ಲಕ್ಷ ರೂ.ನಷ್ಟ

ಶನಿವಾರ ಮತ್ತು ರವಿವಾರದ ಬಿರುಗಾಳಿ ಸಹಿತ ಮಳೆಗೆ ತಾಲ್ಲೂಕಿನ ವಿವಿಧ ಕಡೆ 22 ವಿದ್ಯುತ್ ಕಂಬಗಳ ಮೇಲೆ ಮರಬಿದ್ದು ಹಾನಿಯಾದರೆ, 4 ಟ್ರಾನ್ಸಪೊರ್ಮರ್ ಸುಟ್ಟು ಹೋಗಿದ್ದು, ಒಟ್ಟೂ 5.07 ಲಕ್ಷ ರೂ. ನಷ್ಟ ಹಾನಿ ಸಂಭವಿಸಿದೆ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X