Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ...

ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಮಹಿಳೆಯರ ‘ಹರಾಜು’: ಕಾಂಗ್ರೆಸ್ ನಾಯಕಿಯಿಂದ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ16 May 2021 10:48 PM IST
share
ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಮಹಿಳೆಯರ ‘ಹರಾಜು’: ಕಾಂಗ್ರೆಸ್ ನಾಯಕಿಯಿಂದ ದೂರು ದಾಖಲು

ಹೊಸದಿಲ್ಲಿ, ಮೇ 16: ಮನೋರಂಜನೆಯ ರೂಪವಾಗಿ ಆನ್ಲೈನ್ನಲ್ಲಿ ಮುಸ್ಲಿಂ ಮಹಿಳೆಯರ ಹರಾಜಿನ ಪ್ರಹಸನಕ್ಕಾಗಿ ಬಲಪಂಥೀಯ ಬಳಕೆದಾರರಿಗೆ ಸೇರಿದ್ದೆನ್ನಲಾಗಿರುವ ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳು ತೀವ್ರ ಟೀಕೆಗೊಳಗಾಗಿವೆ. ಈ ಅಗ್ಗದ ಮನೋರಂಜನೆಯ ಬಲಿಪಶುಗಳಲ್ಲಿ ಒಬ್ಬರಾದ ಕಾಂಗ್ರೆಸ್ ನ ಸಾಮಾಜಿಕ ಮಾಧ್ಯಮ ರಾಷ್ಟ್ರೀಯ ಸಮನ್ವಯಕಾರರಾದ ಹಸೀಬಾ ಅಮೀನ ಅವರು ಆರೋಪಿಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಮೇ 13ರಂದು ‘ಲಿಬರಲ್ ಡೋಜ್ ಲೈವ್’ ಯೂಟ್ಯೂಬ್ ಚಾನೆಲ್ನಲ್ಲಿ ನೇರ ಪ್ರಸಾರದೊಂದಿಗೆ ಈ ವರ್ಚುವಲ್ ‘ಸ್ಫೋರ್ಟ್’ ಆರಂಭಗೊಂಡಿತ್ತು ಎಂದು ಅಮೀನ ಹೇಳಿದ್ದಾರೆ.
‌
‘ಈದ್ ವಿಶೇಷ’ವಾಗಿ ಪ್ರಾಯೋಜಿಸಲಾಗಿದ್ದ ಈ ಲೈವ್ ಕಾರ್ಯಕ್ರಮದಲ್ಲಿ ಪಾಕಿಸ್ತಾನಿ ಮಹಿಳೆಯರ ಚಿತ್ರಗಳನ್ನು ಬಳಸಲಾಗಿತ್ತು ಮತ್ತು ‘ಲಾಲಸೆ ತುಂಬಿದ ಕಣ್ಣುಗಳಿಂದ ಈ ಮಹಿಳೆಯರನ್ನು ಹಿಂಬಾಲಿಸುವಂತೆ ’ವೀಕ್ಷಕರನ್ನು ಆಹ್ವಾನಿಸಲಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳು ವ್ಯಕ್ತವಾದ ಬಳಿಕ ಈ ಲೈವ್ ಸ್ಟ್ರೀಮ್ ವೀಡಿಯೊವನ್ನು ಯೂ ಟ್ಯೂಬ್ನಲ್ಲಿ ಪ್ರೈವೇಟ್ ಆಗಿಸಲಾಗಿತ್ತು.
‌
ಈ ವರ್ಚುವಲ್ ‘ಹರಾಜು’ ಬಳಿಕ ಶುಕ್ರವಾರ ಬೆಳಗಿನ ಜಾವದಲ್ಲಿ ಟ್ವಿಟರ್ಗೆ ಹರಡಿತ್ತು. ಇದರಲ್ಲಿ ಭಾಗಿಯಾಗಿದ್ದವರು ಮುಸ್ಲಿಂ ಮಹಿಳೆಯರಿಗೆ ಅವಮಾನಕಾರಿಯಾದ ಶಬ್ದಗಳನ್ನು ಬಳಸಿದ್ದರು ಎಂದು ಅಮೀನ ಹೇಳಿದ್ದಾರೆ. ಸ್ವತಃ ಅಮೀನ ಈ ಕಾರ್ಯಕ್ರಮದ ಬಲಿಪಶುವಾಗಿದ್ದರು.

ಅಮೀನ ದೂರು ನೀಡಿದ ಮತ್ತು ಇತರ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಟೀಕೆಗಳ ಬಳಿಕ ಈ ಖಾತೆಗಳನ್ನು ಡಿಲಿಟ್ ಮಾಡಲಾಗಿದೆ ಇಲ್ಲವೇ ಹೆಸರುಗಳನ್ನು ಬದಲಿಸಲಾಗಿದೆ.
ಅಮೀನ ದೂರಿನ ಬಗ್ಗೆ ಪ್ರತಿಕ್ರಿಯೆಗಾಗಿ ಸುದ್ದಿಸಂಸ್ಥೆಯು ದಿಲ್ಲಿ ಪೊಲೀಸ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಚಿನ್ಮಯ ಬಿಸ್ವಾಲ್ ಅವರನ್ನು ಸಂಪರ್ಕಿಸಿದ್ದು, ತನಗೆ ಈ ಪ್ರಕರಣದ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಅವರು ತಿಳಿಸಿದ್ದಾರೆ.

ನೈರುತ್ಯ ದಿಲ್ಲಿ ಜಿಲ್ಲೆಯಲ್ಲಿ ತಾನು ದೂರು ಸಲ್ಲಿಸಿರುವುದಾಗಿ ಅಮೀನ ಹೇಳಿದ್ದು, ದೂರು ತಮಗೆ ಅಧಿಕೃತವಾಗಿ ವರ್ಗಾವಣೆಗೊಂಡ ಬಳಿಕ ವಿಧ್ಯುಕ್ತ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸುವುದಾಗಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು. ಆನ್ಲೈನ್ ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದರೆ ಅದು ಸಂಬಂಧಿತ ಜಿಲ್ಲೆಯನ್ನು ತಲುಪಲು ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತದೆ ಎಂದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X