Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಕೋವಿಡ್‌ ನಿಯಂತ್ರಿಸಲು...

ಉತ್ತರಪ್ರದೇಶ: ಕೋವಿಡ್‌ ನಿಯಂತ್ರಿಸಲು ಸರಕಾರ ವಿಫಲವಾಗಿದೆ ಎಂದು ದೂರಿದ್ದ ಮಾಜಿ ಗ್ರಾಮ ಪ್ರಧಾನನ ವಿರುದ್ಧ ಕೇಸು ದಾಖಲು

ವಾರ್ತಾಭಾರತಿವಾರ್ತಾಭಾರತಿ19 May 2021 9:34 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉತ್ತರಪ್ರದೇಶ: ಕೋವಿಡ್‌ ನಿಯಂತ್ರಿಸಲು ಸರಕಾರ ವಿಫಲವಾಗಿದೆ ಎಂದು ದೂರಿದ್ದ ಮಾಜಿ ಗ್ರಾಮ ಪ್ರಧಾನನ ವಿರುದ್ಧ ಕೇಸು ದಾಖಲು

ಲಕ್ನೋ: ಕೋವಿಡ್ ಸ್ಥಿತಿಗತಿ ಕುರಿತು ಮಾದ್ಯಮಗಳಿಗೆ ಸುಳ್ಳು ಮಾಹಿತಿ ನೀಡಿದ ಹಾಗೂ ಸರಕಾರದ ವರ್ಚಸ್ಸಿಗೆ ಧಕ್ಕೆ ತರುವ ರೀತಿಯಲ್ಲಿ ವದಂತಿಗಳನ್ನು ಹಬ್ಬಿದ ಆರೋಪದ ಮೇಲೆ ಉತ್ತರ ಪ್ರದೇಶದ ಗೆವ್ಲಾ ಗೋಪಾಲಘರ್ ಗ್ರಾಮದ ಮಾಜಿ ಪ್ರಧಾನರೊಬ್ಬರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಈ ಗ್ರಾಮದಲ್ಲಿ ಕಹಿಬೇವಿನ ಮರದಡಿಯಲ್ಲಿ ಮಂಚಗಳಲ್ಲಿ 19 ಕೋವಿಡ್ ಸೋಂಕಿತರು  ಮಲಗಿರುವುದು ಹಾಗೂ ಗ್ಲುಕೋಸ್ ಡ್ರಿಪ್ಸ್ ನಳಿಕೆ ಮರದ ಕೊಂಬೆಗಳಲ್ಲಿ ನೇತಾಡುತ್ತಿರುವ ಕುರಿತಂತೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆಸ್ಪತ್ರೆಯಲ್ಲಿ ಬೆಡ್ ದೊರಕದೇ ಇದ್ದ ಈ ಸೋಂಕಿತರು ಮರದಡಿಯಲ್ಲಿ ಮಲಗಿದಲ್ಲಿ ತಮ್ಮ ರಕ್ತದಲ್ಲಿನ ಆಕ್ಸಿಜನ್ ಮಟ್ಟ ಏರಬಹುದೆಂಬ ನಂಬಿಕೆಯಿಂದ ಈ ರೀತಿ ಮಾಡಿದ್ದರು.

ರಾಜ್ಯದಲ್ಲಿ ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳ ನಂತರ ಬಹಳಷ್ಟು ಜನರು ಅಸೌಖ್ಯಪೀಡಿತರಾಗಿದ್ದಾರೆ. ಕೆಮ್ಮು ಅಥವಾ ಜ್ವರದಿಂದ ಬಳಲದೇ ಇರುವವರು ಇರುವ ಒಂದೇ ಒಂದು ಮನೆಯಿಲ್ಲ. ಪರೀಕ್ಷೆ ನಡೆಸಿ ಸೂಕ್ತ ವೈದ್ಯಕೀಯ ಸವಲತ್ತುಗಳನ್ನು ಒದಗಿಸಲು ಸರಕಾರ ವಿಫಲವಾಗಿದೆ, ಜನರು ನಿಸ್ಸಹಾಯಕರಾಗಿದ್ದಾರೆ, ಕೋವಿಡ್‍ನ ತೀವ್ರ ಲಕ್ಷಣಗಳನ್ನು ಹೊಂದಿರುವವರಿಗೂ ಆಸ್ಪತ್ರೆಗಳು ದಾಖಲಿಸಲು ನಿರಾಕರಿಸುತ್ತಿವೆ ಎಂದು  ಮಾಜಿ ಪ್ರಧಾನ ಯೋಗೇಶ್ ತಲನ್  ಆರೋಪಿಸಿದ್ದರು.

ಆದರೆ ಸ್ಥಳೀಯಾಡಳಿತ ಮಾತ್ರ ಗ್ರಾಮದಲ್ಲಿ ಎರಡು ಕೋವಿಡ್ ಪರೀಕ್ಷಾ ಶಿಬಿರಗಳನ್ನು ಮೇ 13ರಂದು ನಡೆಸಲಾಗಿತ್ತು ಹಾಗೂ ತಲನ್ ಅವರು ಗ್ರಾಮಸ್ಥರಿಗೆ ಈ ಕುರಿತು ಸೂಕ್ತ ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಿದೆ.

ಗ್ರಾಮದ ಇನ್ನೊಬ್ಬ ನಿವಾಸಿ 65 ವರ್ಷದ ಹರ್ವೀರ್ ತಲನ್ ಎಂಬಾತನಿಗೆ ಕೋವಿಡ್ ಸೋಂಕಿನ ತೀವ್ರ ಲಕ್ಷಣಗಳಿರುವ ಹೊರತಾಗಿಯೂ ಹಾಗೂ ಆಸ್ಪತ್ರೆಯಲ್ಲಿ ದಾಖಲಾತಿ ಸಾಧ್ಯವಿದ್ದರೂ ಆತ ನಿರಾಕರಿಸಿದ್ದ, ಆತನ ಕುಟುಂಬವನ್ನು  ಯೋಗೇಶ್ ತಪ್ಪು ದಾರಿಗೆಳೆದಿದ್ದೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ದೂರಿದ್ದಾರೆ.

ಯೋಗೇಶ್ ತಲನ್ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯಿದೆ ಹಾಗೂ ಐಪಿಸಿ ಸೆಕ್ಷನ್ 269 ಹಾಗೂ 270 ಅನ್ವಯ ಪ್ರಕರಣ ದಾಖಲಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X